ಜಲ್ಲಿಕಟ್ಟು : 7 ಜನರ ಬದುಕಿನ ಆಟ ನಿಲ್ಲಿಸಿದ ಕರಾಳ ಭಾನುವಾರ
ತಮಿಳುನಾಡಿನ ವಿವಿಧೆಡೆ ಭಾನುವಾರ ನಡೆದ ಜಲ್ಲಿಕಟ್ಟು ಕ್ರೀಡೆಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಆಯೋಜಕರು ಸರಿಯಾದ ನಿಯಮಗಳನ್ನು ಪಾಲಿಸದೆ ಅನಾಹುತ ಸಂಭವಿಸಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿದೆ
ಚೆನ್ನೈ, ಫೆಬ್ರವರಿ 13: ತಮಿಳುನಾಡಿನ ವಿವಿಧೆಡೆ ಭಾನುವಾರ ನಡೆದ ಜಲ್ಲಿಕಟ್ಟು ಕ್ರೀಡೆಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಕೃಷ್ಣಗಿರಿ ಜಿಲ್ಲೆಯಲ್ಲಿ ಮೂವರು ಪ್ರೇಕ್ಷಕರು ಮೃತಪಟ್ಟಿದ್ದರೆ, ವೆಲ್ಲೂರು ಜಿಲ್ಲೆಯಲ್ಲಿ ಇಬ್ಬರು, ಮದುರೈ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಕೃಷ್ಣಗಿರಿಯಲ್ಲಿ ಹೋರಿ ಕೆಳಗೆ ಬೀಳಿಸಿ ಇಬ್ಬರು ಮೃತಪಟ್ಟಿದ್ದರೆ, ಒಬ್ಬ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಒಬ್ಬ ವ್ಯಕ್ತಿ ಮದ್ಯಪಾನ ಮಾಡಿದ್ದ. ಗುಂಪಿನಲ್ಲಿ ಹೋರಿಯನ್ನು ತಡೆಯುವ ಯತ್ನದಲ್ಲಿದ್ದಾಗ ಕೆಳಗೆ ಬಿದ್ದ ಆತ ಉಸಿರುಗಟ್ಟಿ ಸತ್ತಿದ್ದಾನೆ. ಇನ್ನು ಅರವತ್ತು ವರ್ಷದ ವ್ಯಕ್ತಿಯೊಬ್ಬರನ್ನು ಹೋರಿ ಕೆಳಗೆ ಬೀಳಿಸಿದ್ದರಿಂದ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿದ್ದಾರೆ.[ಜಲ್ಲಿಕಟ್ಟಿನಿಂದ ನಾವು ಕಲಿತಿದ್ದೇನು? ರವಿಶಂಕರ್ ಗುರೂಜಿ ಬರೆಯುತ್ತಾರೆ]

ವೆಲ್ಲೂರಿನ ಬರಗೂರಿನಲ್ಲಿ 34 ವರ್ಷದ ವ್ಯಕ್ತಿಯೊಬ್ಬರ ಕಾಲು ಹಗ್ಗಕ್ಕೆ ಸಿಕ್ಕಿಹಾಕಿಕೊಂಡು, ಹೋರಿ ಕೆಳಗೆ ಬೀಳಿಸಿದೆ. ಅವರಿಗೂ ತಲೆಗೆ ಗಂಭೀರ ಗಾಯವಾಗಿ, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಆಯೋಜಕರು ಆಟದ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡದ ಕಾರಣಕ್ಕೆ ಸಾವು ಸಂಭವಿಸಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿದೆ.[ಜಲ್ಲಿಕಟ್ಟು ಮಸೂದೆಗೆ ತಡೆ ನೀಡಲು ಸುಪ್ರಿಂ ನಕಾರ]
ಕ್ರೀಡೆ ನಡೆಯುವ ವೇಳೆ ಬ್ಯಾರಿಕೇಡ್ ಇರಲಿಲ್ಲ. ಪ್ರೇಕ್ಷಕರು ಹಾಗೂ ಹೋರಿಗಳ ಮಧ್ಯೆ ಅಂತರ ಇರುವಂತೆ ವ್ಯವಸ್ಥೆ ಮಾಡಿರಲಿಲ್ಲ ಎಂದು ವರದಿಯಾಗಿದೆ. ಈ ಮಧ್ಯೆ ಹತ್ತೊಂಬತ್ತು ವರ್ಷದ ಶರತ್ ಕುಮಾರ್ ಶಿವಗಂಗಾ ಜಿಲ್ಲೆಯಲ್ಲಿ ಹಾಗೂ 52 ವರ್ಷದ ಆಂಥೋನಿಸ್ವಾಮಿ ತೂತುಕುಡಿಯಲ್ಲಿ ಹೋರಿ ತಿವಿದು ಸಾವನ್ನಪ್ಪಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications