ಜಯಾ ಸೊಸೆ ದೀಪಾರಿಂದ ಫೆ.24ರಂದು ಹೊಸ ಪಕ್ಷ ಘೋಷಣೆ
ಜಯಲಲಿತಾ ಸೋದರನ ಮಗಳು ದೀಪಾ ಜಯಕುಮಾರ್ ರಾಜಕೀಯಕ್ಕೆ ಎಂಟ್ರಿಕೊಡಲು ಸಿದ್ದತೆ ನಡೆಸುತ್ತಿರುವುದು ಈಗ ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ.
ಚೆನ್ನೈ, ಜನವರಿ 17: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಸೋದರನ ಮಗಳು ದೀಪಾ ಜಯಕುಮಾರ್ ರಾಜಕೀಯಕ್ಕೆ ಎಂಟ್ರಿಕೊಡಲು ಸಿದ್ದತೆ ನಡೆಸುತ್ತಿರುವುದು ಈಗ ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ.
ಎಐಎಡಿಎಂಕೆ ಪಕ್ಷದಲ್ಲಿ ಶಶಿಕಲಾಗೆ ಪರ್ಯಾಯ ಮಹಿಳಾ ಶಕ್ತಿಯಾಗಿ ಬೆಳೆಯಲಿದ್ದಾರೆಯೇ, ಪಕ್ಷದಲ್ಲಿ ಒಡಕು ಮೂಡಿದೆಯೇ? ಎಂಬ ಪ್ರಶ್ನೆಗಳು ಎದ್ದಿವೆ. ಫೆಬ್ರವರಿ 24ಕ್ಕೆ ಉತ್ತರ ಸಿಗಲಿದೆ.
ಚೆನ್ನೈನ ಮರೀನಾ ಬೀಚ್ ನಲ್ಲಿ ಮಂಗಳವಾರ(ಜನವರಿ 17) ನಡೆದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂಜಿ ರಾಮಚಂದ್ರನ್ ಅವರ 100ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ರಾಜಕೀಯ ಪ್ರವೇಶ ಮಾಡುತ್ತಿರುವುದಾಗಿ ದೀಪಾ ಜಯಕುಮಾರ್ ಘೋಷಿಸಿದರು.
ದೀಪಾ ಮುಂದಿನ ಆಯ್ಕೆ?: ನನ್ನ ಮುಂದೆ ಎರಡು ಆಯ್ಕೆಗಳಿವೆ ಎಐಎಡಿಎಂಕೆ ಸೇರುವುದು ಅಥವಾ ಹೊಸ ಪಕ್ಷ ಕಟ್ಟುವುದು. ನಾನು ಈ ಬಗ್ಗೆ ನನ್ನ ಬೆಂಬಲಿಗರ ಜತೆ ಚರ್ಚೆ ಮಾಡಿ ನಿರ್ಧಾ ಕೈಗೊಳ್ಳುತ್ತೇನೆ. ಅಮ್ಮ ಜಯಲಲಿತಾ ಅವರ ಹುಟ್ಟುಹಬ್ಬದ ದಿನ(ಫೆ.24)ದಂದು ಈ ಬಗ್ಗೆ ನಿರ್ಣಯ ಪ್ರಕಟಿಸುತ್ತೇನೆ ಎಂದು ದೀಪಾ ಘೋಷಿಸಿದರು.

ಶಶಿಕಲಾ ನಟರಾಜನ್ ಕುಟುಂಬದ ಬಗ್ಗೆ
ಶಶಿಕಲಾ ನಟರಾಜನ್ ಕುಟುಂಬದವರ ಹೇಳಿಕೆಯನ್ನು ಖಂಡಿಸಿದ ದೀಪಾ, ಜಯಲಲಿತಾ ಅವರನ್ನು ಯಾರೂ ಸಂರಕ್ಷಿಸಬೇಕಾಗಿರಲಿಲ್ಲ. ಅಮ್ಮ ಅವರ ಕೃಪೆಯಿಂದ ಎಲ್ಲರೇ ಹೊರತೂ, ಶಶಿಕಲಾ ಅವರಿಂದ ಆಮ್ಮ ಅವರ ಏಳಿಗೆ ಆಗಲಿಲ್ಲ. ನಾನು ಈ ಬಗ್ಗೆ ಇಲ್ಲಿ ಹೇಳಲಾರೆ. ನಾನು ಚುನಾಯಿತಳಾಗಿ ಅಸೆಂಬ್ಲಿ, ಸಂಸತ್ತಿಗೆ ಪ್ರವೇಶಿಸಿದ ಮೇಲೆ ಎಲ್ಲವನ್ನು ವಿವರಿಸುವೆ ಎಂದರು.

ಎಐಎಡಿಎಂಕೆ ಒಂದು ಕುಟುಂಬದ ಸ್ವತ್ತಲ್ಲ
ಎಐಎಡಿಎಂಕೆ ಒಂದು ಕುಟುಂಬದ ಸ್ವತ್ತಲ್ಲ. ನಾವೆಲ್ಲರೂ ಪಕ್ಷದ ಸ್ವತ್ತು. ಜಯಲಲಿತಾ ಹಾಗೂ ಎಂಜಾರ್ ಅವರು ಪಕ್ಷ ಹಾಗೂ ಜನರ ಆಶೋತ್ತರಕ್ಕೆ ತಕ್ಕಂತೆ ಬದುಕಿದವರು. ಅವರ ಮಾರ್ಗದಲ್ಲೇ ನಾನು ಸಾಗುವೆ ಎಂದ ದೀಪಾ.

ಜಯಲಲಿತಾ ಅವರ ಸಾವಿಗೆ ಶಶಿಕಲಾ ಅವರೇ ಕಾರಣ
ಜಯಲಲಿತಾ ಅವರ ಸಾವಿಗೆ ಶಶಿಕಲಾ ಅವರೇ ಕಾರಣ ಎಂದು ನೇರವಾಗಿ ಮಾಧ್ಯಮಗಳ ಮುಂದೆ ಆರೋಪಿಸಿದ್ದ ದೀಪಾ, ಕೆಲವು ದಿನಗಳ ಹಿಂದೆಯೇ ರಾಜಕೀಯ ರಂಗ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದರು. ತಾವು ರಾಜಕೀಯಕ್ಕೆ ಪ್ರವೇಶಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಶಿಕಲಾ ಅವರಿಗೆ ನೇರವಾಗಿ ತಿರುಗೇಟು ನೀಡಿದ್ದರು.

ಜಯಲಲಿತಾರನ್ನೇ ಹೋಲುವ 42 ವರ್ಷದ ದೀಪಾ
ಸೋದರತ್ತೆ ಜಯಲಲಿತಾರನ್ನೇ ಹೋಲುವ 42 ವರ್ಷದ ದೀಪಾರಿಗೆ ಪಕ್ಷದ ಒಂದು ಬಣ ಭಾರೀ ಬೆಂಬಲ ವ್ಯಕ್ತಪಡಿಸಿದ್ದು, ತಮಿಳುನಾಡಿನ ಭವಿಷ್ಯದ ಉಜ್ವಲ ರಾಜಕಾರಣಿ ಎಂದೇ ಬಿಂಬಿಸಿದೆ. ಜಯಲಲಿತಾ ಅವರಂತೆಯೇ ಸೀರೆ ತೊಟ್ಟು ಹಾವಭಾವಗಳನ್ನು ಅನುಕರಿಸುವ ದೀಪಾ ಅವರಲ್ಲಿ ನಾವು ಕಳೆದುಕೊಂಡ ಅಮ್ಮನನ್ನು ಕಾಣುತ್ತೇವೆ ಎಂದು ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಹೇಳುತ್ತಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications