ಜಯಾ ಕೊನೆಯ ದಿನಗಳ ವಿಡಿಯೋ ಹಾಕ್ತೀನಿ ಎಂದ ಶಶಿಕಲಾ ಸಂಬಂಧಿ
ಫೇಸ್ ಬುಕ್ ನಲ್ಲಿ ಈತ ನೀಡಿರುವ ಈ ಹೇಳಿಕೆಯು, ಶಶಿಕಲಾ ವಿರುದ್ಧ ಸಡ್ಡು ಹೊಡೆದಿರುವ ಮಾಜಿ ಮುಖ್ಯಮಂತ್ರಿ ಪನ್ನಿರ್ ಸೆಲ್ವಂ ಅವರ ಗುಂಪಿನ ಟೀಕೆಗಳಿಗೆ ಉತ್ತರ ಎಂಬಂತಿದೆ.
ಚೆನ್ನೈ, ಏಪ್ರಿಲ್ 21: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆಯಾದ ಶಶಿಕಲಾ ನಟರಾಜನ್ (ವಿ.ಕೆ. ಶಶಿಕಲಾ) ಅವರೊಂದಿಗೆ ಜಯಲಲಿತಾ ಅವರು ತಮ್ಮ ಕೊನೆಯ ದಿನಗಳಲ್ಲಿ ಹೇಗಿದ್ದರು ಎಂಬುದಕ್ಕೆ ಸಾಕ್ಷಿಯಾಗಿ ತಮ್ಮಲ್ಲಿ ಕೆಲವಾರು ವೀಡಿಯೋ ತುಣುಕುಗಳಿದ್ದು, ಅವುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಶಶಿಕಲಾ ಸೋದರ ಸಂಬಂಧಿ ಜಯನಾಥ್ ದಿವಾಕರನ್ ಎಂಬಾತ ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದಾನೆ.
ಫೇಸ್ ಬುಕ್ ನಲ್ಲಿ ಈತ ನೀಡಿರುವ ಈ ಹೇಳಿಕೆಯು, ಶಶಿಕಲಾ ವಿರುದ್ಧ ಸಡ್ಡು ಹೊಡೆದಿರುವ ಮಾಜಿ ಮುಖ್ಯಮಂತ್ರಿ ಪನ್ನಿರ್ ಸೆಲ್ವಂ ಅವರ ಗುಂಪಿನ ಟೀಕೆಗಳಿಗೆ ಉತ್ತರ ಎಂಬಂತಿದೆ.[ಇಂಗ್ಲಿಷ್ ಕಲಿಯಬೇಕು ಅಂತಿದ್ದಾರೆ ಜೈಲಿನಲ್ಲಿರುವ ಶಶಿಕಲಾ]

ಜಯಲಲಿತಾ ಅವರ ಸಾವಿನ ನಂತರ ನಡೆದಿದ್ದ ರಾಜಕೀಯ ವಿದ್ಯಮಾನಗಳಲ್ಲಿ ಪನ್ನೀರ್ ಸೆಲ್ವಂ ಬಣವು, ಶಶಿಕಲಾ ಹಾಗೂ ಅವರ ಆಪ್ತರು ಸೇರಿಕೊಂಡು ಜಯಲಲಿತಾ ಅವರನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿತ್ತು.
ಇದನ್ನು ತಮ್ಮ ಫೇಸ್ ಬುಕ್ ಹೇಳಿಕೆಯಲ್ಲಿ ಉಲ್ಲೇಖಿಸಿರುವ ದಿವಾಕರನ್, ''ಜಯಲಲಿತಾ ಹಾಗೂ ಶಶಿಕಲಾ ನಡುವಿನ ಅನ್ಯೋನ್ಯತೆ ಎಷ್ಟಿತ್ತು ಎಂಬುದನ್ನು ನಾನು ಬಲ್ಲೆ. ಅದಕ್ಕೆ ಸಾಕ್ಷಿಯೆಂಬಂತೆ ಜಯಲಲಿತಾ ಅವರ ಕೊನೆಯ ದಿನಗಳಲ್ಲಿ ಅವರ ಹಾಗೂ ಶಶಿಕಲಾ ನಡುವಿನ ಬಾಂಧವ್ಯವನ್ನು ಬಿಂಬಿಸುವ ವೀಡಿಯೋಗಳು ನನ್ನಲ್ಲಿವೆ. ಜಯಲಲಿತಾ ಅವರು ತಮ್ಮ ಕೊನೆಯ ದಿನಗಳನ್ನು ಕಳೆದ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಅವುಗಳನ್ನು ಚಿತ್ರೀಕರಿಸಲಾಗಿದೆ'' ಎಂದಿದ್ದಾರೆ.
''ನಾನು ಆ ವಿಡಿಯೋಗಳನ್ನು ಫೇಸ್ ಬುಕ್ ನಲ್ಲಿ ಹಾಕಿದರೆ ಹೇಗಿರುತ್ತೆ? ಜಯಲಲಿತಾ ಅವರದ್ದು ಸಹಜ ಸಾವಲ್ಲ ಎಂದು ದನಿಯೆತ್ತಿದ್ದ ಪನ್ನೀರ್ ಸೆಲ್ವಂ ಬಣದ ಪಿಎಚ್ ಪಾಂಡಿಯನ್ ಹಾಗೂ ಮನೋಜ್ ಕೆ. ಪಾಂಡಿಯನ್ ಅವರ ಪರಿಸ್ಥಿತಿ ಹೇಗಿರುತ್ತೆ?'' ಎಂದು ದಿವಾಕರನ್ ಹೇಳಿಕೊಂಡಿರುವುದು ಹೊಸ ಕುತೂಹಲಕ್ಕೆ ಕಾರಣವಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications