ತೂತುಕುಡಿ ಲಾಕಪ್ ಡೆತ್: ಆರೋಪಿ ಪೊಲೀಸ್ ಅಧಿಕಾರಿ ಕೊರೊನಾ ವೈರಸ್ಗೆ ಬಲಿ
ಮದುರೆ, ಆಗಸ್ಟ್ 10: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿದ್ದ ತಮಿಳುನಾಡಿನ ಸತ್ತಾನ್ ಕುಳಂ ಲಾಕಪ್ ಡೆತ್ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಸ್ಪೆಷಲ್ ಸಬ್ ಇನ್ಸ್ಪೆಕ್ಟರ್ ಆಫ್ ಪೊಲೀಸ್ ಪೌಲ್ದುರೈ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ತೂತುಕುಡಿಯಲ್ಲಿ ನಡೆದಿದ್ದ ಎದೆ ನಡುಗಿಸುವ ಕಸ್ಟಡಿಯಲ್ ಡೆತ್ ಕೇಸ್ನಲ್ಲಿ ತಂದೆ ಮಗನ ಸಾವಿಗೆ ಕಾರಣರಾದ ಆರೋಪ ಹೊತ್ತಿರುವ 10 ಮಂದಿಯಲ್ಲಿ ಪೌಲ್ ದುರೈ ಒಬ್ಬರು. ಅವರು ಸರ್ಕಾರಿ ರಾಜಾಜಿ ಆಸ್ಪತ್ರೆಯಲ್ಲಿ ಸೋಮವಾರ ನಸುಕಿನಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ತೂತುಕುಡಿಯ ಸತ್ತಾನ್ ಕುಳಂನಲ್ಲಿ ವ್ಯಾಪಾರಿಗಳಾದ ತಂದೆ ಮಗ, ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಅವಧಿ ಮೀರಿ ಅಂಗಡಿ ತೆರೆದಿದ್ದಕ್ಕೆ ಕಸ್ಟಡಿಯಲ್ಲಿ ಇರಿಸಿಕೊಂಡು ದೌರ್ಜನ್ಯ ಎಸಗಿ ಅವರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಜುಲೈ 5ರಂದು 56 ವರ್ಷದ ಪೌಲ್ ದುರೈ ಅವರನ್ನು ಬಂಧಿಸಲಾಗಿತ್ತು.

ಮದುರೆ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದ್ದ ಪೌಲ್ ದುರೈ ಅವರಲ್ಲಿ ಜುಲೈ 24ರಂದು ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪೌಲ್ ದುರೈ ಪತ್ನಿ ಮಂಗಯಾರ್ದಿಲಗಂ ಮದುರೆ ಪೊಲೀಸ್ ಕಮಿಷನರ್ ಪ್ರೇಮ್ ಆನಂದ್ ಸಿನ್ಹಾ ಅವರಿಗೆ ಆಗಸ್ಟ್ 8ರಂದು ಅರ್ಜಿ ಸಲ್ಲಿಸಿದ್ದರು. ಪತಿಯನ್ನು ತಮ್ಮ ಊರು ಕನ್ಯಾಕುಮಾರಿಯಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಸಲುವಾಗಿ ಅವರನ್ನು ಕರೆದೊಯ್ಯಲು ಅನುಮತಿ ಕೋರಿದ್ದರು.
ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪತಿಯಲ್ಲಿ, ವಾರಗಳು ಉರುಳಿದರೂ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಇತ್ತೀಚೆಗೆ ಅವರ ಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದೆ. ಹೀಗಾಗಿ ಅವರಿಗೆ ಹೆಚ್ಚಿನ ಗುಣಮಟ್ಟದ ಚಿಕಿತ್ಸೆಯ ಅಗತ್ಯವಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದರು. ಸೋಮವಾರ ನಸುಕಿನ 2.30ರ ಸಮಯಕ್ಕೆ ಪೌಲ್ ದುರೈ ಅಸುನೀಗಿದ್ದಾರೆ ಎಂದು ವರದಿಯಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications