ಗೃಹಿಣಿಯರಿಗೆ ಸಂಬಳ: ಕಮಲ್ ಹಾಸನ್ ಪಕ್ಷದ ಹೊಸ ವಿಷನ್
ಚೆನ್ನೈ, ಫೆಬ್ರವರಿ 29: ಗೃಹಿಣಿಯರದ್ದೂ ಒಂದು ಉದ್ಯೋಗ ಅದಕ್ಕೆ ನಿವೃತ್ತಿ ಎನ್ನುವುದೇ ಇಲ್ಲ ಹಾಗಾಗಿ ಅವರಿಗೂ ಸಂಬಳ ನೀಡಬೇಕು ಎಂದು ನಟ ರಾಜಕಾರಣಿ ಕಮಲ್ ಹಾಸನ್ ಹೇಳಿದ್ದಾರೆ.
ಅವರು ತಮ್ಮ ವಿಷನ್ ಡಾಕ್ಯುಮೆಂಟ್ನಲ್ಲಿ ಈ ವಿಷಯ ಪ್ರಸ್ತಾಪಿಸಿದ್ದು, ಗೃಹಿಣಿಯರ ಕೆಲಸ ಸಾಮಾನ್ಯದ್ದಲ್ಲ, ಅವರಿಗೂ ಸಂಬಳ ನೀಡುವ ಕಾಲ ಬಂದಿದೆ. ಅದನ್ನು ಜಾರಿಗೆ ತರುವ ನಿಟ್ಟಿನಲ್ಲಿ ನಮ್ಮ ಪಕ್ಷ ಕೆಲಸ ಮಾಡಲಿದೆ ಎಂದು ಹೇಳಿದರು.
ಕಳೆದ ಕೆಲ ವರ್ಷಗಳಿಂದ ತಮಿಳುನಾಡು ರಾಜಕಾರಣ ಸಾಗುತ್ತಿರುವ ದಿಕ್ಕು ಆತಂಕವನ್ನುಂಟುಮಾಡಿದೆ. ಮಹತ್ವಾಕಾಂಕ್ಷೆಯೊಂದಿಗೆ ಕೆಲಸ ಮಾಡುವಂತಹ ವಾತಾವರಣ ಸೃಷ್ಟಿಸುವ ಮೂಲಕ ನಮ್ಮ ಜನರ ಸಬಲೀಕರಣ ಮಾಡಲಾಗುವುದು ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.

ಗೃಹಿಣಿಯರ ಉದ್ಯೋಗಕ್ಕೆ ಸಂಬಳ
ಗೃಹಿಣಿಯರದು ದೊಡ್ಡ ಕೆಲಸವಾಗಿದ್ದು, ಅವರಿಗೂ ಸಂಬಳ ನೀಡಬೇಕಾಗಿದೆ. ಅವರ ಉದ್ಯೋಗಕ್ಕೆ ಸಂಬಳ ನೀಡಬೇಕಾದ ಸಮಯ ಈಗ ಬಂದಿದೆ. ಅದನ್ನು ನಾವು ಈಡೇರಿಸುತ್ತೇವೆ ಎಂಬ ಭರವಸೆಯನ್ನು ವಿಷನ್ ಡಾಕ್ಯುಮೆಂಟ್ ನಲ್ಲಿ ನೀಡಿದ್ದಾರೆ.

ಗೃಹಿಣಿಯರ ಸಬಲೀಕರ ನಮ್ಮ ಗುರಿ
ಗೃಹಿಣಿಯರಿಗೆ ಸಂಬಳ, ಜನರನ್ನು ಸಬಲೀಕರಣಗೊಳಿಸಿ ಉದ್ಯಮಶೀಲತಾ ಮನೋಭಾವವನ್ನು ಉತ್ತೇಜಿಸುವ ವಾತಾವರಣವನ್ನು ಸೃಷ್ಟಿಸುವುದು ಮತ್ತಿತರ ಎಂಟರ್ ಪ್ರೈಸ್ ಎಕಾನಮಿ ಅಂಶಗಳ ಮೂಲಕ ತಮಿಳುನಾಡನ್ನು ಮರುರೂಪಿಸುವುದಾಗಿ ನಟ , ರಾಜಕಾರಣಿ ಕಮಲ್ ಹಾಸನ್ ಪ್ರಕಟಿಸಿದ್ದಾರೆ.

ವಿಷನ್ ಡಾಕ್ಯುಮೆಂಟ್ ಟ್ವೀಟ್
ಮಕ್ಕಳ್ ನಿಧಿ ಮೈಮ್ ಪಕ್ಷದ ಅಧ್ಯಕ್ಷರೂ ಆಗಿರುವ ಕಮಲ್ ಹಾಸನ್, ತಮ್ಮ ಪಕ್ಷದ ವಿಷನ್ ಡಾಕ್ಯುಮೆಂಟನ್ನು ಟ್ವೀಟ್ ಮಾಡಿದ್ದಾರೆ.ಈ ಕೇಂದ್ರಿತ ಸಿದ್ದಾಂತದೊಂದಿಗೆ ಎರಡು ಪಟ್ಟು ಬದಲಾವಣೆ ತರುವ ನಿಟ್ಟಿನಲ್ಲಿ ಪಕ್ಷ ಕಾರ್ಯನಿರ್ವಹಿಸುತ್ತಿದೆ. ತಮಿಳುನಾಡನ್ನು ಮರು ರೂಪಿಸಲಾಗುವುದು, ರಾಜಕೀಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.

ಭ್ರಷ್ಟಾಚಾರದಿಂದ ರಾಜ್ಯದ ವರ್ಚಸ್ಸನ್ನು ಕಡಿಮೆ ಮಾಡಿದೆ
ಅತಿಯಾದ ಭ್ರಷ್ಟಾಚಾರ ರಾಜ್ಯದ ವರ್ಚಸ್ಸನ್ನು ಕಡಿಮೆ ಮಾಡಿದೆ ಮತ್ತು ಅಭಿವೃದ್ಧಿ ಹೊಂದುವ ಸಾಮರ್ಥ್ಯವನ್ನು ಕಡಿಮೆ ಮಾಡಿದೆ ಎಂದಿರುವ ಕಮಲ್ ಹಾಸನ್, ಎಂಟರ್ ಪೈಸ್ ಎಕಾನಮಿಯಿಂದ ಉದ್ಯೋಗ ಸೃಷ್ಟಿಯಾಗಲಿದ್ದು, ಪ್ರತಿ ತಮಿಳು ಜನರು ಸಮೃದ್ಧಿಯನ್ನು ಸಾಧಿಸಬಹುದು ಎಂದು ಅವರು ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications