ಜಯಲಲಿತಾ ಕ್ಷೇತ್ರದ ಚುನಾವಣೆ: ಪನ್ನೀರ್ ಸೆಲ್ವಂ ಪ್ರತ್ಯೇಕ ರಣತಂತ್ರ
ಜಯಲಿಲಿತಾ ಅವರಿಗೆ ನಿಷ್ಠರಾಗಿದ್ದ ಇ. ಮಧುಸೂಧನ್ ಅವರನ್ನು ಕಣಕ್ಕಿಳಿಸಲು ಪನ್ನೀರ್ ಸೆಲ್ವಂ ನಿರ್ಧಾರ. 1991ರಲ್ಲಿ ಆರ್ ಕೆ ನಗರ ಕ್ಷೇತ್ರದಲ್ಲಿ ಜಯಿಸಿ ವಿಧಾನ ಸಭೆ ಪ್ರವೇಶಿಸಿದ್ದ ಮಧುಸೂಧನ್.
ಚೆನ್ನೈ, ಮಾರ್ಚ್ 16: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಪ್ರತಿನಿಧಿಸಿದ್ದ ಕ್ಷೇತ್ರವಾದ ರಾಧಾಕೃಷ್ಣ ನಗರ (ಆರ್ ಕೆ ನಗರ) ಉಪಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷದ ಸ್ಥಾಯಿ ಸಮಿತಿಗಳ ಮುಖ್ಯಸ್ಥರಾಗಿದ್ದ ಇ. ಮಧುಸೂಧನ್ ಅವರನ್ನು ಕಣಕ್ಕಿಳಿಸಲು ಮಾಜಿ ಮುಖ್ಯಮಂತ್ರಿ ಹಾಗೂ ಜಯಲಲಿತಾ ಅವರ ವಿಧೇಯರಾಗಿದ್ದ ಪನ್ನೀರ್ ಸೆಲ್ವಂ ನಿರ್ಧರಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರ ತಿಳಿಸಿದರು. ಏಪ್ರಿಲ್ 12ರಂದು ನಡೆಯಲಿರುವ ಈ ಉಪಚುನಾವಣೆ ಈಗಾಗಲೇ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

ಎಐಎಡಿಎಂಕೆ ಪರವಾಗಿ ಈಗಾಗಲೇ ಶಶಿಕಲಾ ಬಣವು, ಜಯಲಲಿತಾ ಸೋದರ ಸಂಬಂಧಿಯಾದ ಟಿಟಿವಿ ದಿನಕರನ್ ಅವರನ್ನು ಕಣಕ್ಕಿಳಿಸಿದೆ.
ಮತ್ತೊಂದೆಡೆ, ಶಶಿಕಲಾ ಅವರಿಗೆ ಸಡ್ಡು ಹೊಡೆದಿರುವ ಜಯಲಲಿತಾ ಅವರ ಮತ್ತೊಬ್ಬ ಸಂಬಂಧಿ ದೀಪಾ ಜಯ ಕುಮಾರ್ ಕೂಡ ಕಣಕ್ಕಿಳಿದಿದ್ದಾರೆ. ಈಗ, ಪನ್ನೀರ್ ಸೆಲ್ವಂ ಅವರೂ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿರುವುದರಿಂದ ಈ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ.
ಈ ಹಿಂದೆ, 1991ರಲ್ಲಿ ಮಧುಸೂಧನ್ ಅವರು ಇದೇ ಕ್ಷೇತ್ರದಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು. ಅಲ್ಲದೆ, ಜಯಲಲಿತಾ ಸಂಪುಟದಲ್ಲಿ ಸಚಿವರಾಗಿ ಸಾಕಷ್ಟು ಅನುಭವ ಪಡೆದಿದ್ದಾರೆ.
ಆದರೆ, ಇತ್ತೀಚೆಗೆ, ಜಯಲಲಿತಾ ನಿಧನದ ನಂತರ, ನಡೆದ ರಾಜಕೀಯ ವಿದ್ಯಮಾನಗಳಲ್ಲಿ ಮಧುಸೂಧನ್ ಅವರನ್ನು ಎಐಎಡಿಎಂಕೆ ಪಕ್ಷದಲ್ಲಿ ಹೊಂದಿದ್ದ ಸ್ಥಾನಗಳಿಂದ ಕಿತ್ತೊಗೆದಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications