ತಮಿಳುನಾಡಿನ ಜನರಿಗಾಗಿ ಜೀವ ಕೊಡಲೂ ಸಿದ್ಧ: ರಜನಿಕಾಂತ್
ಚೆನ್ನೈ, ಡಿಸೆಂಬರ್ 3: ಹಲವು ದಶಕಗಳ ಊಹಾಪೋಹಗಳಿಗೆ ಅಂತ್ಯ ಹಾಡಿರುವ ನಟ ರಜನಿಕಾಂತ್, ಕೊನೆಗೂ ತಮ್ಮ ರಾಜಕೀಯ ಪಕ್ಷ ಸ್ಥಾಪನೆಯನ್ನು ಖಚಿಪಡಿಸಿದ್ದಾರೆ. 2021ರ ಜನವರಿಯಲ್ಲಿ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ, ಅದಕ್ಕೆ ಪೂರಕ ಪ್ರಕಟಣೆಯನ್ನು ಡಿ. 31ರಂದು ಹೊರಡಿಸುವುದಾಗಿ ತಿಳಿಸಿದ್ದಾರೆ.
'ತಮಿಳುನಾಡಿನಲ್ಲಿ ಬದಲಾವಣೆ ತರುವ ಸಲುವಾಗಿ ನಾನು ರಾಜಕೀಯಕ್ಕೆ ಬರಲು ನಿರ್ಧರಿಸಿದ್ದೇನೆ. ಈ ಯೋಜನೆಯಲ್ಲಿ ನಾನು ಸಣ್ಣ ಸಾಧನವಷ್ಟೇ. ನಾನು ಯಶಸ್ವಿಯಾದರೆ ಅದು ಜನರ ಯಶಸ್ಸಾಗಲಿದೆ. ನನ್ನ ಪ್ರಯತ್ನದಲ್ಲಿ ನಾನು ಸೋಲು ಕಂಡರೆ ಅದು ನಿಮ್ಮ ಸೋಲಾಗಲಿದೆ. ಈ ಪರಿವರ್ತನೆಯ ಪ್ರಯತ್ನದಲ್ಲಿ ನೀವು ನನ್ನ ಜತೆ ನಿಲ್ಲುವಂತೆ ಮನವಿ ಮಾಡುತ್ತೇನೆ. ಎಲ್ಲವನ್ನೂ ಪರಿವರ್ತನೆ ಮಾಡೋಣ. ಅದು ಈಗ ಸಾಧ್ಯವಾಗದಿದ್ದರೆ, ಎಂದಿಗೂ ಸಾಧ್ಯವಾಗಲಾರದು' ಎಂದು ರಜನಿ ಹೇಳಿದ್ದಾರೆ.
ಪೊಯೆಸ್ ಗಾರ್ಡನ್ನ ನಿವಾಸದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಜಿನಿ, ಪ್ರತಿಯೊಬ್ಬರಿಗೂ ಹಣೆಬರಹ ಎಂಬುದು ಇರುತ್ತದೆ. ಅದೇ ರೀತಿ ದೇಶಕ್ಕೂ ಹಣೆಬರಹ ಇರುತ್ತದೆ. ಹೀಗಾಗಿ ಈಗ ತಮಿಳುನಾಡಿನ ಹಣೆಬರಹವನ್ನು ಬದಲಿಸುವ ಸಮಯ. ಖಂಡಿತವಾಗಿಯೂ ತಮಿಳುನಾಡಿನ ರಕ್ಷಣೆ ಮತ್ತು ಅದರ ರಾಜಕೀಯ ಚಿತ್ರಣದಲ್ಲಿ ಬದಲಾವಣೆಯಾಗಲಿದೆ ಎಂದರು. ಮುಂದೆ ಓದಿ.

ಬಿಜೆಪಿ ಮುಖಂಡನ ನೆರವು
ರಜನಿಕಾಂತ್ ಅವರು ಬಿಜೆಪಿ ಕಡೆಗೆ ವಾಲುತ್ತಿದ್ದು, ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹ ಹರಡಿದ್ದವು. ಈಗ ರಜನಿಕಾಂತ್ ಅವರು ರಜನಿ ಮಕ್ಕಳ್ ಮಂಡ್ರಮ್ ಸಂಘಟನೆಯ ಮುಖ್ಯ ಸಂಯೋಜಕರನ್ನಾಗಿ ಬಿಜೆಪಿ ರಾಜ್ಯ ಬೌದ್ಧಿಕ ಘಟಕದ ಅಧ್ಯಕ್ಷರಾಗಿದ್ದ ರಾ. ಅರ್ಜುನ್ ಮೂರ್ತಿ ಅವರನ್ನು ನೇಮಿಸಿದ್ದಾರೆ. ತಮ್ಮ ರಾಜಕೀಯ ಪಕ್ಷದ ಸ್ಥಾಪನೆಯ ಪ್ರಯತ್ನಗಳನ್ನು ತಮಿಳರುವಿ ಮಣಿಯನ್ ಅವರು ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ರಜನಿ ತಿಳಿಸಿದ್ದಾರೆ.

ವೈದ್ಯರ ಸಲಹೆ
2021ರ ವಿಧಾನಸಭೆ ಚುನಾವಣೆಗೂ ಮುನ್ನ ತಮ್ಮ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಮತ್ತು 234 ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ 2017ರಲ್ಲಿ ತಾವು ಹೇಳಿದ್ದನ್ನು ನೆನಪಿಸಿಕೊಂಡ ರಜನಿ, ತಮಿಳುನಾಡಿನ ಜನರಲ್ಲಿ ವಿಮೋಚನೆಯ ಆಕಾಂಕ್ಷೆಯನ್ನು ಮೂಡಿಸಲು ತಾವು ರಾಜ್ಯದಾದ್ಯಂತ ಪ್ರವಾಸ ಮಾಡಬೇಕಿತ್ತು. ಆದರೆ ಕೊರೊನಾ ಸೋಂಕಿನ ಕಾರಣದಿಂದ ವೈದ್ಯರು ಪ್ರವಾಸ ಮಾಡದಂತೆ ಮತ್ತು ಜನರನ್ನು ಭೇಟಿಯಾಗದಂತೆ ಸೂಚಿಸಿದ್ದರಿಂದ ಅದು ಸಾಧ್ಯವಾಗಿಲ್ಲ ಎಂದರು.

ಜೀವ ನೀಡಲು ಸಿದ್ಧ
'ಸಿಂಗಪುರದಲ್ಲಿ ಚಿಕಿತ್ಸೆ ಪಡೆದ ಬಳಿಕ ನಾನು ತಮಿಳುನಾಡಿನ ಜನತೆಯ ಪ್ರಾರ್ಥನೆಯಿಂದಾಗಿ ಮಾತ್ರವೇ ಗುಣಮುಖನಾದೆ. ಹೀಗಾಗಿ ಅವರ ಸಲುವಾಗಿ ನಾನು ಜೀವವನ್ನು ನೀಡಲು ಸಂತೋಷ ಪಡುತ್ತೇನೆ. ತಮಿಳುನಾಡಿನ ಜನತೆಗೆ ನೀಡಿದ ಮಾತಿನಿಂದ ನಾನು ಹಂದೆ ಸರಿಯುವುದಿಲ್ಲ. ಇದು ಸಮಯದ ಅಗತ್ಯ ಮತ್ತು ಅದು ಈಡೇರಲೇಬೇಕು. ಅದು ಈಗ ಸಾಧ್ಯವಾಗದೆ ಹೋದರೆ ಎಂದೆಂದಿಗೂ ಸಾಧ್ಯವಾಗುವುದಿಲ್ಲ. ಎಲ್ಲವನ್ನೂ ಪರಿವರ್ತನೆ ಮಾಡೋಣ' ಎಂದು ರಜನಿ ಹೇಳಿದರು.
|
ಅನ್ನಾತೆ ಬಳಿಕ ರಾಜಕೀಯ ಯಾನ
ತಾವೀಗ 'ಅನ್ನಾತೆ' ಚಿತ್ರದ ಚಿತ್ರೀಕರಣ ಮುಗಿಸಬೇಕಿದ್ದು, ಬಳಿಕ ತಮ್ಮ ರಾಜಕೀಯ ಪಯಣವನ್ನು ಆರಂಭಿಸುವುದಾಗಿ ತಿಳಿಸಿದರು. ರಜನಿಕಾಂತ್ ಅವರು ಮುಂದಿನ ವರ್ಷದ ಆರಂಭದಲ್ಲಿ ರಾಜಕೀಯ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ ಬಳಿಕ ಅವರ ಅಭಿಮಾನಿಗಳಲ್ಲಿ ಸಂತಸ ಮೂಡಿದೆ. ಅವರ ನಿವಾಸದ ಹೊರಭಾಗದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications