ವೈದ್ಯಕೀಯ ಪರೀಕ್ಷೆಗೆ ಅಮೆರಿಕಕ್ಕೆ ತೆರಳಿದ ನಟ ರಜನೀಕಾಂತ್
ಚೆನ್ನೈ, ಜೂನ್ 29: ಕಾಲ ಕರಿಕಾಳನ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ತಮಿಳು ನಟ ರಜನೀಕಾಂತ್ ಗುರುವಾರ ಆರೋಗ್ಯ ತಪಾಸಣೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ ಎಂದು ಅವರಿಗೆ ಆಪ್ತವಾದ ಮೂಲಗಳು ತಿಳಿಸಿವೆ.
"ಅವರು (ಮುಂಬೈನಿಂದ ಅಮೆರಿಕಕ್ಕೆ) ತೆರಳಿರುವುದು ಮಾಮೂಲಿನ ಆರೋಗ್ಯ ತಪಾಸಣೆಗಾಗಿ" ಎಂದು ಮೂಲಗಳು ಮಾಹಿತಿ ನೀಡಿವೆ. ಪಾ ರಂಜಿತ್ ನಿರ್ದೇಶನದ ಕಾಲ ಕರಿಕಾಳನ್ ಸಿನಿಮಾದ ಚಿತ್ರೀಕರಣಕ್ಕಾಗಿ ರಜನೀಕಾಂತ್ ಕಳೆದ ವಾರ ಚೆನ್ನೈನಿಂದ ಮುಂಬೈಗೆ ತೆರಳಿದ್ದರು.

ರಾಜಕಾರಣಕ್ಕೆ ಪ್ರವೇಶಿಸುವ ಬಗ್ಗೆ ಚರ್ಚೆ ನಡೆಸುತ್ತಿದ್ದೇನೆ ಎಂದು ಸುಳಿವು ಬಿಟ್ಟುಕೊಟ್ಟಿದ್ದಾರೆ ರಜನೀಕಾಂತ್. "ನಾನು ಸುದ್ದಿಯನ್ನು ನಿರಾಕರಿಸುವುದಿಲ್ಲ. ಸದ್ಯಕ್ಕೆ ಚರ್ಚೆ ನಡೆಸುತ್ತಿದ್ದೇನೆ. ಆ ಬಗ್ಗೆ ಇನ್ನೂ ನಿರ್ಧಾರವನ್ನು ಕೈಗೊಂಡಿಲ್ಲ. ಒಂದು ಸಲ ನಿರ್ಧಾರ ಕೈಗೊಂಡ ನಂತರ ನಿಮಗೆ (ಮಾಧ್ಯಮಗಳಿಗೆ) ತಿಳಿಸುತ್ತೇನೆ" ಎಂದು ಅವರು ಹೇಳಿದ್ದರು.
ಕಳೆದ ಕೆಲವು ದಿನಗಳಿಂದ ಮುಂಬೈನಲ್ಲಿ ಕಾಲ ಕರಿಕಾಳನ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಕಳೆದ ಮೇನಲ್ಲಿ ರಜನೀಕಾಂತ್ ತಮ್ಮ ಅಭಿಮಾನಿಗಳನ್ನು ಭೇಟಿ ಮಾಡಿದ್ದರು. 'ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಿ' ಎಬ ಮಾತನ್ನು ಹೇಳುವ ಮೂಲಕ ರಾಜಕೀಯ ಪ್ರವೇಶದ ಸೂಚನೆ ನೀಡಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications