ಸೆರೆವಾಸ ಮುಗಿಸಿ ತಮಿಳುನಾಡಿಗೆ ಮರಳಿದ ಶಶಿಕಲಾ ಹೇಳಿದ್ದೇನು?
ತಿರುಪತೂರು,ಫೆಬ್ರವರಿ 09: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ನಾಲ್ಕು ವರ್ಷಗಳ ಬಳಿಕ ಬಿಡುಗಡೆಯಾಗಿ ತಮಿಳುನಾಡಿಗೆ ಮರಳಿದ್ದಾರೆ.
ಇದೀಗ ಅವರ ಮುಂದಿನ ನಡೆ ಕುರಿತು ಸ್ಪಷ್ಟಪಡಿಸಿದ್ದು, ಸಕ್ರಿಯ ರಾಜಕಾರಣಕ್ಕೆ ಮರಳುವ ಕುರಿತು ಮಾಹಿತಿ ನೀಡಿದ್ದಾರೆ.ನಾನು ಎಂದಿಗೂ ದಬ್ಬಾಳಿಕೆಗೆ ಒಳಗಾಗಿ ಗುಲಾಮಳಾಗುವುದಿಲ್ಲ. ಸಕ್ರಿಯ ರಾಜಕೀಯದಲ್ಲಿ ನನ್ನನ್ನು ನಾನು ತೊಡಗಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಶಶಿಕಲಾ ಜೊತೆ ಜೈಲು ಸೇರಿದ್ದ ಅವರ ಆಪ್ತೆ ಇಳವರಸಿ ಮತ್ತು ಸಂಬಂಧಿ ಟಿ.ಟಿ ದಿನಕರನ್ ಕೂಡ ಜೈಲಿನಿಂದ ರಿಲೀಸ್ ಆಗಿದ್ದು, ಅವರು ಕೂಡ ಶಶಿಕಲಾ ಅವರೊಂದಿಗೆ ಚೆನ್ನೈಗೆ ತೆರಳಿದ್ದಾರೆ.

ತಮಿಳುನಾಡು ಜನರಿಗೆ ನಾನು ಋಣಿ
ಜೈಲಿನಿಂದ ಬಿಡುಗಡೆಯಾಗಿ,ಕೋವಿಡ್ -19ಗೆ ಚಿಕಿತ್ಸೆ ಪಡೆದ ಬೆಂಗಳೂರಿನಿಂದ ತಮಿಳುನಾಡು ತಲುಪಿದ ನಂತರ ಮೊದಲ ಬಾರಿಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶಶಿಕಲಾ, ನಾನು ತಮಿಳುನಾಡಿನ ಜನರಿಗೆ ಋಣಿಯಾಗಿದ್ದೇನೆ. ಆದರೆ ದಬ್ಬಾಳಿಕೆಯಿಂದ ನಾನು ಹತಾಶಳಾಗುವುದಿಲ್ಲ ಎಂದಿದ್ದಾರೆ.

ಸಕ್ರಿಯ ರಾಜಕಾರಣದಲ್ಲಿರುತ್ತೇನೆ
ನಾನು ಪಕ್ಷದ ಕಾರ್ಯಕರ್ತರಿಗಾಗಿ ಸಕ್ರಿಯ ರಾಜಕಾರಣದಲ್ಲಿರುತ್ತೇನೆ. ತಮಿಳು ನೀತಿ ಮತ್ತು ನಾನು ಕೈಗೊಂಡ ತತ್ವಗಳಿಗೆ ಬದ್ಧನಾಗಿರುತ್ತೇನೆ. ಆದರೆ ದಬ್ಬಾಳಿಕೆಯಿಂದ ನಾನು ಎಂದಿಗೂ ಗುಲಾಮಳಾಗಲು ಸಾಧ್ಯವಿಲ್ಲ" ಎಂದು ತಮ್ಮ ನಿಷ್ಠಾವಂತರಿಗೆ ಶಶಿಕಲಾ ತಿಳಿಸಿದ್ದಾರೆ.

ಶಶಿಕಲಾಗೆ ತಮಿಳುನಾಡಿನಲ್ಲಿ ಅದ್ಧೂರಿ ಸ್ವಾಗತ
ಬೆಳಗ್ಗೆ 7.30ಕ್ಕೆ ನಂದಿಬೆಟ್ಟದ ಬಳಿ ಇರುವ ರೆಸಾರ್ಟ್ನಿಂದ ಹೊರಟ ಶಶಿಕಲಾ ಅವರಿಗೆ ತಮಿಳುನಾಡಿನಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದ್ದು, ಬೆಂಬಲಿಗರು ಕುಂಬಳಕಾಯಿ ಒಡೆದು, ಕುಣಿದು ಕುಪ್ಪಳಿಸಿ ಸ್ವಾಗತ ಕೋರಿದ್ದಾರೆ.

ಎಐಡಿಎಂಕೆ ಕಚೇರಿಗೆ ಭೇಟಿ ನೀಡುತ್ತಾರಾ? ಶಶಿಕಲಾ
ಚೆನ್ನೈನ ಎಐಎಡಿಎಂಕೆ ಕೇಂದ್ರ ಕಚೇರಿಗೆ ಭೇಟಿ ನೀಡುತ್ತೀರಾ? ಎಂಬ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಯಲಲಿತಾ ಆಪ್ತೆ, ದಯವಿಟ್ಟು ಕಾದು ನೋಡಿ ಎಂದಷ್ಟೇ ಹೇಳಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications