ರಜನೀಕಾಂತ್ ರಾಜಕೀಯ ಪ್ರವೇಶ: 20ರಂದು ಅಂತಿಮ ನಿರ್ಧಾರ?
ರಜನೀಕಾಂತ್ ಅವರ ರಾಜಕೀಯ ಪ್ರವೇಶ ಆಗಸ್ಟ್ 20ರಂದು ನಿರ್ಧಾರ. ತಿರುಚ್ಚಿಯಲ್ಲಿ ನಡೆಯಲಿರುವ ರಜನಿ ಅಭಿಮಾನಿಗಳ ಬೃಹತ್ ಸಮಾವೇಶದಲ್ಲಿ ನಿರ್ಧಾರ.
ಬೆಂಗಳೂರು, ಆಗಸ್ಟ್ 18: ಇದೇ ತಿಂಗಳ 20ರಂದು ತಿರುಚಿಯಲ್ಲಿ ನಡೆಯಲಿರುವ ಗಾಂಧಿಯನ್ ಪೀಪಲ್ಸ್ ಮೂವ್ ಮೆಂಟ್ (ಜಿಪಿಎಂ) ಸಂಸ್ಥೆಯ ಬೃಹತ್ ಸಮಾವೇಶದಲ್ಲಿ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನೀಕಾಂತ್ ಅವರ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಆ ಸಮಾವೇಶವೇ ರಜನಿ ಅವರ ರಾಜಕೀಯ ಪ್ರವೇಶದ ಮುನ್ನುಡಿಯಾಗಲಿದೆ ಎಂದು ಜಿಪಿಎಂ ಅಧ್ಯಕ್ಷ ತಮಿಳುಅರವಿ ಮನಿಯನ್ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ತಮಿಳುನಾಡನ್ನು ಕಳೆದ ಐದು ದಶಕಗಳಿಂದ ಆಳುತ್ತಿರುವ ಡಿಎಂಕೆ, ಎಐಎಡಿಎಂಕೆ ಪಕ್ಷಗಳು ರಾಜ್ಯವನ್ನು ಭ್ರಷ್ಟಾಚಾರದ ಸ್ವರ್ಗವನ್ನಾಗಿಸಿವೆ. ಇಂಥ ಪರಿಸ್ಥಿತಿಯಲ್ಲಿ ರಜನೀಕಾಂತ್ ಅವರು ಈ ಎರಡೂ ಪಕ್ಷಗಳಿಂದ ತಮಿಳುನಾಡನ್ನು ರಕ್ಷಿಸಲು ನಿರ್ಧರಿಸಿದ್ದಾರೆ. ಅಲ್ಲದೆ, ತಮ್ಮದೇ ಆದ ಹೊಸ ಸರ್ಕಾರವನ್ನು ರಚಿಸುವ ಮೂಲಕ ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡಲು ಮುಂದಾಗಿದ್ದಾರೆ'' ಎಂದರು.

''ತಿರುಚ್ಚಿಯಲ್ಲಿ ನಡೆಯಲಿರುವ ಬೃಹತ್ ಸಮಾವೇಶ ರಜನಿ ಅವರ ರಾಜಕೀಯ ಪ್ರವೇಶಕ್ಕೆ ಮುನ್ನುಡಿ ಬರೆಯಲಿದ್ದು, ಅಂದೇ ಅವರಿಂದ ಸ್ಪಷ್ಟ ಸಂದೇಶ ಹೊರಬೀಳಲಿದೆ'' ಎಂದು ಅವರು ತಿಳಿಸಿದ್ದಾರೆ.
-
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ದರ: ಇಂದು 10 ಗ್ರಾಂ ಬಂಗಾರದ ಬೆಲೆ 1,58,620 ರೂಪಾಯಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications