ಅಧಿಕಾರಕ್ಕೆ ಬಂದದ್ದೇ ಆದರೆ ಜಯಲಲಿತಾ ನಿಗೂಢ ಸಾವಿನ ಪ್ರಕರಣ ಬಗೆಹರಿಸುವೆ; ಸ್ಟಾಲಿನ್
ಚೆನ್ನೈ, ಮಾರ್ಚ್ 17: ಡಿಎಂಕೆ ಪಕ್ಷ ಅಧಿಕಾರಕ್ಕೆ ಮರಳಿದ್ದೇ ಆದರೆ, ಮಾಜಿ ಸಿಎಂ ಜಯಲಲಿತಾ ಅವರ ನಿಗೂಢ ಸಾವಿನ ತನಿಖೆಯನ್ನು ಕೈಗೊಳ್ಳಲಾಗುವುದು ಎಂದು ಡಿಎಂಕೆ ಅಧ್ಯಕ್ಷ ಸ್ಟಾಲಿನ್, ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಇಬ್ಬರಿಗೂ ಸವಾಲು ಹಾಕಿದ್ದಾರೆ.
ಚೆನ್ನೈನ ರೋಯಾಪುರಂನಲ್ಲಿ ಬುಧವಾರ ಚುನಾವಣಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅವರು, "ನಮ್ಮ ನಾಯಕಿ ಜಯಲಲಿತಾ ಅವರ ಸಾವಿನ ಕುರಿತು ಪಳನಿಸ್ವಾಮಿ ಹಾಗೂ ಪನ್ನೀರ್ ಸೆಲ್ವಂ ಗಂಭೀರವಾಗಿ ಯಾವುದೇ ಮಾಹಿತಿಯನ್ನು ಕಲೆ ಹಾಕಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಈ ಪ್ರಕರಣವನ್ನು ಖಡಾಖಂಡಿತವಾಗಿ ಬಗೆಹರಿಸುತ್ತೇನೆ" ಎಂದು ಪ್ರತಿಜ್ಞೆ ಮಾಡಿದರು.
ಈ ನಾಯಕರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಿದ್ದರೆ, ಜಯಲಲಿತಾ ಸಾವಿನ ತನಿಖೆಗಾಗಿ ರಚಿಸಲಾದ ಆಯೋಗವು ಕತ್ತಲೆಯಲ್ಲಿ ಕಳೆದುಹೋಗುತ್ತಿರಲಿಲ್ಲ ಎಂದು ಆರೋಪಿಸಿದರು.

2016ರ ಸೆಪ್ಟೆಂಬರ್ನಲ್ಲಿ ಜಯಲಲಿತಾ ಅವರನ್ನು ಅನಾರೋಗ್ಯದ ಕಾರಣ ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು 74 ದಿನಗಳ ಬಳಿಕ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಡಿ. 5ರಂದು ಮೃತಪಟ್ಟಿದ್ದರು. ಆದರೆ ಅವರ ಸಾವಿನ ತನಿಖೆಗಾಗಿ ಆಯೋಗ ರಚಿಸಿ ನಾಲ್ಕು ವರ್ಷ ಕಳೆದಿದ್ದರೂ ಯಾವುದೇ ಮಾಹಿತಿ ದೊರೆತಿಲ್ಲ ಎಂದು ದೂರಿದರು. ಕಳೆದ ವಾರವಷ್ಟೇ ಪಳನಿಸ್ವಾಮಿ, ಸ್ಟಾಲಿನ್ ಅವರೇ ಜಯಲಲಿತಾ ಅವರ ಸಾವಿಗೆ ಜವಾಬ್ದಾರರು ಎಂದು ಆರೋಪಿಸಿದ್ದರು. ಈ ಆರೋಪ ನಿಜವಾದರೆ ತನ್ನ ವಿರುದ್ಧ ದೂರು ನೀಡುವಂತೆ ಸ್ಟಾಲಿನ್ ಸವಾಲು ಹಾಕಿದ್ದರು.
ಡಿಎಂಕೆ ಪ್ರಣಾಳಿಕೆಯನ್ನೇ ಎಐಎಡಿಎಂಕೆ ನಕಲು ಮಾಡಿದೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ.
ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಗೆ 12ನೇ ಮಾರ್ಚ್ರಂದು ಗೆಜೆಟ್ ಅಧಿಸೂಚನೆ ಪ್ರಕಟವಾಗಲಿದೆ. 19ನೇ ಮಾರ್ಚ್ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 20 ಮಾರ್ಚ್ ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮಾರ್ಚ್ 22 ಕೊನೆ ದಿನವಾಗಿದೆ. ಏಪ್ರಿಲ್ 6ರಂದು ತಮಿಳುನಾಡಿನ ಎಲ್ಲ 234 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟ ಹಾಗೂ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿಕೂಟಗಳು ಪ್ರಮುಖವಾಗಿ ಸೆಣಸಾಟ ನಡೆಸುವ ನಿರೀಕ್ಷೆಯಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications