ವೇದಾಂತ ಸಂಸ್ಥೆ ತಾಮ್ರ ಘಟಕ ಮತ್ತೆ ಆರಂಭಕ್ಕೆ ಸುಪ್ರೀಂ ಹಸಿರು ನಿಶಾನೆ
ಚೆನ್ನೈ/ನವದೆಹಲಿ, ಜನವರಿ 09: ದೇಶದೆಲ್ಲೆಡೆ ಭಾರಿ ಚರ್ಚೆಗೊಳಪಟ್ಟಿದ್ದ, ಗಲಭೆ, ಹಿಂಸಾಚಾರ ಪೊಲೀಸರ ಗೋಲಿಬಾರ್, 13 ಜನರ ಸಾವಿಗೆ ಕಾರಣವಾಗಿದ್ದ ವೇದಾಂತ ಸಮೂಹ ಸಂಸ್ಥೆಯ ಸ್ಟರ್ಲೈಟ್ ತಾಮ್ರ ಘಟಕ ಮತ್ತೆ ಆರಂಭಕ್ಕೆ ಸುಪ್ರೀಂಕೋರ್ಟ್ ಕೂಡಾ ಹಸಿರು ನಿಶಾನೆ ತೋರಿದೆ.
ತೂತ್ತುಕುಡಿ ಸ್ಟರ್ಲೈಟ್ ಕಾಪರ್ ಕಾರ್ಖಾನೆಗೆ ರಾಷ್ಟ್ರೀಯ ಹಸಿರು ಪ್ರಾಧಿಕಾರಿ(ಎನ್ ಜಿಟಿ) ಡಿಸೆಂಬರ್ ತಿಂಗಳಿನಲ್ಲಿ ಗ್ರೀನ್ ಸಿಗ್ನಲ್ ನೀಡಿತ್ತು. ವೇದಾಂತ ಸಮೂಹ ಸಂಸ್ಥೆಗೆ ಮೂರು ವಾರದೊಳಗೆ ಹೊಸ ಲೈಸನ್ಸ್ ನವೀಕರಣ ನೀಡಬೇಕೆಂದು ತಮಿಳುನಾಡು ಪರಿಸರ ನಿಯಂತ್ರಣ ಮಂಡಳಿಗೆ ಸೂಚಿಸಿತ್ತು. ಎನ್ ಜಿಟಿ ಆದೇಶಕ್ಕೆ ತಡೆ ನೀಡುವಂತೆ ಕೋರಿ, ಸುಪ್ರೀಂಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ತಾಮ್ರ ಘಟಕದಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು, ಘಟಕದ ಸುತ್ತಮುತ್ತ ವಾಸಿಸುವ ಗ್ರಾಮಗಳು ಜನರು ನಿರಂತರವಾಗಿ ಅನಾರೋಗ್ಯದ ಸಮಸ್ಯೆಗೆ ತುತ್ತಾಗುತ್ತಿದ್ದಾರೆ.
ಹೀಗಾಗಿ ಘಟಕವನ್ನು ಸ್ಥಗಿತಗೊಳಿಸುವಂತೆ ಕಾನೂನು ಸಮರ ಮತ್ತು ಪ್ರತಿಭಟನೆಗಳು ತೀವ್ರಗೊಂಡಿತ್ತು. ಪೊಲೀಸರ ಗುಂಡೇಟಿಗೆ 12 ಮಂದಿ ಬಲಿಯಾದರು. ತಾಮ್ರ ಘಟಕ ಮುಚ್ಚಲು ತಮಿಳುನಾಡು ಸರ್ಕಾರವು ಕಳೆದ ವರ್ಷ ಮೇ ತಿಂಗಳಿನಲ್ಲಿ ಆದೇಶಿಸಿದ್ದನ್ನು ಇಲ್ಲಿ ಸ್ಮರಿಸಬಹುದು.(ಪಿಟಿಐ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications