ಕಲೈನಾರ್ ಕಣ್ಮರೆ: 80 ಕಡೆ ಹಿಂಸಾಚಾರ, ಕಾಲ್ತುಳಿತದಲ್ಲಿ ಗಂಭೀರ ಗಾಯ
ಚೆನ್ನೈ, ಆಗಸ್ಟ್ 8: ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ನಿಧನ ಹಿನ್ನೆಲೆ ರಾಜ್ಯಾದ್ಯಂತ ಒಟ್ಟು 80 ಹಿಂಸಾಚಾರ ಪ್ರಕರಣ ದಾಖಲಾಗಿದೆ.
ಕಲ್ಲು ತೂರಾಟ ಸೇರಿದಂತೆ ಒಟ್ಟು 80 ಹಿಂಸಾಚಾರ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ. ಚೆನ್ನೈನ ಮರೀನಾ ಬೀಚ್ನ ಪೆರಿಯಾರ್ ಪುತ್ಥಳಿ ಬಳಿ ಅಭಿಮಾನಿಗಳ ನೂಕುನುಗ್ಗಲಿನಲ್ಲಿ ಕಾಲ್ತುಳಿತಕ್ಕೆ ಸಿಲುಕಿ 40 ಮಂದಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ದಕ್ಷಿಣ ಭಾರತದ ಮುತ್ಸದ್ಧಿ ರಾಜಕಾರಣಿ ಕರುಣಾನಿಧಿ ಮಂಗಳವಾರ ಸಂಜೆ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ 6.10ಕ್ಕೆ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಕಳೆದ 12 ದಿನಗಳಿಂದ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗಿದೆ ನಿಧನರಾಗಿದ್ದಾರೆ.

ಕಲೈನಾರ್ ಎಂದೇ ಖ್ಯಾತರಾದ ಎಂ. ಕರುಣಾನಿಧಿ ಅವರು 1924ರ ಜೂನ್ 3ರಲ್ಲಿ ಜನಿಸಿದರು. ಹೋರಾಟ ಮತ್ತು ರಾಜಕೀಯದಲ್ಲಿ ಚಿಕ್ಕಂದಿನಿಂದಲೇ ಆಸಕ್ತಿ ಹೊಂದಿದ್ದ ಕರುಣಾನಿಧಿ, 14ನೇ ವಯಸ್ಸಿನಲ್ಲೇ ರಾಜಕೀಯ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದರು.
ಡಿಎಂಕೆ ನಾಯಕ ಎಂ ಕರುಣಾನಿಧಿ ನಿಧನದಿಂದ ಡಿಎಂಕೆ ನಾಯಕರೂ ಸೇರಿದಂತೆ ತಮಿಳುನಾಡು ಜನತೆ ಶೋಕ ಸಾಗರದಲ್ಲಿ ಮುಳುಗಿದೆ.
ತಮ್ಮ ನೆಚ್ಚಿನ ನಾಯಕನನ್ನು ಕಳೆದುಕೊಂಡ ಹಿನ್ನಲೆಯಲ್ಲಿ ಡಿಎಂಕೆ ಕಾರ್ಯಕರ್ತರು ಹಿಂಸಾಚಾರಕ್ಕೆ ಇಳಿಯಬಹುದು ಎಂಬ ಕಾರಣಕ್ಕೆ ತಮಿಳುನಾಡಿನಾದ್ಯಂತ 2 ಲಕ್ಷಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅದರ ಮಧ್ಯೆಯೂ ಕಲ್ಲು ತೂರಾಟ ಸೇರಿದಂತೆ ಹಿಂಸಾಚಾರ ಪ್ರಕರಣಗಳು ದಾಖಲಾಗಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications