ಒಂದು ಲಕ್ಷ ಶ್ರೀಲಂಕಾದ ತಮಿಳರ ಪರ ದನಿ ಎತ್ತಿದ್ದ ಶ್ರೀ ಶ್ರೀ
ಚೆನ್ನೈ, ಡಿಸೆಂಬರ್ 11: ಆರ್ಟ್ ಆಫ್ ಲಿವಿಂಗ್ ನ ಆಧಾತ್ಮ ಗುರು ಶ್ರೀ ಶ್ರೀ ರವಿಶಂಕರ್ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಸಾಹಿತಿ ವೈರಮುತ್ತು ಅವರು ಶ್ರೀಲಂಕಾದಲ್ಲಿರುವ ತಮಿಳು ನಿರಾಶ್ರಿತರಿಗೆ ಭಾರತದ ಪೌರತ್ವ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಮೂರು ದಶಕಗಳಿಗಿಂತಲೂ ಅಧಿಕ ಕಾಲ ಭಾರತದಲ್ಲಿ ನೆಲೆಸಿರುವ ಶ್ರೀಲಂಕಾದ ತಮಿಳು ನಿರಾಶ್ರಿತರಿಗೆ ಭಾರತದ ಪೌರತ್ವ ನೀಡುವಂತೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರೀಯ ಪೌರತ್ವ ತಿದ್ದುಪಡಿ ವಿಧೇಯಕ ಇಂದು ಭಾರತದಲ್ಲಿ ಬಹು ಚರ್ಚೆಯ ವಿಷಯವಾಗಿದೆ. ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾಗಿದ್ದು, ರಾಜ್ಯಸಭೆಯಲ್ಲಿ ಇಂದು ಮಂಡನೆಯಾಗಲಿದ್ದು, ಪ್ರಾದೇಶಿಕ ಪಕ್ಷಗಳ ಬೆಂಬಲದಿಂದ ಮಸೂದೆ ಅಂಗೀಕಾರವಾಗುವ ನಿರೀಕ್ಷೆಯಿದೆ.
I had met Dr Kalam when he was President regarding the citizenship of Sri Lankan Tamil refugees.We also presented 10 million signatures from Tamil Nadu to the Mamohan Singh govt.While Sri Lankan refugees have been given citizenship in Europe,Canada & other countries,
— Sri Sri Ravi Shankar (@SriSri) December 10, 2019
1/2#CABBill
ಈ ವಿಧೇಯಕಕ್ಕೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಸಂವಿಧಾನದ ಆಶಯಗಳಿಗೆ ಇದು ವಿರುದ್ಧವಾಗಿದೆ ಎಂಬ ಆಕ್ರೋಶ ವ್ಯಕ್ತಪಡಿಸಲಾಗಿದೆ. ಇದರ ಜೊತೆಗೆ ಈಶಾನ್ಯ ಭಾರತದಲ್ಲಿ ಪ್ರತಿಭಟನೆಯೂ ನಡೆಯುತ್ತಿದೆ.
they are still living in refugee camps in India. I have personally visited these refugee camps & their plight is really woeful.
— Sri Sri Ravi Shankar (@SriSri) December 10, 2019
2/2#CABBill
ದೆಹಲಿ, ರಾಜಸ್ತಾನ ಸೇರಿ ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಪಾಕಿಸ್ತಾನ, ಬಾಂಗ್ಲಾ, ಅಫ್ಘಾನಿಸ್ತಾನದಿಂದ ಬಂದ ಹಿಂದು, ಸಿಖ್, ಜೈನ, ಬೌದ್ಧ, ಪಾರ್ಸಿ, ಕ್ರಿಶ್ಚಿಯನ್ ಧರ್ಮದವರು ಭಾರತದ ಶಾಶ್ವತ ಪ್ರಜೆಗಳನ್ನಾಗಿ ಮಾಡಿ ಎಂದು ಮನವಿ ಮಾಡಿದ್ದರು. ಪೌರತ್ವ ಕಾಯ್ದೆ ಪ್ರಕಾರ , ಅಕ್ರಮ ವಲಸಿಗರಿಗೆ ಭಾರತದ ಪೌರತ್ವ ನೀಡಲು ಅವಕಾಶವಿಲ್ಲ. ಆದರೆ ಹೊಸ ತಿದ್ದುಪಡಿ ಮಸೂದೆ ಅನ್ವಯ ಮುಸ್ಲಿಮೇತರರಿಗೆ ಸೇರಿದ ಅಕ್ರಮ ವಲಸಿಗರು ಭಾರತದಲ್ಲಿ ಅನೇಕ ವರ್ಷಗಳಿಂದ ನೆಲೆಸಿದ್ದರೆ ಇಲ್ಲಿನ ಪೌರತ್ವಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಅಂಶವನ್ನು ಅನೇಕ ಮುಸ್ಲಿಮರು ವಿರೋಧಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications