ಐಐಟಿ ಮದ್ರಾಸ್ ನಲ್ಲಿ ಮತ್ತೆ ಗೋ ಮಾಂಸ ಭಕ್ಷಣೆ
ಕಳೆದ ಭಾನುವಾರ (ಮೇ 28) ಐಐಟಿ ಮದ್ರಾಸ್ ನಲ್ಲಿ ನಡೆದಿದ್ದ ಬೀಫ್ ಫೆಸ್ಟ್ ನಲ್ಲಿ ಭಾಗವಹಿಸಿದ್ದರೆಂದು ಆರೋಪಿಸಿ ಸೂರಜ್ ಆರ್. ಎಂಬ ಪಿಎಚ್ ಡಿ ವಿದ್ಯಾರ್ಥಿಯ ಮೇಲೆ ಇತ್ತೀಚೆಗೆ ಹಲ್ಲೆಯಾಗಿದ್ದಕ್ಕೆ ಖಂಡನೆ.
ಚೆನ್ನೈ, ಮೇ 31: ಬೀಫ್ ಫೆಸ್ಟ್ ನಲ್ಲಿ ಭಾಗಿಯಾಗಿದ್ದಕ್ಕೆ ಹಲ್ಲೆಗೊಳಗಾದ ಮದ್ರಾಸ್ ಐಐಟಿಯ ಪಿಎಚ್ ಡಿ ವಿದ್ಯಾರ್ಥಿಯೊಬ್ಬರಿಗೆ ಬೆಂಬಲವಾಗಿ ನಿಂತ ಸಂಸ್ಥೆಯ ಕೆಲ ವಿದ್ಯಾರ್ಥಿಗಳು, ಘಟನೆಯನ್ನು ಸಾಂಕೇತಿಕವಾಗಿ ವಿರೋಧಿಸಿದ್ದಾರೆ.
ಐಐಟಿ ಮದ್ರಾಸ್ ಕ್ಯಾಂಪಸ್ ನ ಮುಂಭಾಗದಲ್ಲಿ ಗೋ ಮಾಂಸ ತಿನ್ನುವ ಮೂಲಕ ಅವರು, ಈ ಹಲ್ಲೆಯ ಘಟನೆಗೆ ಪ್ರತೀಕಾರ ವ್ಯಕ್ತಪಡಿಸಿದರು.[ಕಣ್ಣೂರಿನ ನಂತರ ಐಐಟಿ, ಮದ್ರಾಸಿನಲ್ಲಿ ಬೀಫ್ ಫೆಸ್ಟಿವಲ್]

ಈ ಪ್ರತಿಭಟನೆಯಲ್ಲಿ ರೆವೆಲ್ಯೂಷನರಿ ಸ್ಟೂಡೆಂಟ್ ಯೂತ್ ಫ್ರಂಟ್ (ಆರ್ ಎಸ್ ವೈ ಎಫ್), ತಾಂತೈ ಪೆರಿಯಾರ್ ದ್ರಾವಿಡಾರ್ ಕಳಗಂ (ಟಿಪಿಡಿಕೆ) ಕಾರ್ಯಕರ್ತರು ಹಾಗೂ ಐಐಟಿ ಕ್ಯಾಂಪಸ್ ನ ಕೆಲ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.[ಗೋಕಿಂಕರರು ಬೀಫ್ ಫೆಸ್ಟ್ ತಡೆಯಲು ಕಾರ್ಯತಂತ್ರ ರೂಪಿಸಿದ್ದು ಹೀಗೆ]
ಮೇ 28ರಂದು ಭಾನುವಾರ ಕ್ಯಾಂಪಸ್ಸಿನಲ್ಲಿ ಉದ್ದೇಶಿತವಾಗಿ ಪಾರ್ಟಿಯೊಂದನ್ನು ಆಯೋಜಿಸಿದ್ದ ಕೆಲ ವಿದ್ಯಾರ್ಥಿಗಳಲ್ಲಿ ಗೋ ಮಾಂಸ ಭಕ್ಷಣೆ ಮಾಡುವ ಮೂಲಕ ಗೋ ಹತ್ಯೆ ಕಾನೂನು ಜಾರಿಗೆ ತಂದಿದ್ದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದ್ದರು. ಅದರಲ್ಲಿ ಭಾಗವಹಿಸಿದ್ದವರು ಎನ್ನಲಾದ ಪಿಎಚ್ ಡಿ ವಿದ್ವಾಂಸರಾದ ಸೂರಜ್ ಆರ್. ಅವರ ಮೇಲೆ ಇತ್ತೀಚೆಗೆ ಕೆಲವರು ಹಲ್ಲೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಏತನ್ಮಧ್ಯೆ, ಪಿಎಚ್ ಡಿ ವಿದ್ಯಾರ್ಥಿಯ ಮೇಲೆ ಹಲ್ಲೆ ಪ್ರಕರಣದಲ್ಲಿ ಚೆನ್ನೈ ಪೊಲೀಸರು 9 ಜನರನ್ನು ಬುಧವಾರ ಬಂಧಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications