ಹೊಸ ಚಾನೆಲ್ ಆರಂಭಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ ನಟ ರಜನೀಕಾಂತ್
ಚೆನ್ನೈ, ಡಿಸೆಂಬರ್ 21: ತಮಿಳು ನಟ ರಜನೀಕಾಂತ್ ಹೊಸ ಸುದ್ದಿ ವಾಹಿನಿ ಆರಂಭಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ತಮ್ಮ ರಾಜಕೀಯ ಪ್ರವೇಶದ ಬಗ್ಗೆ ರಜನೀ ಘೋಷಣೆ ಮಾಡಿದ್ದರು. ತಮಿಳುನಾಡಿನಲ್ಲಿ 'ತಲೈವರ್' ಎಂದೇ ಕರೆಸಿಕೊಳ್ಳುವ ರಜನೀಕಾಂತ್ ತಾವು ಜನರನ್ನು ತಲುಪಲು ಸುದ್ದಿ ವಾಹಿನಿ ಆರಂಭಿಸಲಿದ್ದಾರೆ ಎಂಬುದು ಸದ್ಯದ ಚರ್ಚೆ.
ಸುದ್ದಿ ವಾಹಿನಿಯ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ತಮಿಳುನಾಡಿನಲ್ಲಿ ಪ್ರತಿ ರಾಜಕೀಯ ಪಕ್ಷಕ್ಕೂ ಒಂದೊಂದು ಸುದ್ದಿ ವಾಹಿನಿ ಇದ್ದು, ಅದಕ್ಕೆ ಹೊಸ ಸೇರ್ಪಡೆ ಇದಾಗಲಿದೆ. ಸದ್ಯಕ್ಕೆ ಮೂರು ಹೆಸರನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ರಜಿನಿ ಟಿವಿ, ಸೂಪರ್ ಸ್ಟಾರ್ ಟಿವಿ ಮತ್ತು ತಲೈವರ್ ಟಿವಿ ಈ ಮೂರರಲ್ಲಿ ಒಂದು ಹೆಸರು ಇಡಬಹುದು.
ಈ ಮೂರು ಹೆಸರುಗಳಿಗೆ ಟ್ರೇಡ್ ಮಾರ್ಕ್ ಪಡೆಯಲು ನಟ ರಜನೀಕಾಂತ್ ರಿಜಿಸ್ಟ್ರಾರ್ ಆಫ್ ಟ್ರೇಡ್ ಮಾರ್ಕ್ಸ್ ಗೆ ಪತ್ರ ಬರೆದಿದ್ದಾರೆ. ರಜನೀಕಾಂತ್ ಗೆ ಆಪ್ತರಾದ ವಿ.ಎಂ.ಸುಧಾಕರ್ ಅರ್ಜಿ ಹಾಕಿದ್ದಾರೆ.

"ನಾನು, ಆರ್.ರಜನೀಕಾಂತ್, ಲೋಗೋ ಮೇಲೆ ನನ್ನ ಫೋಟೋ, ಹೆಸರು ಬಳಸಲು ಆಕ್ಷೇಪ ಇಲ್ಲ. ಈ ಅರ್ಜಿಯನ್ನು ಮುಂದಿನ ಹಂತದ ಪ್ರಕ್ರಿಯೆಗೆ ಪರಿಗಣಿಸಲು ರಿಜಿಸ್ಟ್ರಾರ್ ಗೆ ಮನವಿ ಮಾಡುತ್ತೇನೆ" ಎಂದು ಅರ್ಜಿಯಲ್ಲಿ ಹೇಳಿದ್ದಾರೆ.
ಒಂದು ಸುದ್ದಿ ವಾಹಿನಿಯ ಅಗತ್ಯವಿದೆ ಎನಿಸಿತು. ಏಕೆಂದರೆ ತಮಿಳುನಾಡಿನಲ್ಲಿ ಎಲ್ಲ ಪಕ್ಷಕ್ಕೂ ತನ್ನದೇ ಮುಖವಾಣಿ ಇದೆ. ಹೊಸ ಪಕ್ಷ ಆರಂಭಿಸುತ್ತಿದ್ದೇವೆ, ಇದು ಅಗತ್ಯ ಎನಿಸಿತು. ಅದಕ್ಕೂ ಹೆಚ್ಚಾಗಿ ಸೂಪರ್ ಸ್ಟಾರ್ (ರಜನೀಕಾಂತ್) ಸ್ವತಃ ಒಂದು ಬ್ರ್ಯಾಂಡ್ ಎಂದು ರಜನೀಕಾಂತ್ ಮಕ್ಕಳ್ ಮಂಡ್ರಮ್ ನ ಪದಾಧಿಕಾರಿ ತಿಳಿಸಿದ್ದಾರೆ.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications