ಶತಾಬ್ದಿ ಎಕ್ಸ್ ಪ್ರೆಸ್ ನಲ್ಲಿ ಮನರಂಜನೆಗೆ ಕೊರತೆಯಿಲ್ಲ
ಬೆಂಗಳೂರು, ಜ, 12: ಬೆಂಗಳೂರು-ಚೆನ್ನೈ ನಡುವಿನ ಶತಾಬ್ದಿ ಎಕ್ಸ್ ಪ್ರೆಸ್ ರೈಲು ಪ್ರಯಾಣಿಕರಿಗೆ ಅವರ ಆಯ್ಕೆಯ ಮನರಂಜನೆ ಒದಗಿಸಲು ರೈಲ್ವೆ ಇಲಾಖೆ ಮುಂದಾಗಿದ್ದು ಕೆಲ ಪ್ರಯಾಣಿಕರು ಭಾನುವಾರ ಟ್ಯಾಬ್ಲೆಟ್ ಮೂಲಕ ಸಿನಿಮಾ ವೀಕ್ಷಣೆ ಮಾಡುತ್ತ ಮತ್ತು ಇ-ಪುಸ್ತಕ ಒದುತ್ತಿರುವುದು ಕಂಡುಬಂತು.
ಪೈಲೆಟ್ ಪ್ರೊಜೆಕ್ಟ್ ಹಿನ್ನೆಲೆಯಲ್ಲಿ ಪ್ರಾಯೋಗಿಕವಾಗಿ 15 ಟ್ಯಾಬ್ಲೆಟ್ ಒದಗಿಸಲಾಗಿದ್ದು ಪ್ರಯಾಣಿಕರ ಪ್ರತಿಕ್ರಿಯೆ ಲೆಕ್ಕಹಾಕಲಾಯಿತು. ಜನವರಿ 9 ರಂದು ಯೋಜನೆ ಜಾರಿಯಾಗಿದ್ದು ಮುಂದಿನ ಶನಿವಾರದವರೆಗೆ ಚಾಲ್ತಿಯಲ್ಲಿರುತ್ತದೆ.[ಮೈಸೂರು : ಮತ್ತೊಂದು ರೈಲ್ವೆ ಟಿಕೆಟ್ ಕೌಂಟರ್ ಆರಂಭ]

ಮಕ್ಕಳು ಇಷ್ಟಪಡುವಂತಹ ಸಂಗತಿಗಳನ್ನು ಅಳವಡಿಸಬೇಕು, ಇದು ಸಮಯದ ಸದುಪಯೋಗಕ್ಕೆ ಕಾರಣವಾಗಿದೆ. ಇದೊಂದು ಉತ್ತಮ ಯೋಜನೆ ಎಂಬ ಅಭಿಪ್ರಾಯ ಜನರಿಂದ ಕೇಳಿಬಂತು.
ರೈಲ್ವೆ ಇಲಾಖೆ ಇಂಥ ಪ್ರಯತ್ನಗಳ ಮೇಲೆ ಹಣ ಹೂಡುವ ಮೊದಲು ಸ್ವಚ್ಛತೆಗೆ ಇನ್ನು ಹೆಚ್ಚಿನ ಆದ್ಯತೆ ನೀಡಿದರೆ ಉತ್ತಮ. ಪ್ರಯಾಣಿಕರಿಗೆ ಮೊದಲು ಮೂಲಭೂತ ಅಗತ್ಯಗಳನ್ನು ಪೂರೈಸಿ ಈ ಬಗೆಯ ಯೋಜನೆ ಕೈಗೆತ್ತಿಕೊಳ್ಳಬೇಕು. ಅಷ್ಟಕ್ಕೂ ಮನರಂಜನೆ ಒದಗಿಸಿ ಎಂದು ಯಾರೂ ದುಂಬಾಲು ಬಿದ್ದಿರಲಿಲ್ಲ ಎಂಬ ಮಾತುಗಳು ಕೇಳಿಬಂದವು.[30 ಸೆಕೆಂಡ್ ನಲ್ಲಿ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಹೇಗೆ?]
ಟ್ಯಾಬ್ಲೆಟ್ ಬಳಸುವವರು ಗಂಟೆಗೆ 20 ರೂ. ಪಾವತಿ ಮಾಡಬೇಕು. ನೂರಾರು ಪ್ರಯಾಣಿಕರ ಪ್ರತಿಕ್ರಿಯೆ ಆಧರಿಸಿ ವಿಸ್ತಾರ ಮಾಡಲಾಗುವುದು. ಜನರು ಟಿವಿಗಿಂತ ಟ್ಯಾಬ್ಲೆಟ್ ಇಷ್ಟಪಡುತ್ತಿದ್ದಾರೆ. ಅವರಿಗೆ ಬೇಕಾದ ಆಯ್ಕೆ ಇಲ್ಲಿ ದೊರೆಯುವುದುದೇ ಕಾರಣ ಎಂದು ಟ್ಯಾಬ್ಲೆಟ್ ವಿತರಕ ಕಂಪನಿಯ ಫೌಂಡರ್ ಬಿ.ವಿ.ಮುರಳಿ ತಿಳಿಸಿದರು. ಒಟ್ಟಿನಲ್ಲಿ ಪ್ರಯಾಣಿಕರ ಅನುಕೂಲಕ್ಕೆ ತಂದಿರುವ ಯೋಜನೆ ತರಲಾಗಿದೆ ಎಂದು ಹೇಳಿಕೊಳ್ಳುತ್ತಿದ್ದರೂ ಇದರ ಹಿಂದೆ ವ್ಯಾಪಾರಿ ತಂತ್ರ ಇದೆ ಎಂಬುದನ್ನು ಒಪ್ಪಿಕೊಳ್ಳಲೇಬೇಕು.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ












Click it and Unblock the Notifications