ಫೆ.7ಕ್ಕೆ ಚೆನ್ನೈಗೆ ಶಶಿಕಲಾ; ಬದಲಾದ ರಾಜಕೀಯ ಚಿತ್ರಣ?
ಚೆನ್ನೈ, ಫೆಬ್ರುವರಿ 03: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ಅವಧಿ ಪೂರೈಸಿರುವ ಎಐಎಡಿಎಂಕೆ ಉಚ್ಚಾಟಿತ ನಾಯಕಿ, ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಇದೇ ಫೆಬ್ರುವರಿ 7ರಂದು ತಮಿಳುನಾಡಿಗೆ ಮರಳಲಿದ್ದಾರೆ. ಆದರೆ ಅವರು ತಮಿಳುನಾಡಿಗೆ ಮರಳುತ್ತಿರುವ ಸಂಗತಿ ರಾಜ್ಯ ರಾಜಕೀಯದ ಚಿತ್ರಣ ಬದಲಿಸುವಂತೆ ಕಾಣುತ್ತಿದೆ.
ಶಶಿಕಲಾ ಅವರು ಬಿಡುಗಡೆಯಾಗುತ್ತಿದ್ದಂತೆ, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಬೇಕೆಂದು ಶಶಿಕಲಾ ಪರ ಕಾರ್ಯಕರ್ತರು ತಮಿಳುನಾಡಿನಲ್ಲಿ ಕೆಲವು ತಿಂಗಳ ಹಿಂದೆ ಭಾರೀ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಇದೀಗ ಫೆಬ್ರುವರಿ 7ರಂದು ಅವರು ಮರಳಲಿದ್ದು, ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಮೂಲಗಳ ಪ್ರಕಾರ ಫೆಬ್ರುವರಿ 7ರಂದು ತಮಿಳುನಾಡಿಗೆ ಪ್ರಯಾಣ ಬೆಳೆಸಲಿರುವ ಶಶಿಕಲಾ ನಟರಾಜನ್ ಮೊದಲು ಚೆನ್ನೈನಲ್ಲಿನ ಜಯಲಲಿತಾ ಅವರ ಸ್ಮಾರಕಕ್ಕೆ ಭೇಟಿ ನೀಡಲಿರುವರು ಎನ್ನಲಾಗಿದೆ. ಆದರೆ ಇದೇ ಸಮಯದಲ್ಲಿ ಸ್ಮಾರಕವನ್ನು ಮುಚ್ಚಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಶಶಿಕಲಾ ಬಿಡುಗಡೆಯಾದ ದಿನವೇ ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಅವರು ಜಯಲಲಿತಾ ಸ್ಮಾರಕವನ್ನು ಉದ್ಘಾಟನೆ ಮಾಡಿದ್ದರು.

ಬಾಕಿ ಉಳಿದಿರುವ ಕೆಲಸ ಪೂರೈಸಲು ಸ್ಮಾರಕವನ್ನು ಮುಚ್ಚಿರುವುದಾಗಿ ಲೋಕೋಪಯೋಗಿ ಇಲಾಖೆ ತಿಳಿಸಿದೆ. ಆದರೆ ಸ್ಮಾರಕವನ್ನು ಹೀಗೇ ಏಕಾಏಕಿ ಮುಚ್ಚಿರುವ ಕುರಿತು ಪ್ರಶ್ನೆಗಳು ಎದ್ದಿವೆ. ಇನ್ನೂ ಸ್ಮಾರಕದ ಕೆಲಸ ಪೂರ್ಣಗೊಂಡಿಲ್ಲ ಎಂದ ಮೇಲೆ ಅದನ್ನು ತರಾತುರಿಯಲ್ಲಿ ಉದ್ಘಾಟನೆ ಮಾಡುವ ಅವಸರವಾದರೂ ಏನಿತ್ತು ಎಂದು ಕೇಳಲಾಗಿದೆ. ಎಐಎಡಿಎಂಕೆ ಧ್ವಜವನ್ನು ಶಶಿಕಲಾ ಅವರು ತಮ್ಮ ಕಾರಿಗೆ ಬಳಸಿಕೊಂಡಿದ್ದಕ್ಕೆ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಕೂಡ ಶಾಕ್ ನಲ್ಲಿದ್ದರು ಎನ್ನಲಾಗಿದೆ.
ಈಚೆಗೆ ಶಶಿಕಲಾ ಅವರಿಗೆ ಸ್ವಾಗತ ಕೋರಿ ಬ್ಯಾನರ್ ಹಾಕಿದ್ದಕ್ಕೆ ಎಐಎಡಿಎಂಕೆ ಸದಸ್ಯರೊಬ್ಬರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಸಂಗತಿಯೂ ನಡೆದಿತ್ತು. ಈ ಎಲ್ಲಾ ಅಂಶಗಳು ರಾಜ್ಯ ರಾಜಕೀಯದ ಚಿತ್ರಣ ಬದಲಾಗುವುದರ ಮುನ್ಸೂಚನೆ ನೀಡಿದಂತಿವೆ.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications