ಭಾನುವಾರ ಶಿವಮೊಗ್ಗ-ತಿರುಪತಿ-ಚೆನ್ನೈ ರೈಲು ಸೇವೆಗೆ ಚಾಲನೆ; ವೇಳಾಪಟ್ಟಿ
ಚೆನ್ನೈ, ಏಪ್ರಿಲ್ 17; ನೈಋತ್ಯ ರೈಲ್ವೆ ಶಿವಮೊಗ್ಗ-ತಿರುಪತಿ-ಚೆನ್ನೈ ನಡುವೆ ಹೊಸ ರೈಲು ಸೇವೆ ಆರಂಭಿಸಲಿದೆ. ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಭಾನುವಾರ ಸಂಜೆ 6.15ಕ್ಕೆ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ ನೀಡಲಾಗುತ್ತದೆ.
ವಾರಕ್ಕೆ ಎರಡು ದಿನ ಶಿವಮೊಗ್ಗ-ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ ಹೋಗುವ ಹೊಸ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ ಆರಂಭವಾಗುತ್ತಿದೆ. ಈ ರೈಲು ಪ್ರಸಿದ್ಧ ಯಾತ್ರಾ ಸ್ಥಳ ತಿರುಪತಿ ಮತ್ತು ಮಟ್ರೋ ನಗರವಾದ ಚೆನ್ನೈಗೆ ಮಲೆನಾಡಿನಿಂದ ಸಂಪರ್ಕ ಕಲ್ಪಿಸಲಿದೆ.
ಭಾನುವಾರ ಸಂಜೆ 6.15ಕ್ಕೆ ಶಿವಮೊಗ್ಗ ರೈಲು ನಿಲ್ದಾಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಸದ ಬಿ. ವೈ. ರಾಘವೇಂದ್ರ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ. ವಾರದಲ್ಲಿ ಎರಡು ದಿನ ಈ ರೈಲು ಸಂಚಾರ ನಡೆಸಲಿದೆ.

ಕೋವಿಡ್ ಕಾರಣದಿಂದ ಸ್ಥಗಿತ; ಶಿವಮೊಗ್ಗ-ತಿರುಪತಿಗೆ ನೇರ ರೈಲು ಸಂಪರ್ಕದ ಬೇಡಿಕೆಯನ್ನು ಪರಿಗಣಿಸಿ 2019ರ ನವೆಂಬರ್ನಲ್ಲಿ ರೈಲು ಸೇವೆ ಆರಂಭಿಸಲಾಗಿತ್ತು. ಬಳಿಕ ಕೋವಿಡ್ ಸಮಯದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿತ್ತು.
ಈ ರೈಲಿಗೆ ಹೆಚ್ಚಿನ ಬೇಡಿಕೆ ಇದ್ದ ಕಾರಣ ಚೆನ್ನೈ ಮತ್ತು ಪ್ರಸಿದ್ಧ ಯಾತ್ರಾತಾಣ ತಿರುಪತಿ (ರೇಣಿಗುಂಟ) ರೈಲನ್ನು ಮರು ಪ್ರಾರಂಭಿಸಲು ಬಿ. ವೈ. ರಾಘವೇಂದ್ರ ಮನವಿ ಮಾಡಿದ್ದರು. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೈಲನ್ನು ಪ್ರಾರಂಭಿಸಲು ರೈಲ್ವೆ ಸಚಿವಾಲಯದ ಒಪ್ಪಿಗೆ ಪಡೆದಿತ್ತು.

ರೈಲು ಸಂಖ್ಯೆ 06223/06224 ಎರಡು ಎಸ್. ಎಲ್. ಆರ್. ಡಿ., 4 ಸಾಮಾನ್ಯ ಕೋಚ್ಗಳು, 6 ಸ್ಲೀಪರ್ ಕೋಚ್ಗಳು, ಒಂದು ಎರಡನೆಯ ದರ್ಜೆ ಹವಾ ನಿಯಂತ್ರಿತ ಮತ್ತು ಒಂದು ಮೂರನೆಯ ದರ್ಜೆ ಹವಾ ನಿಯಂತ್ರಿತ ಕೋಚ್ಗಳನ್ನು ಒಳಗೊಂಡಿದೆ.
ವೇಳಾಪಟ್ಟಿ; ರೈಲು ಸಂಖ್ಯೆ 06223 17/04/2022 ರಿಂದ 28/06/2022 ರವರೆಗೆ ವಾರದಲ್ಲಿ ಎರಡು ದಿನ (ಭಾನುವಾರ ಮತ್ತು ಮಂಗಳವಾರ) ಶಿವಮೊಗ್ಗದಿಂದ ಹೊರಟು ರೇಣಿಗುಂಟಾ (ತಿರುಪತಿ) ಮಾರ್ಗವಾಗಿ ಪುರಚಿ ತಲೈವರ್ ಎಂ. ಜಿ. ಆರ್. ಚೆನ್ನೈ ಸೆಂಟ್ರಲ್ ನಿಲ್ದಾಣ ತಲುಪುತ್ತದೆ.
ರೈಲು ಸಂಖ್ಯೆ 06224 18/04/2022 ರಿಂದ 29/06/2022 ರವರೆಗೆ ಪ್ರತಿ ಸೋಮವಾರ ಮತ್ತು ಬುಧವಾರ ಪುರಚಿ ತಲೈವರ್ ಎಂ. ಜಿ. ಆರ್. ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಟು ರೇಣಿಗುಂಟ (ತಿರುಪತಿ) ಮಾರ್ಗವಾಗಿ ಶಿವಮೊಗ್ಗಕ್ಕೆ ತಲುಪುತ್ತದೆ.
ಪ್ರಾಯೋಗಿಕ ಸಂಚಾರದ ನಂತರ ಪ್ರಯಾಣಿಕರ ಬೇಡಿಕೆ ನೋಡಿಕೊಂಡು ಶಿವಮೊಗ್ಗದಿಂದ ತಿರುಪತಿ ಮತ್ತು ಚೆನ್ನೈಗೆ ಸಂಪರ್ಕಿಸುವ ರೈಲು ಸೇವೆಗಳನ್ನು ಖಾಯಂಗೊಳಿಸುವ ಕುರಿತು ತೀರ್ಮಾನ ಮಾಡಲಾಗುತ್ತದೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications