ಪನ್ನೀರ್ ಸೆಲ್ವಂ ರಾಜೀನಾಮೆ, ಸಿಎಂ ಪಟ್ಟಕ್ಕೆ ಶಶಿಕಲಾ ನಟರಾಜನ್
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರನ್ನು ತಮಿಳುನಾಡಿನ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ಸಿಎಂ ಪನ್ನೀರ್ ಸೆಲ್ವಂ ರಾಜೀನಾಮೆ ನೀಡಿದ್ದು, ಶಶಿಕಲಾ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.
ಚೆನ್ನೈ, ಫೆಬ್ರವರಿ 05: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರನ್ನು ತಮಿಳುನಾಡಿನ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ಸಿಎಂ ಪನ್ನೀರ್ ಸೆಲ್ವಂ ರಾಜೀನಾಮೆ ನೀಡಿದ್ದು, ಶಶಿಕಲಾ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಮುಂದಿನ ವಾರದಲ್ಲಿ ಶುಭ ದಿನವೊಂದನ್ನು ನೋಡಿ ಶಶಿಕಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
ಭಾನುವಾರ ಮಧ್ಯಾಹ್ನ ನಡೆದ ಎಐಎಡಿಎಂಕೆ ಶಾಸಕಾಂಗ ಸಭೆಯಲ್ಲಿ ಚಿನ್ನಮ್ಮ ಶಶಿಕಲಾ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು. ಶಶಿಕಲಾ ಅವರ ಹೆಸರನ್ನು ಓ ಪನ್ನೀರ್ ಸೆಲ್ವಂ ಅವರು ಪ್ರಸ್ತಾಪಿಸಿದರು. [ಸಿಎಂ ಹುದ್ದೆಗೆ ಶಶಿಕಲಾ: ಪ್ರಧಾನಿ ಮೋದಿ ಭಯ ಕಾಡಿತೇ?]

ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಶಶಿಕಲಾ, ನಿಮ್ಮೆಲ್ಲರ ಆಯ್ಕೆಯಂತೆ ಸಿಎಂ ಆಗಲು ಒಪ್ಪಿಕೊಂಡಿದ್ದೇನೆ. ನಮ್ಮ ಪ್ರೀತಿಯ 'ಅಮ್ಮ' ತೋರಿಸಿದ ಹಾದಿಯಲ್ಲೇ ಸಾಗೋಣ, ಅವರ ಕನಸು ನನಸು ಮಾಡೋಣ ಎಂದಿದ್ದಾರೆ.
ರಾಜ್ಯಪಾಲ ವಿದ್ಯಾಸಾಗರ್ ಅವರಿಗೆ ಶಾಸಕಾಂಗ ಪಕ್ಷದ ನಿರ್ಣಯವನ್ನು ಫ್ಯಾಕ್ಸ್ ಮೂಲಕ ಕಳಿಸಲಾಗಿದೆ. ಶಶಿಕಲಾ ಅವರು ಜ್ಯೋತಿಷಿಗಳ ಸಲಹೆ ಮೇರೆಗೆ ಫೆಬ್ರವರಿ 6, 7 ಅಥವಾ 9ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಮರೀನಾ ಬೀಚಿನಲ್ಲಿರುವ ಜಯಲಲಿತಾ ಅವರ ಸಮಾಧಿ ಸ್ಥಳದ ಬಳಿ ಪ್ರಮಾಣ ವಚನ ಸ್ವೀಕಾರ ಸಮಾಂಭ ನಡೆಯುವ ಸಾಧ್ಯೆತೆಯಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications