Get Updates
Get notified of breaking news, exclusive insights, and must-see stories!

ತೂತುಕುಡಿ ಪೊಲೀಸ್ ಫೈರಿಂಗ್ ಕುರಿತು ವಿವಾದಾತ್ಮಕ ಹೇಳಿಕೆ: ನಟ ರಜನೀಕಾಂತ್‌ಗೆ ಎರಡನೇ ಬಾರಿ ಸಮನ್ಸ್

ತೂತುಕುಡಿ, ಡಿಸೆಂಬರ್ 21: ತೂತುಕುಡಿ ಪೊಲೀಸ್ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸೂಪರ್‌ ಸ್ಟಾರ್ ರಜನೀಕಾಂತ್‌ಗೆ ಎರಡನೇ ಬಾರಿ ಸಮನ್ಸ್ ಜಾರಿಗೊಳಿಸಲಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ನಡೆದಿದ್ದ ತೂತುಕುಡಿ ಪೊಲೀಸ್ ಫೈರಿಂಗ್ ಘಟನೆ ಬಗ್ಗೆ ವಿಚಾರಣೆ ನಡೆಸುತ್ತಿರುವ ಏಕ ವ್ಯಕ್ತಿ ಆಯೋಗವು, ಬರುವ ಜನವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಸಮನ್ಸ್ ನೀಡಿದೆ. ವಿಚಾರಣೆಗಾಗಿ ಎರಡನೇ ಬಾರಿಗೆ ರಜನಿಕಾಂತ್ ಅವರಿಗೆ ಆಯೋಗ ಸಮನ್ಸ್ ನೀಡಿದೆ.

ಬರುವ ವರ್ಷದ ಜನವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಆಯೋಗ ಸಮನ್ಸ್ ನೀಡಿದೆ. 24 ನೇ ಹಂತದ ವಿಚಾರಣೆಯನ್ನು 2021 ರ ಜನವರಿ 18 ರಿಂದ 22 ರವರೆಗೆ ನಿಗದಿಪಡಿಸಲಾಗಿದೆ.

Rajinikanth Summoned For His Remark In 2018 Sterlite Violence Case

ರಿಜಿಸ್ಟರ್ ಪೋಸ್ಟ್ ಮೂಲಕ ಸಮನ್ಸ್ ಕಳುಹಿಸಲಾಗಿದೆ ಎಂದು ಆಯೋಗದ ಮೂಲಗಳು ಖಚಿತಪಡಿಸಿವೆ. ಸಾಕ್ಷ್ಯಧಾರದ ಮೇಲೆ ರಜನಿಕಾಂತ್ ಈ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವ ಸಾಧ್ಯತೆಯಿರುವುದಾಗಿ ಮೂಲಗಳು ಹೇಳಿವೆ.

2018 ರ ಮೇ ತಿಂಗಳಲ್ಲಿ ರಜನಿಕಾಂತ್ ಸಂತ್ರಸ್ತರನ್ನು ಭೇಟಿ ಮಾಡಲು ಬಂದಾಗ ಸ್ಟರ್ಲೈಟ್ ವಿರೋಧಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸಮಾಜ ವಿರೋಧಿ ಶಕ್ತಿಗಳು ಪ್ರತಿಭಟನೆಯೊಳಗೆ ಸೇರಿಕೊಂಡಿದ್ದಾರೆ ಎಂದು ಅವರು ಹೇಳಿದ್ದರು.

ಈ ವರ್ಷದ ಫೆಬ್ರವರಿಯಲ್ಲಿ ನಿವೃತ್ತ ನ್ಯಾಯಾಧೀಶ ಅರುಣಾ ಜಗದೀಶನ್ ನೇತೃತ್ವದ ಆಯೋಗ, ರಜನಿಕಾಂತ್ ಗೆ ಸಮನ್ಸ್ ನೀಡಿತ್ತು. ಆದರೆ, ತೂತುಕುಡಿಗೆ ಬಂದರೆ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗಲಿದೆ ಎಂದು ಹೇಳುವ ಮೂಲಕ ರಜನೀಕಾಂತ್‌ ವಿನಾಯಿತಿ ಬಯಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+