ಮುಖ್ಯಮಂತ್ರಿ ಗಾದಿಗೆ ಶಶಿಕಲಾ ಹಾದಿಯಲ್ಲಿ 3 ಮುಳ್ಳು!
ತಮಿಳುನಾಡಿನ ಮುಖ್ಯಮಂತ್ರಿ ಗಾದಿ ಏರಬೇಕು ಎಂಬ ಶಶಿಕಲಾ ಗುರಿ ಅಥವಾ ಕನಸು ಈಡೇರುವುದು ಸಲೀಸಲ್ಲ. ಅವರಿಗೆ ಕಾನೂನು ಹಾಗೂ ಸಾಂವಿಧಾನಿಕ ಅಡೆತಡೆಗಳಿವೆ. ಏನು ಆ ಅಡೆತಡೆಗಳು ಎಂಬುದನ್ನು ಈ ವರದಿಯಲ್ಲಿ ತೆರೆದಿಡಲಾಗಿದೆ
ಚೆನ್ನೈ, ಫೆಬ್ರವರಿ 10: ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕಿ ಶಶಿಕಲಾ ನಟರಾಜನ್ ಪರವಾಗಿ ಸಂಖ್ಯಾಬಲ ಇದ್ದರೂ ಮುಖ್ಯಮಂತ್ರಿ ಗಾದಿ ತಲುಪಲು ಅವರ ಪಾಲಿಗೆ ಇನ್ನೂ ಅಡೆತಡೆಗಳಿವೆ. ಮೊದಲನೆಯದಾಗಿ ಅಕ್ರಮ ಆಸ್ತಿ ಪ್ರಕರಣದಲ್ಲಿ ಆಕೆ ನಿರಪರಾಧಿ ಎಂಬ ತೀರ್ಪು ಬರಬೇಕು. ಈ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಮುಂದಿನ ವಾರ ನೀಡಲಿದೆ.
ಕಾನೂನು ಹಾಗೂ ಸಂವಿಧಾನ ತಜ್ಞರ ಜೊತೆಗೆ ಒನ್ಇಂಡಿಯಾ ಮಾತನಾಡಿದ್ದು, ತಮಿಳುನಾಡು ಮುಖ್ಯಮಂತ್ರಿ ಆಗುವ ಮೊದಲು ಶಶಿಕಲಾ ಈ ಎಲ್ಲ ತಡೆಗಳನ್ನು ದಾಟುತ್ತಾರಾ ಎಂದು ಪ್ರಶ್ನಿಸಿದೆ. ಈಗ ತಮಿಳುನಾಡಿನಲ್ಲಿ ಉದ್ಭವಿಸಿರುವ ಬಿಕ್ಕಟ್ಟಿನ ಬಗ್ಗೆ ರಾಜ್ಯಪಾಲ ವಿದ್ಯಾಸಾಗರ್ ರಾವ್ ತೀರ್ಮಾನ ತೆಗೆದುಕೊಳ್ಳುವ ಮೊದಲು ಹಲವು ವಿಚಾರಗಳನ್ನು ಪರಿಗಣಿಸಬೇಕಿದೆ.[ರಾಜ್ಯಪಾಲರ ಮುಂದೆ ಸರ್ಕಾರ ರಚಿಸುವ ಪ್ರಸ್ತಾವನೆಯಿಟ್ಟ ಶಶಿಕಲಾ]
ಮೊದಲನೆಯದು ಅಕ್ರಮ ಆಸ್ತಿ ಪ್ರಕರಣ. ಸೋಮವಾರ ಅಥವಾ ಮಂಗಳವಾರ ಸುಪ್ರೀಂ ಕೋರ್ಟ್ ತೀರ್ಪು ಶಶಿಕಲಾ ವಿರುದ್ಧವಾಗಿ ಬಂದರೆ ಆಕೆ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಅನರ್ಹರಾಗುತ್ತಾರೆ. ಒಂದು ವೇಳೆ ಈಗಾಗಲೇ ವಿಧಿಸಿರುವ ನಾಲ್ಕು ವರ್ಷದ ಶಿಕ್ಷೆಯನ್ನು ಎತ್ತಿಹಿಡಿದರೆ ಮುಂದಿನ ಹತ್ತು ವರ್ಷ ಆಕೆ ರಾಜಕೀಯ ಆಟದಿಂದಲೇ ಹೊರಕ್ಕೆ ಹೋಗಬೇಕಾಗುತ್ತದೆ.

ಜನಪ್ರತಿನಿಧಿಗಳ ಕಾಯ್ದೆ ಪ್ರಕಾರ ಅಪರಾಧಿಯು ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಮುಂದಿನ ತಡೆ ಆಕೆ ಪಕ್ಷದ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾದ ರೀತಿಯಲ್ಲೇ ಇದೆ. ಶಶಿಕಲಾ ಯಾವುದೇ 'ಮನೆ'ಯ ಸದಸ್ಯೆಯಲ್ಲ. ಅರ್ಥಾತ್, ಆಕೆ ವಿಧಾನಸಭೆ ಅಥವಾ ಸಂಸತ್ ನ ಸದಸ್ಯೆಯಲ್ಲ.[ಪನ್ನೀರ್ ಸೆಲ್ವಂ ಬೆಂಬಲಕ್ಕೆ ಕಮಲ್ ನಿಂತಿದ್ದೇಕೆ? ಇಲ್ಲಿದೆ ಉತ್ತರ]
ಇನ್ನು ಅಂತಿಮವಾಗಿ ಆಕೆಯನ್ನು ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಮಾತ್ರ ಆಯ್ಕೆ ಮಾಡಲಾಗಿದೆ. ಚುನಾವಣೆ ಆಯೋಗದಲ್ಲಿ ಈ ವಿಚಾರ ತಗಲು ಹಾಕಿಕೊಳ್ಳುತ್ತೆ. ಈ ವಿಚಾರದಲ್ಲಿ ಈಗಾಗಲೇ ಅರ್ಜಿ ಸಲ್ಲಿಸಲಾಗಿದೆ. ಎಐಎಡಿಎಂಕೆ ಮಾಡಿಕೊಂಡಿರುವ ಕಾನೂನಿನ ಪ್ರಕಾರ ಶಶಿಕಲಾ ಅವರು ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಏಕೆಂದರೆ ಸಿಎಂ ಅಗಬಹುದಾದವರು ಪ್ರಧಾನ ಕಾರ್ಯದರ್ಶಿ ಮಾತ್ರ, ಮಧ್ಯಂತರ ಪ್ರಧಾನ ಕಾರ್ಯದರ್ಶಿ ಇಲ್ಲ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications