ತಮಿಳುನಾಡಿಗೆ ಕಾವೇರಿ ನೀರು; ಮೆಟ್ಟೂರು ಡ್ಯಾಂ 100 ಅಡಿಗೂ ಹೆಚ್ಚು ನೀರು!
ಚೆನ್ನೈ, ಜೂನ್ 18 : ತಮಿಳುನಾಡಿಗೆ ಜೂನ್ ತಿಂಗಳ ಕಂತಿನ 9.19 ಟಿಎಂಸಿ ಅಡಿ ನೀರನ್ನು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ. ಮತ್ತೊಂದು ಕಡೆ ಮೆಟ್ಟೂರು ಡ್ಯಾಂ ಭರ್ತಿಯಾಗಿದ್ದು, ನಾಲೆಗಳ ಮೂಲಕ ನೀರನ್ನು ಹೊರಬಿಡಲಾಗಿದೆ.
Recommended Video
ಕಾವೇರಿ ವಿವಾದದ ಅಂತಿಮ ತೀರ್ಪಿನ ಅನ್ವಯ ಕರ್ನಾಟಕ ಸರ್ಕಾರ ತಮಿಳುನಾಡಿಗೆ ಜೂನ್ನಲ್ಲಿ 9.19 ಟಿಎಂಸಿ ಅಡಿ, ಜುಲೈ ತಿಂಗಳಿನಲ್ಲಿ 31.24 ಟಿಎಂಸಿ ಅಡಿ ನೀರನ್ನು ಹರಿಸಬೇಕು. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಈಗ ನೀರು ಹರಿಸುವಂತೆ ನಿರ್ದೇಶ ನೀಡಿದೆ.
ತಮಿಳುನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು ಮೆಟ್ಟೂರು ಜಲಾಶಯ ಭರ್ತಿಯಾಗಿದೆ. 9 ವರ್ಷಗಳ ಬಳಿಕ ನಾಲೆಗಳಿಗೆ ನೀರನ್ನು ಹರಿಸಲಾಗುತ್ತಿದೆ. ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಜಲಾಶಯಕ್ಕೆ ಪೂಜೆ ಸಲ್ಲಿಸಿ 3 ಸಾವಿರ ಕ್ಯೂಸೆಕ್ ನೀರನ್ನು ನಾಲೆಗಳಿಗೆ ಬಿಡುಗಡೆ ಮಾಡಿದ್ದಾರೆ.
ಕಳೆದ ಕೆಲವು ದಿನಗಳಿಂದ ತಮಿಳುನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. 120 ಅಡಿ ಎತ್ತರದ ಮೆಟ್ಟೂರು ಜಲಾಶಯದಲ್ಲಿ ಕಳೆದ 6 ತಿಂಗಳಿನಿಂದ 100 ಅಡಿಗೂ ಅಧಿಕ ನೀರಿನ ಸಂಗ್ರಹವಿದೆ. ಒಟ್ಟು 90 ದಿನಗಳ ಕಾಲ ಮೂರು ಸಾವಿರ ಕ್ಯೂಸೆಕ್ ನೀರನ್ನು ನಾಲೆಗಳಿಗೆ ಬಿಡಲಾಗುತ್ತದೆ.

ಕೆಆರ್ಎಸ್ನಲ್ಲಿ ಎಷ್ಟು ನೀರಿದೆ?
ಕರ್ನಾಟಕದಲ್ಲಿ ಈಗ ಮಳೆ ಆರಂಭವಾಗುತ್ತಿದೆ. ಕಾವೇರಿ ನದಿ ಪಾತ್ರದಲ್ಲಿ ಮಳೆ ಜೋರಾಗಿ ಸುರಿದು ಇನ್ನೂ ಜಲಾಶಯಕ್ಕೆ ಒಳಹರಿವು ಬರಬೇಕಿದೆ. ತಮಿಳುನಾಡಿಗೆ ಜೂನ್ ತಿಂಗಳ ಕೋಟಾದ 9.19 ಟಿಎಂಸಿ ಅಡಿ ನೀರನ್ನು ಮಂಡ್ಯದ ಕೆಆರ್ಎಸ್ ಜಲಾಶಯದಿಂದ ಬಿಡಬೇಕು. 124.80 ಅಡಿ ಜಲಾಶಯದಲ್ಲಿ 92.87 ಅಡಿ ನೀರಿನ ಸಂಗ್ರವಿದೆ (45.05 ಟಿಎಂಸಿ ಅಡಿ).

ಭರ್ತಿಯಾಗಿದೆ ಮೆಟ್ಟೂರು ಡ್ಯಾಂ
ತಮಿಳುನಾಡಿನ ಮೆಟ್ಟೂರು ಡ್ಯಾಂ ಭರ್ತಿಯಾಗಿದೆ. ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಜಲಾಶಯದಿಂದ 3 ಸಾವಿರ ಕ್ಯೂಸೆಕ್ ನೀರನ್ನು ನಾಲೆಗಳಿಗೆ ಬಿಡುಗಡೆ ಮಾಡಿದ್ದಾರೆ. 2011ರ ಬಳಿಕ ಮೊದಲ ಬಾರಿಗೆ ನಾಲೆಗಳಿಗೆ ನೀರು ಹರಿಸಲಾಗಿದೆ. ಶುಕ್ರವಾರದಿಂದ 10 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗುತ್ತದೆ ಎಂದು ಹೇಳಿದ್ದಾರೆ.

ರೈತರಿಗೆ ಅನುಕೂಲವಾಗಲಿದೆ
ಮೆಟ್ಟೂರು ಡ್ಯಾಂನಿಂದ ನಾಲೆಗಳಿಗೆ ನೀರನ್ನು ಬಿಟ್ಟರೆ ನಾಗಪಟ್ಟಿನಂ, ತಂಜಾವೂರು, ಪುದುಕೋಟೈ ಸೇರಿದಂತೆ ವಿವಿಧ ಜಿಲ್ಲೆಗಳ ರೈತರಿಗೆ ಅನುಕೂಲವಾಗಲಿದೆ. ಜಲಾಶಯದ ಕೆಳಭಾಗದ ಸುಮಾರು 5 ಲಕ್ಷ ಎಕರೆ ಭೂಮಿಯಲ್ಲಿ ರೈತರು ಅಲ್ಪ ಅವಧಿಯ ಬೆಳೆಯನ್ನು ಬೆಳೆಯುತ್ತಾರೆ.
|
ಭರ್ತಿಯಾದ ಮೆಟ್ಟೂರು ಡ್ಯಾಂ ನೋಟ
ಭರ್ತಿಯಾಗಿರುವ ಮೆಟ್ಟೂರು ಡ್ಯಾಂನ ವಿಡಿಯೋವನ್ನು ಮುಖ್ಯಮಂತ್ರಿಗಳು ತಮ್ಮ ಖಾತೆಯಿಂದ ಟ್ವೀಟ್ ಮಾಡಿದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications