ರಜನಿ ಎರಡನೇ ಮಗಳು ಸೌಂದರ್ಯಾ ವಿಚ್ಛೇದನದ ಸುದ್ದಿ ನಿಜವಾ?
ಚೆನ್ನೈ, ಸೆಪ್ಟೆಂಬರ್ 16: ಸೂಪರ್ ಸ್ಟಾರ್ ರಜನಿಕಾಂತ್ ಎರಡನೇ ಮಗಳು ಸೌಂದರ್ಯಾ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ರಜನಿಕಾಂತ್ ಮಗಳನ್ನು ಸಮಾಧಾನದಿಂದ ಇರುವಂತೆ ಹೇಳಿದರೂ ಪ್ರಯೋಜನ ಆಗ್ತಿಲ್ಲ ಎಂಬ ಸುದ್ದಿ ದಿಢೀರನೇ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಈ ಬಗ್ಗೆ ಚರ್ಚೆ ಚಾಲ್ತಿಯಲ್ಲಿದೆ.
ಇದು ಕೇವಲ ವದಂತಿಯಷ್ಟೇ, ಡೈವೋರ್ಸ್ ಗೇನೂ ಅರ್ಜಿ ಹಾಕಿಲ್ಲ ಎನ್ನುತ್ತವೆ ವಿವಿಧ ಮೂಲಗಳು. ರಜನಿಕಾಂತ್ ಕುಟುಂಬ ವಲಯದಿಂದ ಮಾತ್ರ ಈ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಚೆನ್ನೈ ಮೂಲದ ಕೈಗಾರಿಕೋದ್ಯಮಿ ಅಶ್ವಿನ್ ಜೊತೆಗೆ 2010ರಲ್ಲಿ ಸೌಂದರ್ಯಾ ಮದುವೆಯಾಗಿತ್ತು.[ರಜನಿ ಸೋದರಳಿಯನ ಸಾಂಗ್ ಯೂಟ್ಯೂಬಿನಲ್ಲಿ ರಿಲೀಸ್]

ಅದರೆ ಕೆಲ ಮೂಲಗಳ ಪ್ರಕಾರ ಈ ಜೋಡಿ ಡೈವೋರ್ಸ್ ಗಾಗಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿವೆ. ಇತ್ತೀಚೆಗೆ ಗಂಡ-ಹೆಂಡತಿ ಮಧ್ಯೆ ವಿರಸ ಏರ್ಪಟ್ಟಿತ್ತು. ಆ ಕಾರಣಕ್ಕೆ ಸಂಬಂಧ ಕೊನೆಗೊಳಿಸಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಅದಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಅಮೆರಿಕಾದಿಂದ ಮರಳಿದ ನಂತರ ಮಗಳ ಕುಟುಂಬ ಸರಿಪಡಿಸಲು ಕೆಲ ದಿನ ಮಗಳ ಜತೆಗೆ ಉಳಿದಿದ್ದರಂತೆ. ಅಶ್ವಿನ್ ಜತೆಗಿನ ಭಿನ್ನಾಭಿಪ್ರಾಯವನ್ನು ಮಾತುಕತೆ ಮೂಲಕ ಸರಿಪಡಿಸಿಕೊಳ್ಳುವಂತೆ ಕೂಡ ಸೂಚಿಸಿದ್ದರಂತೆ.[ಚಿತ್ರಗಳಲ್ಲಿ: ರಜನಿ ಕಬಾಲಿ ಹವಾ, ಸಂಸತ್ ಅಧಿವೇಶನ]
ಈ ಬಗ್ಗೆ ಅಶ್ವಿನ್ ರನ್ನು ಮಾಧ್ಯಮಗಳು ಪ್ರಶ್ನಿಸಿದಾಗ ಯಾವುದೇ ಉತ್ತರ ನೀಡಿಲ್ಲ. ಆ ಕಾರಣಕ್ಕೆ ಅನುಮಾನಕ್ಕೆ ರೆಕ್ಕೆ-ಪುಕ್ಕ ಬಂದಿದೆ. ಸೌಂದರ್ಯಾ ಗ್ರಾಫಿಕ್ ಡಿಸೈನರ್ ಆಗಿ ಗುರುತಿಸಿಕೊಂಡವರು. ರಜನಿಕಾಂತ್ ಅಭಿನಯದ ಕೊಚಾಡಿಯನ್ ಮೋಷನ್ ಕ್ಯಾಪ್ಚರ್ ಸಿನಿಮಾ ನಿರ್ದೇಶಿಸಿದ್ದರು. ಸೌಂದರ್ಯಾ ಹಾಗೂ ಅಶ್ವಿನ್ ದಂಪತಿಗೆ ಒಂದು ಗಂಡು ಮಗುವಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications