ಐಟಿ ದಾಳಿಗೆ ಮುನ್ನ ಅನುಮತಿ ಬೇಕಿತ್ತೆ? ಬೇಡ್ವೇಬೇಡ!
ಚೆನ್ನೈ, ಡಿಸೆಂಬರ್ 21 : ತಮಿಳುನಾಡಿನ ಪ್ರಧಾನ ಕಾರ್ಯದರ್ಶಿ ರಾಮ್ ಮೋಹನ್ ರಾಯ್ ಅವರ ಕಚೇರಿ ಮತ್ತು ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ ನಂತರ ಉದ್ಭವವಾಗಿರುವ ಪ್ರಶ್ನೆಯೆಂದರೆ, ಹೀಗೆ ದಾಳಿ ನಡೆಸುವ ಮುನ್ನ ಅನುಮತಿ ಐಟಿ ಇಲಾಖೆಗೆ ಸಿಕ್ಕಿತ್ತೆ?
ಯಾವುದೇ ಹಿರಿಯ ಸರಕಾರಿ ಅಧಿಕಾರಿಯ ವಿರುದ್ಧ ತನಿಖೆ ನಡೆಸುವ ಮುನ್ನ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದಿರಬೇಕು ಎಂಬ ಕಾನೂನು ಭ್ರಷ್ಟಾಚಾರ ನಿಗ್ರಹ ಕಾನೂನಿನಡಿ ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ 2014ರಲ್ಲಿ ತೀರ್ಪು ನೀಡಿತ್ತು.[ತಮಿಳುನಾಡಿನ ಮುಖ್ಯ ಕಾರ್ಯದರ್ಶಿ ಮನೆ ಮೇಲೆ ಐಟಿ ದಾಳಿ]
ಅಂದಿನ ಮುಖ್ಯ ನ್ಯಾಯಮೂರ್ತಿ ಆರ್ ಎಂ ಲೋಧಾ, ನ್ಯಾ. ಎಕೆ ಪಟ್ನಾಯಿಕ್, ನ್ಯಾ. ಎಸ್ ಜೆ ಮುಖ್ಯೋಪಾಧ್ಯಾಯ, ನ್ಯಾ. ದೀಪಕ್ ಮಿಶ್ರಾ ಮತ್ತು ನ್ಯಾ. ಇಬ್ರಾಹಿಂ ಖಲೀಫುಲ್ಲಾ ಅವರಿದ್ದ ಪೂರ್ಣಪೀಠ, ಜಂಟಿ ಕಾರ್ಯದರ್ಶಿ ಮತ್ತು ಹಿರಿಯ ಅಧಿಕಾರಿಗಳನ್ನು ಪ್ರಾಥಮಿಕ ವಿಚಾರಣೆಯಿಂದಲೂ ರಕ್ಷಣೆ ನೀಡುವ ದೆಹಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಶ್ಮೆಂಟ್ ಆ್ಯಕ್ಟ್ ಸಂವಿಧಾನದ 14ನೇ ಅನುಚ್ಛೇದವನ್ನು ಉಲ್ಲಂಘಿಸುತ್ತದೆ ಎಂದು ತೀರ್ಪು ನೀಡಿತ್ತು.
ಭ್ರಷ್ಟಾಚಾರವೆಂಬುದು ದೇಶದ ಶತ್ರುವಿದ್ದಂತೆ. ಭ್ರಷ್ಟಾಚಾರದಲ್ಲಿ ವ್ಯಕ್ತಿ ಎಷ್ಟೇ ದೊಡ್ಡವನಿರಲಿ, ಎಷ್ಟೇ ದೊಡ್ಡ ಹುದ್ದೆ ಅಲಂಕರಿಸಲಿ, ಅಂಥವನನ್ನು ಶಿಕ್ಷಿಸುವುದು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಶಿಕ್ಷಿಸಲೇಬೇಕು ಎಂದು ಸುಪ್ರೀಂಕೋರ್ಟ್ ಪೀಠ ಆದೇಶ ಹೊರಡಿಸಿತ್ತು.

ಅಮಿತ್ ಶಾ ಮೇಲೆ ಐಟಿ ದಾಳಿ ಏಕಿಲ್ಲ?
ತಮಿಳುನಾಡಿನ ಪ್ರಧಾನ ಕಾರ್ಯದರ್ಶಿಯ ಕಚೇರಿ ಮತ್ತು ಮನೆಯ ಮೇಲೆ ಐಟಿ ಇಲಾಖೆ ದಾಳಿ ನಡೆಸಿರುವುದು ಅನೈತಿಕ ಮತ್ತು ತಾಂತ್ರಿಕವಾಗಿ ದೋಷಯುಕ್ತವಾದದ್ದು ಎಂದು ಕಿಡಿ ಕಾರಿದ್ದಾರೆ. ಹಣವನ್ನು ಕೂಡಿಹಾಕುತ್ತಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೇಲೆ ಐಟಿ ದಾಳಿ ಏಕೆ ಆಗಬಾರದು ಎಂದೂ ಖಾರವಾಗಿ ಪ್ರಶ್ನಿಸಿದ್ದಾರೆ.

ಡಿಎಂಕೆ ಮುಖಂಡ ಎಂಕೆ ಸ್ಟಾಲಿನ್ ಪ್ರತಿಕ್ರಿಯೆ
ರಾಮ್ ಮೋಹನ್ ರಾಯ್ ಅವರ ಮೇಲೆ ಐಟಿ ದಾಳಿ ನಡೆದಿರುವುದು ತಮಿಳುನಾಡಿಗೆ ಕಳಂಕ ತಂದಂತೆ ಎಂದು ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ನಾಯಕ ಎಂಕೆ ಸ್ಟಾಲಿನ್ ಅವರು ಪ್ರತಿಕ್ರಿಯಿಸಿದ್ದಾರೆ. ಮೊಟ್ಟಮೊದಲ ಬಾರಿಗೆ ಪ್ರಧಾನ ಕಾರ್ಯದರ್ಶಿಯ ಮೇಲೆ ಇಂಥ ದಾಳಿ ನಡೆದಿದೆ. ಇದು ನಿಜಕ್ಕೂ ಖೇದಕರ ಎಂದಿದ್ದಾರೆ.

ಬೆಂಗಳೂರಿನಲ್ಲಿಯೂ ದಾಳಿ
ಆದಾಯ ತೆರಿಗೆ ಇಲಾಖೆಯ 10ಕ್ಕೂ ಹೆಚ್ಚು ತಂಡಗಳು ಚೆನ್ನೈ, ಬೆಂಗಳೂರು, ಚಿತ್ತೂರು ಮುಂತಾದವುಗಳಲ್ಲಿ ದಾಳಿ ನಡೆಸಿದೆ. ಶೇಖರ್ ರೆಡ್ಡಿ ಮೇಲೆ ದಾಳಿ ನಡೆಸಿದ ನಂತರ ಸಿಕ್ಕ ಸುಳಿವುಗಳ ಆಧಾರದ ಮೇಲೆ ಬೆಂಗಳೂರು, ಚೆನ್ನೈ ಮತ್ತು ಆಂಧ್ರಪ್ರದೇಶದಲ್ಲಿ ದಾಳಿ ನಡೆಸಲಾಗುತ್ತಿದೆ.

ಕಾರ್ಯದರ್ಶಿ ಮನೆಗೆ ಭಾರೀ ಭದ್ರತೆ
ಚೆನ್ನೈನಲ್ಲಿ ಎಲ್ಲೆಲ್ಲಿ ದಾಳಿ ನಡೆಯುತ್ತಿದೆಯೇ ಅಲ್ಲೆಲ್ಲ ಭದ್ರತೆಯ ದೃಷ್ಟಿಯಿಂದ ಸಿಆರ್ಪಿಎಫ್ ತುಕುಡಿಗಳನ್ನು ನಿಯೋಜಿಸಲಾಗಿದೆ. ಪ್ರಧಾನ ಕಾರ್ಯದರ್ಶಿ ರಾಮ್ ಮೋಹನ್ ರಾಯ್ ಅವರ ಮನೆಯ ಮೇಲೆ ಬೆಳಿಗ್ಗೆ 5.30ರಿಂದಲೇ ದಾಳಿ ಆರಂಭಿಸಲಾಗಿದೆ.

ಪನ್ನೀರ್ ತುರ್ತು ಸಂಪುಟ ಸಭೆ
ಈ ದಾಳಿ ನಡೆಯುತ್ತಿದ್ದಂತೆ ಗಡಗಡಿಸುತ್ತಿರುವ ಓ ಪನ್ನೀರ್ ಸೆಲ್ವಂ ಅವರ ಸರಕಾರ ಸಂಪುಟ ಸಚಿವರ ತುರ್ತು ಸಭೆ ಕರೆದಿತ್ತು. ಕೋಲ್ಕತಾದಲ್ಲಿ ಐಟಿ ದಾಳಿ ನಡೆದಾಗ ಸೇನೆಯನ್ನು ಕರೆಸಿದಾಗ, ಮಮತಾ ಬ್ಯಾನರ್ಜಿ ಭಾರೀ ಹುಯಿಲೆಬ್ಬಿಸಿದ್ದರು. ಸೇನೆ ಸರಕಾರವನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications