ಚೆನ್ನೈ ಆಸ್ಪತ್ರೆಯಲ್ಲಿ ವ್ಹೀಲ್ ಚೇರ್ ಬೇಡವೆಂದು ನಡೆದೇ ಸಾಗಿದ ಶ್ರೀ
ಚೆನ್ನೈ, ಡಿಸೆಂಬರ್ 07: ಹೆಚ್ಚಿನ ಚಿಕಿತ್ಸೆಗಾಗಿ ಇಂದು ಏರ್ ಆಂಬುಲೆನ್ಸ್ ಮೂಲಕ ಚೆನ್ನೈ ತಲುಪಿದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಆಸ್ಪತ್ರೆಯ ಪ್ರವೇಶದ್ವಾರದಿಂದ ತಮ್ಮ ವಿಶೇಷ ವಾರ್ಡಿಗೆ ತೆರಳಲು ವ್ಹೀಲ್ ಚೇರ್ ನಿರಾಕರಿಸಿ, ನಡೆದೇ ಸಾಗಿದರು.
ಹೃದಯದಲ್ಲಿ ಅಳವಡಿಸಲಾದ ಸ್ಟೆಂಟ್ ಬದಲಿಸುವ ಸಲುವಾಗಿ ಚೆನ್ನೈನ ಚೆನ್ನೈನ ರೇಲಾ ಇನ್ ಸ್ಟಿಟ್ಯೂಟ್ ಅಂಡ್ ಮೆಡಿಕಲ್ ಸೆಂಟರ್ ಗೆ ಸ್ವಾಮೀಜಿಗಳನ್ನು ಶುಕ್ರವಾರ ದಾಖಲಿಸಲಾಗಿದೆ. ಆಸ್ಪತ್ರೆಯ ಪ್ರಸಿದ್ಧ ವೈದ್ಯ ಮಹಮ್ಮದ್ ರೇಲಾ ಅವರು ಶ್ರೀಗಳನ್ನು ಪರೀಕ್ಷಿಸಿ, ಅವರಿಗೆ ಮುಂದಿನ ಚಿಕಿತ್ಸೆ ಯಾವುದು ಎಂಬುದನ್ನು ಸೂಚಿಸಲಿದ್ದಾರೆ.
ಇಂದು ಬೆಳಿಗ್ಗೆ ತುಮಕೂರಿನಿಂದ ಬೆಂಗಳೂರಿಗೆ ಬಂದು, ಬೆಂಗೂರಿನ ಎಚ್ ಎಎಲ್ ವಿಮಾನ ನಿಲ್ದಾಣದಿಂದ ಸ್ವಾಮೀಜಿ ಏರ್ ಆಂಬುಲೆನ್ಸ್ ಮೂಲಕ ಚೆನ್ನೈ ತಲುಪಿದ್ದಾರೆ. ಆಸ್ಪತ್ರೆಯ ಪ್ರವೇಶ ದ್ವಾರಕ್ಕೆ ಸ್ವಾಮೀಜಿ ತಲುಪುತ್ತಿದ್ದಂತೆಯೇ ವ್ಹೀಲ್ ಚೇರ್ ಮೂಲಕ ಅವರನ್ನು ವಿಶೇಷ ಕೊಠಡಿಗೆ ಕರೆದೊಯ್ಯಲು ಸಿಬ್ಬಂದಿ ಮುಂದಾದರು. ಆದರೆ ಅದಕ್ಕೆ ಅವಕಾಶವನ್ನೇ ಕೊಡದೆ, ವ್ಹೀಲ್ ಚೇರ್ ಅನ್ನು ನಿರಾಕರಿಸಿದ ಸ್ವಾಮೀಜಿ, ನಡೆದೇ ತಮ್ಮ ವಾರ್ಡಿನತ್ತ ತೆರಳಿ ನೆರೆದಿದ್ದವರನ್ನೆಲ್ಲ ಕೆಲ ಹೊತ್ತು ಅಚ್ಚರಿಯಲ್ಲಿ ಮುಳುಗಿಸಿದರು.

ಅನಾರೋಗ್ಯದಿಂದ ಬಳಲುತ್ತಿರುವ 111 ವರ್ಷ ವಯಸ್ಸಿನ ಸ್ವಾಮೀಜಿ ಅವರ ಹೃದಯದಲ್ಲಿ ಹನ್ನೊಂದು ಸ್ಟೆಂಟ್ ಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಬದಲಿಸುವ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಚಿಕಿತ್ಸೆ ಹಿನ್ನೆಲೆಯಲ್ಲಿ ರೇಲಾ ಆಸ್ಪತ್ರೆಯಲ್ಲಿ ಶ್ರೀಗಳಿಗೆಂದೇ ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, ಈ ಕೊಠಡಿಯಲ್ಲಿ ಮಠದ ರೀತಿಯ ವಾತಾವರಣ ನಿರ್ಮಿಸಿ, ಶ್ರೀಗಳಿಗೆ ಪೂಜೆ ಮಾಡಲೂ ಅವಕಾಶ ಮಾಡಿಕೊಡಲಾಗುತ್ತಿದೆ! ಆಸ್ಪತ್ರೆಗೆ ಪೂಜಾ ಸಾಮಗ್ರಿಗಳೊಂದಿಗೆ ಸ್ವಾಮೀಜಿಗಳ ಭಕ್ತರೂ ತೆರಳಿದ್ದಾರೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications