ಜಯಲಲಿತಾ ಕ್ಷೇತ್ರದ ಚುನಾವಣೆ: ಪನ್ನೀರ್ ಸೆಲ್ವಂ ಪ್ರತ್ಯೇಕ ರಣತಂತ್ರ
ಜಯಲಿಲಿತಾ ಅವರಿಗೆ ನಿಷ್ಠರಾಗಿದ್ದ ಇ. ಮಧುಸೂಧನ್ ಅವರನ್ನು ಕಣಕ್ಕಿಳಿಸಲು ಪನ್ನೀರ್ ಸೆಲ್ವಂ ನಿರ್ಧಾರ. 1991ರಲ್ಲಿ ಆರ್ ಕೆ ನಗರ ಕ್ಷೇತ್ರದಲ್ಲಿ ಜಯಿಸಿ ವಿಧಾನ ಸಭೆ ಪ್ರವೇಶಿಸಿದ್ದ ಮಧುಸೂಧನ್.
ಚೆನ್ನೈ, ಮಾರ್ಚ್ 16: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಪ್ರತಿನಿಧಿಸಿದ್ದ ಕ್ಷೇತ್ರವಾದ ರಾಧಾಕೃಷ್ಣ ನಗರ (ಆರ್ ಕೆ ನಗರ) ಉಪಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷದ ಸ್ಥಾಯಿ ಸಮಿತಿಗಳ ಮುಖ್ಯಸ್ಥರಾಗಿದ್ದ ಇ. ಮಧುಸೂಧನ್ ಅವರನ್ನು ಕಣಕ್ಕಿಳಿಸಲು ಮಾಜಿ ಮುಖ್ಯಮಂತ್ರಿ ಹಾಗೂ ಜಯಲಲಿತಾ ಅವರ ವಿಧೇಯರಾಗಿದ್ದ ಪನ್ನೀರ್ ಸೆಲ್ವಂ ನಿರ್ಧರಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರ ತಿಳಿಸಿದರು. ಏಪ್ರಿಲ್ 12ರಂದು ನಡೆಯಲಿರುವ ಈ ಉಪಚುನಾವಣೆ ಈಗಾಗಲೇ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

ಎಐಎಡಿಎಂಕೆ ಪರವಾಗಿ ಈಗಾಗಲೇ ಶಶಿಕಲಾ ಬಣವು, ಜಯಲಲಿತಾ ಸೋದರ ಸಂಬಂಧಿಯಾದ ಟಿಟಿವಿ ದಿನಕರನ್ ಅವರನ್ನು ಕಣಕ್ಕಿಳಿಸಿದೆ.
ಮತ್ತೊಂದೆಡೆ, ಶಶಿಕಲಾ ಅವರಿಗೆ ಸಡ್ಡು ಹೊಡೆದಿರುವ ಜಯಲಲಿತಾ ಅವರ ಮತ್ತೊಬ್ಬ ಸಂಬಂಧಿ ದೀಪಾ ಜಯ ಕುಮಾರ್ ಕೂಡ ಕಣಕ್ಕಿಳಿದಿದ್ದಾರೆ. ಈಗ, ಪನ್ನೀರ್ ಸೆಲ್ವಂ ಅವರೂ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿರುವುದರಿಂದ ಈ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ.
ಈ ಹಿಂದೆ, 1991ರಲ್ಲಿ ಮಧುಸೂಧನ್ ಅವರು ಇದೇ ಕ್ಷೇತ್ರದಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು. ಅಲ್ಲದೆ, ಜಯಲಲಿತಾ ಸಂಪುಟದಲ್ಲಿ ಸಚಿವರಾಗಿ ಸಾಕಷ್ಟು ಅನುಭವ ಪಡೆದಿದ್ದಾರೆ.
ಆದರೆ, ಇತ್ತೀಚೆಗೆ, ಜಯಲಲಿತಾ ನಿಧನದ ನಂತರ, ನಡೆದ ರಾಜಕೀಯ ವಿದ್ಯಮಾನಗಳಲ್ಲಿ ಮಧುಸೂಧನ್ ಅವರನ್ನು ಎಐಎಡಿಎಂಕೆ ಪಕ್ಷದಲ್ಲಿ ಹೊಂದಿದ್ದ ಸ್ಥಾನಗಳಿಂದ ಕಿತ್ತೊಗೆದಿದ್ದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications