ನಾನು ಅಪ್ಪಟ್ಟ ತಮಿಳಿಗ : ಸ್ವಾಮಿಗೆ ತಿರುಗೇಟು ಕೊಟ್ಟ ರಜನಿ
ರಜನಿಗೆ ರಾಜಕೀಯದಲ್ಲಿ ಸೋಲು ಖಚಿತ ಎಂದು ಗೇಲಿ ಮಾಡಿದ್ದ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರಿಗೆ ಸೂಪರ್ ಸ್ಟಾರ್ ರಜನಿ ಅವರು ಶುಕ್ರವಾರದಂದು ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.
ಚೆನ್ನೈ, ಮೇ 19 :ರಜನಿಕಾಂತ್ ತಮಿಳು ಮೂಲದವನಲ್ಲ, ಬೆಂಗಳೂರು ಮೂಲದ ಮರಾಠಿಗ, ರಾಜಕೀಯವಾಗಿ ಯಾವುದೇ ಸಿದ್ಧಾಂತವನ್ನು ಪಾಲಿಸದ ಗೊಂದಲದ ಗೂಡಾಗಿರುವ ರಜನಿಗೆ ರಾಜಕೀಯದಲ್ಲಿ ಸೋಲು ಖಚಿತ ಎಂದು ಗೇಲಿ ಮಾಡಿದ್ದ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರಿಗೆ ಸೂಪರ್ ಸ್ಟಾರ್ ರಜನಿ ಅವರು ಶುಕ್ರವಾರದಂದು ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಕರ್ನಾಟಕದಲ್ಲಿ 23 ವರ್ಷಗಳ ಕಾಲ ಜೀವಿಸಿದ್ದೆ. ಈಗಲೂ ಅಲ್ಲಿನವರ ಜತೆ ಒಡನಾಟ ಹೊಂದಿದ್ದೇನೆ. ತಮಿಳುನಾಡಿನಲ್ಲಿ ಬದುಕು ಕಟ್ಟಿಕೊಂಡು ಜನಪ್ರೀತಿ ಗಳಿಸಿ 43 ವರ್ಷ ಜೀವಿಸಿದ್ದೇನೆ. ನಾನು ಅಪ್ಪಟ ತಮಿಳಿಗ ಎಂದು ಅಭಿಮಾನಗಳ ಮುಂದೆ ರಜನಿಕಾಂತ್ ಘೋಷಿಸಿದರು.

66 ವರ್ಷ ವಯಸ್ಸಿನ ರಜನಿಕಾಂತ್ ಗೆ ರಾಜಕೀಯದ ಗಂಧಗಾಳಿ ಗೊತ್ತಿಲ್ಲ. ಸರಿಯಾಗಿ ಯಾವುದೇ ಸಿದ್ಧಾಂತ ಪಾಲಿಸುತ್ತಿಲ್ಲ. ಮೇಲಾಗಿ ಆತ ಮೂಲ ತಮಿಳಿಗನಲ್ಲ, ಬೆಂಗಳೂರು ಮೂಲದ ಮರಾಠಿಗ, ದೇವರ ಇಚ್ಛೆ ಇದ್ದರೆ ರಾಜಕೀಯಕ್ಕೆ ಬರುವುದಾಗಿ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿರುವ ರಜನಿ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಸ್ವಾಮಿ ಹೇಳಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಜನಿ, ದೇವ ಇಚ್ಛೆ ಇದ್ದರೆ ಎಲ್ಲವೂ ನಡೆಯುತ್ತದೆ ಎಂದು ತಮ್ಮ ರಾಜಕೀಯ ಎಂಟ್ರಿ ಅರ್ಜಿಯನ್ನು ದೇವರ ಬಳಿಗೆ ಕಳಿಸಿದ್ದಾರೆ. ರಜನಿ ಅವರ ಆಪ್ತ ವಲಯದ ರಾಜ್ ಬಹದ್ದೂರ್, ನಟ ಶತ್ರುಘ್ನ ಸಿನ್ಹಾ ಕೂಡಾ ರಜನಿ ಅವರು ರಾಜಕೀಯಕ್ಕೆ ಬಂದರೆ ಒಳ್ಳೆಯದು ಎಂದಿದ್ದಾರೆ. ರಜನಿ ಮುಂದಿನ ನಡೆ ಹೇಗೋ ಏನೋ ಕಾದುನೋಡೋಣ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications