ರಜನಿ ರಾಜಕೀಯ ಪ್ರವೇಶ, ಡಿ 31ಕ್ಕೆ ಅಧಿಕೃತ ಘೋಷಣೆ
ಚೆನ್ನೈ, ಡಿಸೆಂಬರ್ 26: ರಜನಿಕಾಂತ್ ಅವರ ರಾಜಕೀಯ ಪ್ರವೇಶದ ಬಗೆಗಿನ ಊಹಾಪೋಹಕ್ಕೆ ಡಿಸೆಂಬರ್ 31ರಂದು ತೆರೆ ಬೀಳಲಿದೆ. ಅಂದು ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಅಧಿಕೃತವಾಗಿ ರಜನಿಕಾಂತ್ ಅವರೇ ಘೋಷಣೆ ಮಾಡಲಿದ್ದಾರೆ.
ಚೆನ್ನೈ ನಲ್ಲಿ ಅಭಿಮಾನಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಈ ವಿಷಯವನ್ನು ಸ್ಪಷ್ಟಪಡಿಸಿದ್ದು, 'ಡಿಸೆಂಬರ್ 31 ರಂದು ನನ್ನ ರಾಜಕೀಯ ಪ್ರವೇಶದ ಬಗ್ಗೆ ಘೋಷಿಸಲಿದ್ದೇನೆ' ಎಂದಿದ್ದಾರೆ, ಆದರೆ ಸ್ವಂತ ಪಕ್ಷ ಸ್ಥಾಪಿಸುತ್ತಾರೊ ಅಥವಾ ಯಾವುದಾದರೊ ಪಕ್ಷ ಸೇರುತ್ತಾರೊ ಎಂಬುದರ ಬಗ್ಗೆ ಅವರು ಗುಟ್ಟು ಬಿಟ್ಟುಕೊಟ್ಟಿಲ್ಲ.
ಅಭಿಮಾನಿಗಳೊಂದಿಗಿನ ಸಂವಾದದಲ್ಲಿ ಮನಬಿಚ್ಚಿ ಮಾತನಾಡಿದ ರಜನಿಕಾಂತ್ ನನಗೆ ರಾಜಕೀಯ ಹೊಸದಲ್ಲ, ನಾನು 1990ರಿಂದಲೂ ರಾಜಕೀಯಯನ್ನು ಹತ್ತಿರದಿಂದ ಗಮನಿಸುತ್ತಾ ಬಂದಿದ್ದೇನೆ ಎಂದಿದ್ದಾರೆ.

ಸಮರಕ್ಕಿಳಿದ ಮೇಲೆ ಗೆಲ್ಲುವುದೊಂದೇ ಗುರಿ ಎಂದು ಸಿನಿಮಾ ಶೈಲಿಯಲ್ಲಿ ಹೇಳಿದ ರಜನೀಕಾಂತ್ ರಾಜಕೀಯದ ಕಷ್ಟಗಳ ಬಗ್ಗೆಯೂ ಅರಿವಿದೆ ಆದರೆ ಅದನ್ನೆಲ್ಲಾ ಕೂಲಂಕುಷವಾಗಿ ವಿಮರ್ಶಿಸಿ ನಿರ್ಧಾರ ಪ್ರಕಟಿಸುತ್ತೇನೆ ಎಂದಿದ್ದಾರೆ.
ಇಷ್ಟು ದಿನ ತಮ್ಮನ್ನು ಎಲ್ಲ ರೀತಿಯಲ್ಲಿ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದ ರಜನೀಕಾಂತ್ ಇಂದಿನಿಂದ ಸತತ ಆರು ದಿನಗಳ ಕಾಲ ತಮಿಳುನಾಡಿನ ಬೇರೆ ಬೇರೆ ಕಡೆಗಳಲ್ಲಿ ಅಭಿಮಾನಿಗಳ ಜೊತೆಗೆ ಸಂವಾದ ಮಾಡಲಿದ್ದಾರೆ, ಸಂವಾದದ ಮೂಲಕ ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಅಭಿಪ್ರಾಯ ಸಂಗ್ರಹಣೆಯನ್ನೂ ಮಾಡಲಿದ್ದಾರೆ.
ರಜನಿಕಾಂತ್ ಹೊಸ ಪಕ್ಷ ಸ್ಥಾಪನೆ ಮಾಡಲಿದ್ದಾರೆ ಎಂಬ ಸುದ್ದಿ ಎಂಬ ಗಾಳಿ ಸುದ್ದಿ ತಮಿಳುನಾಡಿನಾದ್ಯಂತ ಹಬ್ಬಿದೆ. ರಜನಿಕಾಂತ್ ನ ಓರಗೆಯ ನಟ ಕಮಲಹಾಸನ್ ಈಗಾಗಲೇ ಹೊಸ ಪಕ್ಷ ಸ್ಥಾಪನೆ ಮಾಡಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು











Click it and Unblock the Notifications