ಜಯಾ ಸೊಸೆ ದೀಪಾರಿಂದ ಫೆ.24ರಂದು ಹೊಸ ಪಕ್ಷ ಘೋಷಣೆ
ಜಯಲಲಿತಾ ಸೋದರನ ಮಗಳು ದೀಪಾ ಜಯಕುಮಾರ್ ರಾಜಕೀಯಕ್ಕೆ ಎಂಟ್ರಿಕೊಡಲು ಸಿದ್ದತೆ ನಡೆಸುತ್ತಿರುವುದು ಈಗ ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ.
ಚೆನ್ನೈ, ಜನವರಿ 17: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಸೋದರನ ಮಗಳು ದೀಪಾ ಜಯಕುಮಾರ್ ರಾಜಕೀಯಕ್ಕೆ ಎಂಟ್ರಿಕೊಡಲು ಸಿದ್ದತೆ ನಡೆಸುತ್ತಿರುವುದು ಈಗ ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ.
ಎಐಎಡಿಎಂಕೆ ಪಕ್ಷದಲ್ಲಿ ಶಶಿಕಲಾಗೆ ಪರ್ಯಾಯ ಮಹಿಳಾ ಶಕ್ತಿಯಾಗಿ ಬೆಳೆಯಲಿದ್ದಾರೆಯೇ, ಪಕ್ಷದಲ್ಲಿ ಒಡಕು ಮೂಡಿದೆಯೇ? ಎಂಬ ಪ್ರಶ್ನೆಗಳು ಎದ್ದಿವೆ. ಫೆಬ್ರವರಿ 24ಕ್ಕೆ ಉತ್ತರ ಸಿಗಲಿದೆ.
ಚೆನ್ನೈನ ಮರೀನಾ ಬೀಚ್ ನಲ್ಲಿ ಮಂಗಳವಾರ(ಜನವರಿ 17) ನಡೆದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂಜಿ ರಾಮಚಂದ್ರನ್ ಅವರ 100ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ರಾಜಕೀಯ ಪ್ರವೇಶ ಮಾಡುತ್ತಿರುವುದಾಗಿ ದೀಪಾ ಜಯಕುಮಾರ್ ಘೋಷಿಸಿದರು.
ದೀಪಾ ಮುಂದಿನ ಆಯ್ಕೆ?: ನನ್ನ ಮುಂದೆ ಎರಡು ಆಯ್ಕೆಗಳಿವೆ ಎಐಎಡಿಎಂಕೆ ಸೇರುವುದು ಅಥವಾ ಹೊಸ ಪಕ್ಷ ಕಟ್ಟುವುದು. ನಾನು ಈ ಬಗ್ಗೆ ನನ್ನ ಬೆಂಬಲಿಗರ ಜತೆ ಚರ್ಚೆ ಮಾಡಿ ನಿರ್ಧಾ ಕೈಗೊಳ್ಳುತ್ತೇನೆ. ಅಮ್ಮ ಜಯಲಲಿತಾ ಅವರ ಹುಟ್ಟುಹಬ್ಬದ ದಿನ(ಫೆ.24)ದಂದು ಈ ಬಗ್ಗೆ ನಿರ್ಣಯ ಪ್ರಕಟಿಸುತ್ತೇನೆ ಎಂದು ದೀಪಾ ಘೋಷಿಸಿದರು.

ಶಶಿಕಲಾ ನಟರಾಜನ್ ಕುಟುಂಬದ ಬಗ್ಗೆ
ಶಶಿಕಲಾ ನಟರಾಜನ್ ಕುಟುಂಬದವರ ಹೇಳಿಕೆಯನ್ನು ಖಂಡಿಸಿದ ದೀಪಾ, ಜಯಲಲಿತಾ ಅವರನ್ನು ಯಾರೂ ಸಂರಕ್ಷಿಸಬೇಕಾಗಿರಲಿಲ್ಲ. ಅಮ್ಮ ಅವರ ಕೃಪೆಯಿಂದ ಎಲ್ಲರೇ ಹೊರತೂ, ಶಶಿಕಲಾ ಅವರಿಂದ ಆಮ್ಮ ಅವರ ಏಳಿಗೆ ಆಗಲಿಲ್ಲ. ನಾನು ಈ ಬಗ್ಗೆ ಇಲ್ಲಿ ಹೇಳಲಾರೆ. ನಾನು ಚುನಾಯಿತಳಾಗಿ ಅಸೆಂಬ್ಲಿ, ಸಂಸತ್ತಿಗೆ ಪ್ರವೇಶಿಸಿದ ಮೇಲೆ ಎಲ್ಲವನ್ನು ವಿವರಿಸುವೆ ಎಂದರು.

ಎಐಎಡಿಎಂಕೆ ಒಂದು ಕುಟುಂಬದ ಸ್ವತ್ತಲ್ಲ
ಎಐಎಡಿಎಂಕೆ ಒಂದು ಕುಟುಂಬದ ಸ್ವತ್ತಲ್ಲ. ನಾವೆಲ್ಲರೂ ಪಕ್ಷದ ಸ್ವತ್ತು. ಜಯಲಲಿತಾ ಹಾಗೂ ಎಂಜಾರ್ ಅವರು ಪಕ್ಷ ಹಾಗೂ ಜನರ ಆಶೋತ್ತರಕ್ಕೆ ತಕ್ಕಂತೆ ಬದುಕಿದವರು. ಅವರ ಮಾರ್ಗದಲ್ಲೇ ನಾನು ಸಾಗುವೆ ಎಂದ ದೀಪಾ.

ಜಯಲಲಿತಾ ಅವರ ಸಾವಿಗೆ ಶಶಿಕಲಾ ಅವರೇ ಕಾರಣ
ಜಯಲಲಿತಾ ಅವರ ಸಾವಿಗೆ ಶಶಿಕಲಾ ಅವರೇ ಕಾರಣ ಎಂದು ನೇರವಾಗಿ ಮಾಧ್ಯಮಗಳ ಮುಂದೆ ಆರೋಪಿಸಿದ್ದ ದೀಪಾ, ಕೆಲವು ದಿನಗಳ ಹಿಂದೆಯೇ ರಾಜಕೀಯ ರಂಗ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದರು. ತಾವು ರಾಜಕೀಯಕ್ಕೆ ಪ್ರವೇಶಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಶಿಕಲಾ ಅವರಿಗೆ ನೇರವಾಗಿ ತಿರುಗೇಟು ನೀಡಿದ್ದರು.

ಜಯಲಲಿತಾರನ್ನೇ ಹೋಲುವ 42 ವರ್ಷದ ದೀಪಾ
ಸೋದರತ್ತೆ ಜಯಲಲಿತಾರನ್ನೇ ಹೋಲುವ 42 ವರ್ಷದ ದೀಪಾರಿಗೆ ಪಕ್ಷದ ಒಂದು ಬಣ ಭಾರೀ ಬೆಂಬಲ ವ್ಯಕ್ತಪಡಿಸಿದ್ದು, ತಮಿಳುನಾಡಿನ ಭವಿಷ್ಯದ ಉಜ್ವಲ ರಾಜಕಾರಣಿ ಎಂದೇ ಬಿಂಬಿಸಿದೆ. ಜಯಲಲಿತಾ ಅವರಂತೆಯೇ ಸೀರೆ ತೊಟ್ಟು ಹಾವಭಾವಗಳನ್ನು ಅನುಕರಿಸುವ ದೀಪಾ ಅವರಲ್ಲಿ ನಾವು ಕಳೆದುಕೊಂಡ ಅಮ್ಮನನ್ನು ಕಾಣುತ್ತೇವೆ ಎಂದು ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಹೇಳುತ್ತಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications