ಟಿಪ್ಪು ಕತ್ತಿ ಹಿಡಿಯಲು ಹೊರಟ ರಜನಿಗೆ ಚುಚ್ಚಿದ್ದು ಯಾರು?
ಚೆನ್ನೈ, ಸೆ.15: 'ಮೈಸೂರು ಹುಲಿ' ಟಿಪ್ಪು ಸುಲ್ತಾನ್ ಪಾತ್ರದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ನಟಿಸುತ್ತಾರೆ ಎಂಬ ಸುದ್ದಿ ಹಬ್ಬುತ್ತಿದ್ದಂತೆ ಅನೇಕ ಕಡೆಗಳಿಂದ ವಿರೋಧದ ಮಾತುಗಳು ಕೇಳಿ ಬಂದಿವೆ. ಮುಖ್ಯವಾಗಿ ಕತ್ತಿ ಝಳಪಿಸಲು ಸಿದ್ಧವಾದ ರಜನಿಗೆ ಬಿಜೆಪಿ ಎಚ್ಚರಿಕೆ ನೀಡಿದೆ.
ಹೇಗಾದರೂ ಮಾಡಿ ರಜನಿಕಾಂತ್ ರನ್ನು ಬಿಜೆಪಿಗೆ ಸೇರಿಸಿಕೊಳ್ಳಬೇಕು ಎಂದು ಇನ್ನಿಲ್ಲದ್ದಂತೆ ಪ್ರಯತ್ನಪಟ್ಟು ಸೋತ ತಮಿಳುನಾಡಿನ ಬಿಜೆಪಿ ಘಟಕ ಈಗ ರಜನಿಕಾಂತ್ ವಿರುದ್ಧ ತಿರುಗಿ ಬಿದ್ದಿದೆ. ರಜನಿ ಅವರು ಟಿಪ್ಪು ಸುಲ್ತಾನ್ ಪಾತ್ರವನ್ನು ಒಪ್ಪಿಕೊಳ್ಳಬಾರದು, ಟಿಪ್ಪು-ತಮಿಳುನಾಡು ವಿರೋಧಿಯಾಗಿದ್ದ, ತಮಿಳು ದ್ವೇಷಿಯಾಗಿದ್ದ ಎಂದು ರಜನಿಗೆ ಕಿವಿಮಾತು ಹೇಳಿದೆ. ['ರಾಜಕೀಯಕ್ಕೆ ರಜನಿಕಾಂತ್ ಬರುವುದು ಬೇಡ']
ಬಿಜೆಪಿಗೆ ಹಿಂದೂ ಮುನ್ನಾನಿ, ಹಿಂದೂ ಮಕ್ಕಳ್ ಕಚ್ಚಿ ಮುಂತಾದ ಸಂಘಟನೆಗಳ ಬೆಂಬಲ ಸಿಕ್ಕಿದೆ. ಕೆಲ ಸಂಘಟನೆಗಳ ವಾರಾಂತ್ಯದಲ್ಲಿ ಪ್ರತಿಭಟನೆ ಕೂಡಾ ನಡೆಸಿವೆ. ಇತ್ತ ಕರ್ನಾಟಕದಲ್ಲೂ ಟಿಪ್ಪು ಕನ್ನಡ ವಿರೋಧಿ ಈ ಚಿತ್ರ ಸೆಟ್ಟೇರಬಾರದು ಎಂಬ ಕೂಗು ಸಾಮಾಜಿಕ ಜಾಲ ತಾಣಗಳಲ್ಲಿ ಅಲ್ಲಲ್ಲಿ ಕಾಣಿಸಿಕೊಂಡಿದೆ. [ಟಿಪ್ಪು ಸುಲ್ತಾನ್ ವಿವಿ ರಾಜ್ಯದಲ್ಲೆಲ್ಲೂ ಸ್ಥಾಪಿಸುವಂತಿಲ್ಲ]
ಕರ್ನಾಟಕದ ರಾಜಕಾರಣಿ ಕಮ್ ನಿರ್ಮಾಪಕ ಅಶೋಕ್ ಖೇಣಿ ಅವರು ಭಾರಿ ಬಂಡವಾಳ ಹೂಡಿಕೆ ಮಾಡಲಿದ್ದು, ಟಿಪ್ಪು ಸುಲ್ತಾನ್ ಕುರಿತ ಚಿತ್ರದಲ್ಲಿ ರಜನಿಕಾಂತ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಬಂದ ಕೂಡಲೇ ಹಿಂದೂ ಸಂಘಟನೆಗಳು ಜಾಗೃತಗೊಂಡಿವೆ.
'ಇಷ್ಟಕ್ಕೂ ಚಿತ್ರದ ಸ್ಕ್ರಿಪ್ಟ್ ಕೂಡಾ ತಯಾರಾಗಿಲ್ಲ. ಇತಿಹಾಸಕಾರರು, ಸಂಶೋಧಕರ ನೆರವು ಪಡೆದು ಸ್ಕ್ರಿಪ್ಟ್ ತಯಾರಿಸಿ ರಜನಿ ಅವರನ್ನು ಭೇಟಿ ಮಾಡಲಾಗುವುದು" ಎಂದು ಖೇಣಿ ಹೇಳಿದ್ದಾರೆ. ಯಾರು? ಯಾರು ಏನು ಹೇಳಿದ್ದಾರೆ ಮುಂದೆ ಓದಿ...

ಟಿಪ್ಪು ಒಬ್ಬ ಕ್ರೂರ ಆರಸ
ಟಿಪ್ಪು ಸುಲ್ತಾನ್ ಹಿಂದೂಗಳನ್ನು ಕೊಂದ ಕೊಲೆಪಾತಕಿ. ಆತನ ಆಡಳಿತದಲ್ಲಿ ದ್ವೇಷ ರಾಜಕಾರಣವೇ ತುಂಬಿತ್ತು. ಹಿಂದೂಗಳ ದುಃಸ್ಥಿತಿಗೆ ಟಿಪ್ಪು ಕಾರಣ, ಇಂಥ ಸುಲ್ತಾನನ ಪಾತ್ರದಲ್ಲಿ ರಜನಿ ಏನಾದರೂ ನಟಿಸಿದರೆ ಇತಿಹಾಸವೇ ಬದಲಾಗಲಿದೆ. ರಜನಿಗೆ ಬಹುದೊಡ್ಡ ಹಿಂಬಾಲಕರಿದ್ದು, ಅವರಿಗೆ ಕೆಟ್ಟ ಸಂದೇಶ ನೀಡಿದ್ದಂತಾಗುತ್ತದೆ ಎಂದು ಬಿಜೆಪಿ ನಾಯಕ ಎಲ್ ಗಣೇಶನ್ ಅವರು ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಹಿಂದೂ ಮಕ್ಕಳ್ ಕಚ್ಚಿ ಪ್ರತಿಕ್ರಿಯೆ
ಹಿಂದೂ ಮಕ್ಕಳ್ ಕಚ್ಚಿ ಸೆಂಥಿಲ್ ಕುಮಾರ್ ಪ್ರತಿಕ್ರಿಯಿಸಿ, ಟಿಪ್ಪು ಸುಲ್ತಾನ್ ತನ್ನ ಅವಧಿಯಲ್ಲಿ ದೇಶವನ್ನು ಲೂಟಿ ಮಾಡಿದ್ದಾನೆ. ರಜನಿಕಾಂತ್ ಬಗ್ಗೆ ಅವರ ಅಭಿಮಾನಿಗಳಿಗೆ, ನಾಡಿನ ಜನತೆಗೆ ಆಧಾತ್ಮ ನಾಯಕರ ಇಮೇಜ್ ಇದೆ, ಟಿಪ್ಪು ಪಾತ್ರ ಮಾಡಿ ಎಲ್ಲವನ್ನು ಕಳೆದುಕೊಳ್ಳುವುದೇಕೆ? ಎಂದು ಪ್ರಶ್ನಿಸಿದ್ದಾರೆ.

ಅಶೋಕ್ ಖೇಣಿ ಪ್ರತಿಕ್ರಿಯೆ
ಟಿಪ್ಪು ಅಂಥಾ ಕ್ರೂರಿಯಾಗಿದ್ದರೆ, ಟಿಪ್ಪು ಬಗ್ಗೆ ಮಕ್ಕಳಿಗೆ ಪಾಠ ಏಕೆ ಹೇಳಿಕೊಡಲಾಗುತ್ತದೆ. ಮೈಸೂರು ಹುಲಿ ಎಂದು ಏಕೆ ಕರೆಯಲಾಗುತ್ತದೆ. ಟಿಪ್ಪು ಬಗ್ಗೆ ಬ್ರಿಟಿಷರು ತಪ್ಪು ಮಾಹಿತಿ ಹರಡಿದ್ದರಿಂದ ಇತಿಹಾಸದ ಸತ್ಯಗಳು ಮುಚ್ಚಿಹೋಗಿವೆ. ಟಿಪ್ಪು ಬಗ್ಗೆ ಸಿನಿಮಾಕ್ಕೆ ವಿರೋಧ ಏಕೆ ವ್ಯಕ್ತಪಡಿಸುತ್ತಾರೋ ನನಗಂತೂ ಗೊತ್ತಿಲ್ಲ ಎಂದು ಶಾಸಕ ಕಮ್ ನಿರ್ಮಾಪಕ ಖೇಣಿ ಪ್ರತಿಕ್ರಿಯಿಸಿದ್ದಾರೆ.

ಟಿಪ್ಪು ಹಿಂದೂ ವಿರೋಧಿಯಲ್ಲ :ಖೇಣಿ
ಟಿಪ್ಪು ತನ್ನ ಆಡಳಿತಾವಧಿಯಲ್ಲಿ ಅನೇಕ ಹಿಂದೂ ದೇಗುಲಗಳಿಗೆ, ಮಠಗಳಿಗೆ ಅನುದಾನ ನೀಡಿದ್ದರ ಬಗ್ಗೆ ಶಾಸನಗಳಿವೆ, ದಾಖಲೆಗಳಿವೆ. ಆತನನ್ನು ಹಿಂದೂ ವಿರೋಧಿ ಎಂದು ಹೇಗೆ ಕರೆಯುತ್ತೀರಿ? ರಜನಿಕಾಂತ್ ಅವರು ಇನ್ನೂ ಪಾತ್ರ ಮಾಡುತ್ತೇನೆ ಎಂದು ಒಪ್ಪಿಕೊಂಡಿಲ್ಲ. ಚಿತ್ರದ ಬಗ್ಗೆ ಮಾತುಕತೆ ನಡೆಯುತ್ತಿದೆ ಅಷ್ಟೇ ಎಂದು ಖೇಣಿ ಹೇಳಿದ್ದಾರೆ.

ಮಾಜಿ ಸಿಎಂ ಎಂಜಿ ರಾಮಚಂದ್ರನ್ ಲೇಖನ ಉಲ್ಲೇಖ
ಮಾಜಿ ಸಿಎಂ ಎಂಜಿ ರಾಮಚಂದ್ರನ್ ಲೇಖನ ಉಲ್ಲೇಖಿಸಿರುವ ಹಿಂದೂ ಮುನ್ನನಿ ಸಂಘಟನೆಯ ರಾಮಗೋಪಾಲನ್ ಅವರು ಮಾತನಾಡಿ, ಈ ಚಿತ್ರ ತಮಿಳರ ವಿರೋಧಿ ಚಿತ್ರವಾಗಲಿದೆ. ಎಂಜಿಆರ್ ಅವರ ಆತ್ಮಚರಿತ್ರೆಯಲ್ಲಿ ಟಿಪ್ಪು ದುರಾಡಳಿತದ ಬಗ್ಗೆ ಉಲ್ಲೇಖವಿದೆ. ಟಿಪ್ಪು ಕಾಟ ತಾಳಲಾರದೆ ಮೂಲ ನಿವಾಸಿಗಳು ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ವಲಸೆ ಹೋಗಿ ಕಷ್ಟ ಅನುಭವಿಸಿದ ಕಥೆ ಇದೆ.

ಟಿಪ್ಪು ಸುಲ್ತಾನ್ ಸ್ಮಾರಕಕ್ಕೆ ತಮಿಳು ದಲಿತರ ವಿರೋಧ
ಟಿಪ್ಪು ಸುಲ್ತಾನ್ ಅವರ ಸ್ಮಾರಕ ಸ್ಥಾಪನೆಗೆ ದಿಂಡಿಗಲ್ ನಿಂದ ಸುಮಾರು 15 ಕಿ.ಮೀ ದೂರದಲ್ಲಿರುವ ಪುದು ಕೊಡಂಗಿಪಟ್ಟಿ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಅವರು ದಿಂಡಿಗಲ್ ಜಿಲ್ಲೆಯಲ್ಲಿ ಟಿಪ್ಪು ಸುಲ್ತಾನ್ ಹಾಗೂ ಹೈದರಾಲಿ ಅವರ ಮಣಿಮಂಡಲಂ(ಸ್ಮಾರಕ) ಸ್ಥಾಪನೆಗೆ ಆದೇಶಿಸಿದ್ದರು. [ವಿರೋಧ ಏಕೆ? ಇಲ್ಲಿ ಓದಿ]
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications