ಶಶಿಕಲಾ ಕ್ಯಾಂಪ್ ನಿಂದ ಮತ್ತೊಂದು ವಿಕೆಟ್ ಪತನ
ಎಐಎಡಿಎಂಕೆ ಅಧ್ಯಕ್ಷ ಮಧುಸೂಧನನ್ ಅವರು ಶಶಿಕಲಾ ಕ್ಯಾಂಪ್ ನಿಂದ ಹೊರಬಿದ್ದು ಮೊದಲ ಹೊಡೆತ ಕೊಟ್ಟರೆ, ಈಗ ಪಾಂಡಿಯರಾಜನ್ ಅವರು ಪನ್ನೀರ್ ಅವರಿಗೆ ಜೈ ಎಂದು ಮತ್ತಷ್ಟು ಕುತೂಹಲಕ್ಕೆ ಕಾರಣರಾಗಿದ್ದಾರೆ.
ಚೆನ್ನೈ, ಫೆಬ್ರವರಿ 11: ಯಾವುದೇ ಸಿನಿಮಾಗಳಲ್ಲಿ ನೋಡುವ ದೃಶ್ಯಗಳಂತೆ ಶಶಿಕಲಾ ಕ್ಯಾಂಪ್ ನಿಂದ ಒಬ್ಬೊಬ್ಬರಾಗಿ ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಕಡೆ ಹೋಗುತ್ತಿದ್ದಾರೆ. ಶನಿವಾರ ಸಚಿವ ಕೆ.ಪಾಂಡಿಯರಾಜನ್ ತಮ್ಮ ನಿಲುವು ಬದಲಿಸಿ, 'ಎಐಎಡಿಎಂಕೆ ಉಳಿಸುವ ಹೋರಾಟ'ದಲ್ಲಿ ಒಪಿಎಸ್ ನ ಬೆಂಬಲಿಸುವುದಾಗಿ ಹೇಳಿದ್ದಾರೆ.
ಈ ಬೆಳವಣಿಗೆಯಿಂದ ಆತಂಕಗೊಂಡಿರುವ ಶಶಿಕಲಾ ನಟರಾಜನ್ ಆವರು ರಾಜ್ಯಪಾಲರು ಶೀಘ್ರವಾಗಿ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ. ಶಿಕ್ಷಣ ಸಚಿವ ಪಾಂಡಿಯರಾಜನ್ ಕ್ಯಾಂಪ್ ಬದಲಿಸುವ ಬಗ್ಗೆ ಶುಕ್ರವಾರ ಇಡೀ ಟ್ವೀಟ್ ಗಳು ಹರಿದಾಡಿದ್ದವು. "ಅಮ್ಮನ ಗೌರವ ಹಾಗೂ ಎಐಎಡಿಎಂಕೆ ಒಗ್ಗಟ್ಟು ಉಳಿಸುವ ಸಲುವಾಗಿ ನನಗೆ ಮತ ನೀಡಿದವರು ಏನು ಹೇಳುತ್ತಾರೋ ಅದನ್ನು ಕೇಳ್ತೀನಿ" ಎಂದು ಅವರು ಟ್ವೀಟ್ ಮಾಡಿದ್ದರು.[ಗೋಲ್ಡನ್ ಬೇ ರೆಸಾರ್ಟ್ ನಲ್ಲಿ ಎಐಎಡಿಎಂಕೆ ಶಾಸಕರಿಗೆ ಪೊಲೀಸರ ಕ್ವೆಶ್ಚನ್ ಅವರ್]

ತೀರಾ ಈಚಿನವರೆಗೆ ಟ್ವೀಟ್ ನಲ್ಲಿ ಮತ್ತು ಸಾರ್ವಜನಿಕ ಹೇಳಿಕೆಗಳಲ್ಲಿ ಪಾಂಡಿಯರಾಜನ್ ಅವರು ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರನ್ನು ಟೀಕಿಸಿದ್ದರು. ಡಿಎಂಕೆ ಜತೆ ಸೇರಿ ಪಕ್ಷ ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಶಾಸಕರ ಬೆಂಬಲ ಶಶಿಕಲಾ ಅವರಿಗೆ ಇದ್ದರೂ, ಜನಾಭಿಪ್ರಾಯ ಒಪಿಎಸ್ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದಿದೆ.
ಇನ್ನು ಶಶಿಕಲಾ ನಟರಾಜನ್ ಅವರು ಪಕ್ಷದೊಳಗಾಗಲೀ ಹೊರಗಾಗಲೀ ಈ ವರೆಗೆ ಯಾವುದೇ ಚುನಾವಣೆ ಎದುರಿಸಿದವರಲ್ಲ. ದಶಕಗಳಿಂದ ಜಯಲಲಿತಾಗೆ ನಿಕಟವರ್ತಿಯಾಗಿದ್ದ ಕಾರಣಕ್ಕೆ ಎಐಎಡಿಎಂಕೆ ಒಳಗೆ ಶಶಿಕಲಾ ಪರವಾದ ಧ್ವನಿ ಕೇಳಿಬರುತ್ತಿದೆ. ಆ ಕಾರಣಕ್ಕೆ ಕಾರ್ಯಕರ್ತರು ಆಕೆಯನ್ನು 'ಚಿನ್ನಮ್ಮ' (ಅಮ್ಮನ ತಂಗಿ) ಎಂದು ಕರೆಯುತ್ತಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications