ಮತದಾರರ ಪಟ್ಟಿಯಲ್ಲಿ ಶಶಿಕಲಾ ಹೆಸರಿಲ್ಲ; ಚುನಾವಣಾಧಿಕಾರಿಗೆ ದೂರು
ಚೆನ್ನೈ, ಏಪ್ರಿಲ್ 6: ಮಾಜಿ ಸಿಎಂ ದಿ. ಜಯಲಲಿತಾ ಅವರ ಆಪ್ತೆ, ಶಶಿಕಲಾ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಲಾಗಿದ್ದು, ಇದು ಅನ್ಯಾಯ ಎಂದು ಅವರ ಕಾನೂನು ಸಲಹಾಗಾರರು ಆರೋಪಿಸಿದ್ದಾರೆ.
ಈ ಕುರಿತು ಶಶಿಕಲಾ ಅವರಿಗೆ ಬೇಸರವಾಗಿದೆ. ಇದಕ್ಕೆ ಜವಾಬ್ದಾರರಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇಂದು ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತದೆ. ಥೌಸಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿದ್ದ ಶಶಿಕಲಾ ಹೆಸರನ್ನು ಅಳಿಸಿಹಾಕಲಾಗಿದೆ. ಶಶಿಕಲಾ ಅವರು ಈ ಮುನ್ನ ಜಯಲಲಿತಾ ಅವರ ಪೋಸ್ ಗಾರ್ಡನ್ ನಿವಾಸದಲ್ಲಿದ್ದು, ಆನಂತರ ಎಐಎಡಿಎಂಕೆ ಸರ್ಕಾರ ಆ ಸ್ಥಳವನ್ನು ಸ್ಮಾರಕವಾಗಿಸಲು ಸುಪರ್ದಿಗೆ ತೆಗೆದುಕೊಂಡಿದೆ ಎಂದು ಎನ್ ರಾಜಾ ಸೆಂತೂರು ಪಾಂಡಿಯನ್ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಸಮಯ ಜನವರಿ 31, 2019ರಲ್ಲಿ ಶಶಿಕಲಾ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ ಎಂದು ರಾಜಾ ಅವರು ಆರೋಪಿಸಿದ್ದಾರೆ. ಈ ವಿಷಯ ಕಳೆದ ತಿಂಗಳು ಗಮನಕ್ಕೆ ಬಂದಿದ್ದು, ಹೆಸರು ಅಳಿಸುವ ಮುನ್ನ ಯಾವುದೇ ನೋಟೀಸ್ ನೀಡಿಲ್ಲ. ಇದು ಅನ್ಯಾಯ ಎಂದು ಮುಖ್ಯ ಚುನಾವಣಾಧಿಕಾರಿ ಸತ್ಯಬ್ರಾತ ಸಾಹೂ ಅವರಿಗೆ ಪತ್ರ ಬರೆದಿದ್ದಾರೆ.
ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು, ಅಳಿಸಲು ಕೊನೆಯ ದಿನಾಂಕವು ಮುಗಿದಿದೆ ಎಂದು ಸಾಹೂ ಅವರು ತಿಳಿಸಿದ್ದಾರೆ. ಆದರೆ ಯಾಕೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಮೊದಲು ನೋಟೀಸ್ ನೀಡಿಲ್ಲ ಎಂದು ರಾಜಾ ಅವರು ಪ್ರಶ್ನಿಸಿದ್ದಾರೆ. ಇದಕ್ಕೆ ಯಾರು ಹೊಣೆಗಾರರು ತಿಳಿದಿಲ್ಲ. ಚುನಾವಣೆ ನಡೆದ ನಂತರ ಈ ವಿಷಯದ ಕುರಿತು ವಿಚಾರಣೆ ನಡೆಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಉತ್ತರಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications