ಪಟಾಕಿ ಘಟಕದ ಭಾರೀ ದುರಂತದಲ್ಲಿ ಆರು ಕಾರ್ಮಿಕರು ಸಾವು, ಕುಸಿದ ಕಟ್ಟಡ
ತಿರುವಾರೂರ್ (ತಮಿಳುನಾಡು), ಮಾರ್ಚ್ 27: ಇಲ್ಲಿಂದ ಇಪ್ಪತ್ತೆಂಟು ಕಿಲೋಮೀಟರ್ ದೂರದಲ್ಲಿರುವ ಮನ್ನಾರ್ ಗುಡಿಯಲ್ಲಿನ ಪಟಾಕಿ ತಯಾರಿಕೆ ಘಟಕದಲ್ಲಿ ಬುಧವಾರ ಸ್ಫೋಟ ಸಂಭವಿಸಿ, ಆರು ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ಹಾಗೂ ಪರಿಹಾರ ಕಾರ್ಯಾಚರಣೆ ತಂಡದ ಅಧಿಕಾರಿಗಳು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಪಟಾಕಿ ತಯಾರಿಸಲು ಕಚ್ಚಾ ವಸ್ತುಗಳನ್ನು ಕಾರ್ಮಿಕರು ಸಿದ್ಧ ಮಾಡಿಕೊಳ್ಳುವಾಗ ಈ ಘಟನೆ ಸಂಭವಿಸಿದೆ. ಈ ಪಟಾಕಿ ಘಟಕದ ಮಾಲೀಕ ಕೂಡ ಸಾವನ್ನಪ್ಪಿದ್ದಾರೆ. ಈ ಸ್ಫೋಟ ಅದ್ಯಾವ ಪ್ರಮಾಣದಲ್ಲಿ ಪ್ರಬಲವಾಗಿತ್ತು ಅಂದರೆ ಘಟಕ ಇದ್ದ ಕಟ್ಟಡದ ಒಂದು ಭಾಗವೇ ಕುಸಿದುಹೋಗಿದೆ. ಕೆಲ ಭಾಗ ನೆಲ ಕಚ್ಚಿದೆ.
ಪಕ್ಕದ ತಮಿಳುನಾಡು ರಾಜ್ಯದ ಸಂಸದರ ಶೈಕ್ಷಣಿಕ ವಿವರ
ಅಗ್ನಿಶಾಮಕ ದಳದ ಸಿಬ್ಬಂದಿ, ಪರಿಹಾರ ಕಾರ್ಯಾಚರಣೆ ತಂಡಗಳು ಸ್ಥಳಕ್ಕೆ ಧಾವಿಸಿವೆ. ತುಂಬ ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಆಸ್ಪತ್ರೆಯಿಂದ ಡಿಸ್ ಚಾರ್ಜ್ ಮಾಡಲಾಗಿದೆ. ಈ ಘಟಕ ನಡೆಸಲು ಪರವಾನಗಿ ಇತ್ತು ಎಂದು ಅಧಿಕಾರಿಗಳು ಹೇಳುತ್ತಿದ್ದು, ಸ್ಥಳೀಯ ಕಾರ್ಯಕ್ರಮವೊಂದಕ್ಕಾಗಿ ಪಟಾಕಿ ತಯಾರಿಕೆಯಲ್ಲಿ ನಿರತರಾಗಿದ್ದರು ಎನ್ನಲಾಗುತ್ತಿದೆ.

6 ಕಾರ್ಮಿಕರ ಸಾವಿಗೆ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಸಂತಾಪ ಸೂಚಿಸಿದ್ದಾರೆ. ಅಹಾರ ಸಚಿವ ಆರ್.ಕಾಮರಾಜ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications