ಕಬಾಲಿಗೆ ಪೈರಸಿ ಭೀತಿ, ಹೈಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ
ಚೆನ್ನೈ, ಜುಲೈ 14: 'ಉಡ್ತಾ ಪಂಜಾಬ್', 'ಗ್ರೇಟ್ ಗ್ರ್ಯಾಂಡ್ ಮಸ್ತಿ' ಹಾಗೂ 'ಸುಲ್ತಾನ್' ಚಿತ್ರಗಳು ಬಿಡುಗಡೆಗೆ ಮುನ್ನ ಆನ್ ಲೈನ್ ನಲ್ಲಿ ಸೋರಿಕೆಯಾಗಿದ್ದು ತಿಳಿದಿರಬಹುದು. ಈಗ ರಜನಿಕಾಂತ್ ಅವರ ಕಬಾಲಿ ಚಿತ್ರಕ್ಕೂ ಪೈರಸಿ ಭೀತಿ ಕಾಡುತ್ತಿದೆ. ಈ ನಿಟ್ಟಿನಲ್ಲಿ ಸುರಕ್ಷತೆ ಕೋರಿ ಚಿತ್ರದ ನಿರ್ಮಾಪಕರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕಬಾಲಿ ಕೂಡಾ ಆನ್ ಲೈನ್ನಲ್ಲಿ ಲೀಕ್ ಆಗಿದೆ ಎಂಬ ಸುದ್ದಿ ಹಬ್ಬಿದೆ. ಸುಮಾರು 180 ವೆಬ್ ಸೈಟ್ ಗಳಲ್ಲಿ ಪೈರಸಿ ಲಿಂಕ್ ಕಂಡು ಬಂದಿದ್ದು, ಇಲ್ಲಿಂದ ಲೆಕ್ಕಕ್ಕೆ ಸಿಗದಷ್ಟು ಡೌನ್ ಲೋಡ್ ಲಿಂಕ್ ಗಳು ಉತ್ಪತ್ತಿಯಾಗುವ ಭೀತಿ ಇದೆ. ಹೀಗಾಗಿ ಕೂಡಲೇ ಈ ವೆಬ್ ಸೈಟ್ ಹಾಗೂ ಲಿಂಕ್ ಗಳನ್ನು ಕಿತ್ತು ಹಾಕಲು ಕ್ರಮ ಜರುಗಿಸುವಂತೆ ಕೋರಿ ಚೆನ್ನೈ ಹೈಕೋರ್ಟ್ ಗೆ ನಿರ್ಮಾಪಕ ಎಸ್ ಧನು ಅರ್ಜಿ ಸಲ್ಲಿಸಿದ್ದಾರೆ. [ಉಡ್ತಾ ಪಂಜಾಬ್ 700ಪ್ಲಸ್ ವೆಬ್ ಸೈಟ್ ಗಳಲ್ಲಿ ರನ್ನಿಂಗ್]

ಜುಲೈ 22ರಂದು ದೇಶ-ವಿದೇಶದಲ್ಲಿ ಏಕಕಾಲದಲ್ಲಿ ತೆರೆಕಾಣಲು ಸಿದ್ಧವಾಗಿದೆ. ಯುಎಸ್ ನಲ್ಲಿ 400 ಸ್ಕ್ರೀನ್ ಗಳಲ್ಲಿ ತೆರೆ ಕಾಣಲಿದ್ದು 25 ಡಾಲರ್ ಬೆಲೆ ನಿಗದಿ ಮಾಡಲಾಗಿದೆ. ಇದಕ್ಕೂ ಮುನ್ನ ಚಿತ್ರ ಡೌನ್ ಲೋಡ್ ಆಗಲು ಆರಂಭವಾದರೆ ಭಾರಿ ನಷ್ಟವಾಗುತ್ತದೆ ಎಂದು ನಿರ್ಮಾಪಕರು ಹೇಳಿದ್ದಾರೆ.[ರಜನಿಗೆ SMS ಕಳುಹಿಸಲು ಏರ್ ಟೆಲ್ ನಿಂದ ವಿಶೇಷ ಕೂಪನ್]
ಈ ಬಗ್ಗೆ ಕ್ರಮ ಜರುಗಿಸುವಂತೆ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಗೆ ಸೂಚನೆ ನೀಡಬೇಕು ಎಂದೂ ಥನು ಮನವಿ ಮಾಡಿಕೊಂಡಿದ್ದಾರೆ.[ಅಂದಿನ ಬಸ್ ಕಂಡಕ್ಟರ್ ಇಂದು ವಿಮಾನದ ಮೇಲೆ ಜಾಹೀರಾತಾದ್ರು]
ಸುಮಾರು 200 ಕೋಟಿ ರು ವೆಚ್ಚದಲ್ಲಿ ನಿರ್ಮಿಸಲಾಗಿರುವ ಬಹುಭಾಷಾ ಚಿತ್ರ ಏನಾದರೂ ಆನ್ ಲೈನ್ ನಲ್ಲಿ ಸೋರಿಕೆಯಾದರೆ ಒಟ್ಟು ಆದಾಯದ ಶೇ 70ರಷ್ಟು ನಷ್ಟವಾಗಲಿದೆ ಎಂದಿದ್ದಾರೆ.['ಕಬಾಲಿ' ಸೆನ್ಸಾರ್ ಆಯ್ತು: ರಿಲೀಸ್ ಡೇಟ್ ಕೂಡ ಫಿಕ್ಸ್ ಆಯ್ತು.!]
ರಜನಿಕಾಂತ್ ಅಲ್ಲದೆ ರಾಧಿಕಾ ಆಪ್ಟೆ, ಕಿಶೋರ್, ಕಲೈರಾಸನ್, ದಿನೇಶ್, ಧನ್ಸಿಕಾ, ತೈವಾನಿನ ನಟ ವಿನ್ಸ್ಟನ್ ಚೋ ಚಿತ್ರದಲ್ಲಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications