ಪ್ರಜಾಪ್ರಭುತ್ವದ ಮೇಲಿನ ಆಕ್ರಮಣ: ಕಿಡಿಕಾರಿದ ಕಮಲ್ ಹಾಸನ್
Recommended Video
ಚೆನ್ನೈ, ಆಗಸ್ಟ್ 05: ಸಂವಿಧಾನದ 370 ನೇ ವಿಧಿಯನ್ನು ರದ್ದು ಮಾಡಿರುವುದು ಪ್ರಜಾಪ್ರಭುತ್ವದ ಮೇಲಿನ ಆಕ್ರಮಣ ಎಂದು ಮಕ್ಕಳ್ ನೀಧಿ ಮಯ್ಯಮ್ ಮುಖ್ಯಸ್ಥ, ನಟ ಕಮಲ್ ಹಾಸನ್ ಕಿಡಿಕಾರಿದ್ದಾರೆ.
ಇಂಥ ಮಹತ್ವದ ನಿರ್ಧಾರ ತೆಗೆದುಕೊಳ್ಳುವಾಗ ಸರ್ಕಾರ ಸಾಕಷ್ಟು ಸಮಾಲೋಚನೆ ನಡೆಸಬೇಕಿತ್ತು. ಆದರೆ ವಿಪಲಕ್ಷಗಳನ್ನು ಬಲವಂತವಾಗಿ ಬಾಯಿಮುಚ್ಚಿಸುವ ಮೂಲಕ ಕೇಮದ್ರ ಸರ್ಕಾರ ಪ್ರಜಾಪ್ರಭುತ್ವವನ್ನು ಕೊಂದುಹಾಕಿದೆ ಎಂದು ಕಮಲ್ ಹಾಸನ್ ಹೇಳಿದರು.
ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು : ಯಾರು, ಏನು ಹೇಳಿದರು?
ಈ ಸರ್ಕಾರ ಮಾಡಿದ ಅತ್ಯಂತ ಕೆಟ್ಟ ಮತ್ತು ನಿರುಂಕುಶವಾದಿ ನಿರ್ಧಾರಗಳಲ್ಲಿ ಅಪನಗದೀಕರಣ ಮತ್ತು ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ್ದು ಅಗ್ರಪಂಕ್ತಿಯಲ್ಲಿ ನಿಲ್ಲುತ್ತವೆ ಎಂದು ಅವರು ಹೇಳಿದರು.

370 ನೇ ವಿಧಿಯನ್ನು ರದ್ದುಗೊಳಿಸಲು ಸರ್ಕಾರ ಹೋದ ಹಾದಿಯನ್ನು ನಾನು ಖಂಡಿಸುತ್ತೇನೆ. ಇದನ್ನು ನಮ್ಮ ಪಕ್ಷ ಬೆಂಬಲಿಸುವುದಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದರು.
ಆದರೆ ಕಾಂಗ್ರೆಸ್ ನ ಕೆಲವು ನಾಯಕರೇ ಎನ್ ಡಿಎ ಸರ್ಕಾರದ ಈ ನಡೆಯನ್ನು ಸ್ವಾಗತಿಸಿದ್ದು, ಕಾಂಗ್ರೆಸ್ ಮುಖಂಡ ಜನಾರ್ದನ ದ್ವಿವೇದಿ ಮಾತನಾಡಿ, ನನ್ನ ರಾಜಕೀಯ ಗುರು ರಾಮ್ ಮನೋಹರ್ ಲೋಹಿಯಾ ಅವರು ಯಾವತ್ತಿಗೂ ಈ ವಿಧಿಯನ್ನು ವಿರೋಧಿಸಿದ್ದರು. ಇತಿಹಾಸದಲ್ಲಿ ಮಾಡಿದ್ದ ತಪ್ಪನ್ನು ಈಗ ಸರಿಪಡಿಸಲಾಗಿದೆ ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications