ಜಯಲಲಿತಾ 'ಕೊಹಿನೂರ್ ವಜ್ರ': ರಜನಿಕಾಂತ್
ಚೆನ್ನೈ, ಡಿಸೆಂಬರ್ 12: ಪುರುಷ ಪ್ರಧಾನ ಸಮಾಜದ ಎಲ್ಲ ತೊಂದರೆಗಳನ್ನು ಮೀರಿ ಬೆಳೆದಿದ್ದ ಜಯಲಲಿತಾ ಅವರು 'ಕೊಹಿನೂರು ವಜ್ರದ ಥರ' ಎಂದು ಸೂಪರ್ ಸ್ಟಾರ್ ರಜನಿಕಾಂತ್ ಭಾನುವಾರ ಬಣ್ಣಿಸಿದ್ದಾರೆ. ದಕ್ಷಿಣ ಭಾರತ ಕಲಾವಿದರ ಒಕ್ಕೂಟ ಭಾನುವಾರ ಆಯೋಜಿಸಿದ್ದ ಜಯಲಲಿತಾ ಹಾಗೂ ಚೋ ರಾಮಸ್ವಾಮಿ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.
1996ರ ತಮಿಳುನಾಡು ವಿಧಾನಸಭೆ ಚುನಾವಣೆ ವೇಳೆ ನಾನು ನೀಡಿದ್ದ ಹೇಳಿಕೆಯಿಂದ ಅವರಿಗೆ ನೋವಾಗಿತ್ತು. "ನಾನು ಆಕೆಗೆ ನೋವು ಮಾಡಿದ್ದೆ. ಅವರ ಪಕ್ಷ ಸೋಲುವುದಕ್ಕೆ ಮುಖ್ಯ ಕಾರಣನಾಗಿದ್ದೆ" ಎಂದು ಎಐಎಡಿಎಂಕೆ ಸರಕಾರದ ವಿರುದ್ಧದ ತಮ್ಮ ಹೇಳಿಕೆಯನ್ನು ಪ್ರಸ್ತಾವಿಸಿದರು.[ದುಬಾರಿ ವಜ್ರ 'ಕೊಹಿನೂರು' ಏನಿದರ ತಕರಾರು]
ಆ ಚುನಾವಣೆ ವೇಳೆ ರಜನಿ, ಜಯಲಲಿತಾ ಅವರ ಎಐಎಡಿಎಂಕೆ ಮತ್ತೆ ಅಧಿಕಾರಕ್ಕೆ ಬಂದರೆ ಆ ದೇವರು ಕೂಡ ತಮಿಳುನಾಡನ್ನು ಕಾಪಾಡಲಾರ ಎಂಬ ಹೇಳಿಕೆ ನೀಡಿದ್ದರು. ಆ ಸಲ ಡಿಎಂಕೆ ಹಾಗೂ ತಮಿಳ್ ಮಾನಿಲ ಕಾಂಗ್ರೆಸ್ ಒಟ್ಟಾಗಿ, ಆಡಳಿತ ವಿರೋಧಿ ಅಲೆಯಲ್ಲಿ ಅಭೂತಪೂರ್ವವಾದ ಗೆಲುವು ಸಾಧಿಸಿದ್ದವು.

ಆದರೆ, ಆ ಘಟನೆ ನಂತರ ಜಯಲಲಿತಾ ತಾವೇನು ಅನ್ನೋದನ್ನು ಸಾಬೀತು ಮಾಡಿದರು. ಆಕೆ ನಾಯಕಿಯಾಗಿ ಚಿನ್ನದಂಥ ಹೃದಯ ಇರುವವರಾಗಿದ್ದರು ಎಂದು ರಜನಿ ಹೇಳಿದರು. ಎಂಜಿಆರ್ ಅವರ ನಿಧನದ ನಂತರ ಪಕ್ಷ ನಡೆಸುವುದು ಸುಲಭ ಇರಲಿಲ್ಲ. ಅದರೆ ಜಯಲಲಿತಾ ತಮ್ಮ ಗುರುಗಳನ್ನು ಮೀರಿಸಿದ ಸಾಧನೆ ಮಾಡಿದರು ಎಂದು ಹೇಳಿದರು.[ಖ್ಯಾತ ಅಂಕಣಕಾರ, ಜಯಾ ಹಿತೈಷಿ ಚೋ ರಾಮಸ್ವಾಮಿ ಇನ್ನಿಲ್ಲ]
ಎಅರಡನೇ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡು, ಇಪ್ಪತ್ತು ವರ್ಷದ ನಂತರ ತಾಯಿಯನ್ನು ಕಳೆದುಕೊಂಡು, ಆಕೆ ಅನೇಕ ಸಮಸ್ಯೆಗಳನ್ನು ಎದುರಿಸಿದರು. 'ಎಂಜಿಆರ್ ಸ್ಮಾರಕದ ಬಳಿ ಕೊಹಿನೂರ್ ವಜ್ರದ ರೀತಿ ಜಯಲಲಿತಾ ವಿರಮಿಸಿದ್ದಾರೆ. ಜನರ ಪ್ರೀತಿ ಮತ್ತು ಅಂತಃಕರಣವನ್ನು ಪಡೆಯುತ್ತಿದ್ದಾರೆ' ಎಂದು ರಜನಿ ಹೊಗಳಿದರು.
ಸೆಪ್ಟೆಂಬರ್ 22ರಂದು ಅನಾರೋಗ್ಯದಿಂದ್ ಆಸ್ಪತ್ರೆ ಸೇರಿದ್ದ ಜಯಲಲಿತಾ, ಡಿಸೆಂಬರ್ 4ರಂದು ಹೃದಯ ಸ್ಥಂಭನವಾಗಿತ್ತು. ಮರುದಿನ ನಿಧನರಾದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications