'ಕಾವೇರಿ'ದ ಹೋರಾಟ: ಪೊಲೀಸರ ಮೇಲಿನ ದಾಳಿ ಖಂಡನೀಯ ಎಂದ ರಜನಿ

Recommended Video

      ಚೆನ್ನೈ ನಲ್ಲಿ ಕಾವೇರಿಗಾಗಿ ನಡೆಯುತ್ತಿರುವ ಹೋರಾಟದ ಬಗ್ಗೆ ಮಾತನಾಡಿದ ರಜಿನಿಕಾಂತ್ | Oneindia Kannada

      ಚೆನ್ನೈ, ಏಪ್ರಿಲ್ 11: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡಿನಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಮಂಗಳವಾರ ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದ ಹೊರಗೆ ನಡೆದ ಘರ್ಷಣೆಯಲ್ಲಿ ಪೊಲೀಸರ ಮೇಲೆ ಪ್ರತಿಭಟನಾಕಾರರು ಹಲ್ಲೆ ನಡೆಸಿದ್ದಾರೆ.

      ಇದೂ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು ಘಟನೆಯನ್ನು ತಮಿಳು ಸೂಪರಸ್ಟಾರ್ ರಜನಿಕಾಂತ್ ಟ್ಟಿಟ್ಟರ್ ನಲ್ಲಿ ಖಂಡಿಸಿದ್ದಾರೆ.

      "ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಕೆಟ್ಟ ಮುಖ ಎಂದರೆ ಕರ್ತವ್ಯದಲ್ಲಿರುವ ಸಮವಸ್ತ್ರಧಾರಿ ಪೊಲೀಸರ ಮೇಲೆ ಹಲ್ಲೆ ನಡೆಸುವುದು. ಈ ರೀತಿಯ ಹಿಂಸಾಚಾರವು ನಮ್ಮ ದೇಶಕ್ಕೆ ತೀವ್ರ ಅಪಾಯವನ್ನು ಉಂಟು ಮಾಡುತ್ತದೆ. ಇದನ್ನು ತಕ್ಷಣವೇ ನಿಭಾಯಿಸಬೇಕಾಗಿದೆ. ಪೊಲೀಸ್ ಸಿಬ್ಬಂದಿ ಮೇಲೆ ದಾಳಿಯ ಅಪರಾಧಿಯನ್ನು ಶಿಕ್ಷಿಸಲು ನಮಗೆ ಹೆಚ್ಚು ಕಟ್ಟುನಿಟ್ಟಿನ ಕಾನೂನು ಬೇಕು," ಎಂದು ರಜನಿಕಾಂತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

      ಹಾಗೆ ನೋಡಿದರೆ ಇಂಥಹದ್ದೊಂದು ಘಟನೆಗೆ ರಜನಿಕಾಂತ್ ರೆ ಪರೋಕ್ಷ ಕಾರಣವಾಗಿದ್ದಾರೆ. ಕಾವೇರಿ ಹೋರಾಟದ ಹಿನ್ನಲೆಯಲ್ಲಿ ಪ್ರತಿಭಟನೆಗೆ ಇಳಿದಿದ್ದ ರಜನಿಕಾಂತ್ ಚೆನ್ನೈನಲ್ಲಿ ಐಪಿಎಲ್ ಪಂದ್ಯಗಳು ನಡೆಯಬಾರದು ಎಂದು ಗುಡುಗಿದ್ದರು. ನಂತರ ಕಪ್ಪು ಪಟ್ಟಿ ಧರಿಸಿ ಆಡಬೇಕು ಎಂದು ಹೇಳಿದ್ದರು.

      Rajini says attack on police is un acceptable

      ಇದನ್ನೇ ಸೂಚನೆಯಂತೆ ಪರಿಗಣಿಸಿದ ತಮಿಳಿಗರು ಮಂಗಳವಾರ ಇಲ್ಲಿನ ಸ್ಟೇಡಿಯಂ ಸುತ್ತ ಪ್ರತಿಭಟನೆಗೆ ಇಳಿದಿದ್ದರು. ಈ ವೇಳೆ ಚಪ್ಪಲಿ ಮತ್ತು ಕಲ್ಲು ತೂರಾಟಕ್ಕೆ ಯತ್ನಿಸಿದ್ದರು. ಇವರನ್ನು ಚದುರಿಸಲು ಪೊಲೀಸರು ಮುಂದಾದಾಗ ಘರ್ಷಣೆ ಸಂಭವಿಸಿತ್ತು.

      ಈ ಸಂದರ್ಭ ಹೋರಾಟಗಾರರು ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದರು. ಈ ಸಂಬಂಧ 21 ನಾಮ್ ತಮಿಲರ್ ಕಚ್ಚಿ ಕಾರ್ಯಕರ್ತರನ್ನು ಬಂಧಿಸಿ ಪುಝಲ್ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+