ಸಾಮಾಜಿಕ ತಾಣದಲ್ಲಿ 'ರೆಮೋ' ಹಾಡುಗಳದ್ದೇ ಸದ್ದು
ಚೆನ್ನೈ, ಸೆಪ್ಟೆಂಬರ್, 05: ತಮಿಳು ಸಿನಿ ಅಂಗಳದಲ್ಲಿ ಭಾರಿ ಸದ್ದು-ಸುದ್ದಿ ಮಾಡುತ್ತಿರುವ ಶಿವಕಾರ್ತಿಕೇಯನ್ ಮತ್ತು ಕೀರ್ತಿ ಸುರೇಶ್ ಅಭಿನಯದ 'ರೆಮೋ' ಚಿತ್ರದ ಆಡಿಯೋ ನಿಮ್ಮೆಲ್ಲರಿಗೆ ಈಗ ಲಭ್ಯ.
ತಮ್ಮ ಟ್ವಿಟ್ಟರ್ ಅಕೌಂಟ್ ಮೂಲಕ ಮ್ಯೂಸಿಕ್ ಮಾಂತ್ರಿಕ ಎ.ಆರ್.ರೆಹಮಾನ್ 'ರೆಮೋ' ಚಿತ್ರದ ಆಡಿಯೋ ಬಿಡುಗಡೆ ಮಾಡಿದ್ದಾರೆ.[ರೆಮೋ ಸಿನಿಮಾದ ಹಕ್ಕು ಪಡೆದ ದೀಪಕ್]
ಕೆಲವೇ ಗಂಟೆಗಳ ಹಿಂದೆ ಟ್ವೀಟ್ ಮಾಡುವ ಮೂಲಕ ಎ.ಆರ್.ರೆಹಮಾನ್ 'ರೆಮೋ' ಆಲ್ಬಂ ನ ಹೊರತಂದಿದ್ದಾರೆ. ತಮ್ಮ ಚೊಚ್ಚಲ ನಿರ್ಮಾಣದ ಚಿತ್ರ 'ರೆಮೋ' ಆಡಿಯೋ ಬಿಡುಗಡೆ ಮಾಡಿರುವುದಕ್ಕೆ ಎ.ಆರ್.ರೆಹಮಾನ್ ರವರಿಗೆ ನಿರ್ಮಾಪಕ ಆರ್.ಡಿ.ರಾಜಾ ಟ್ವೀಟ್ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.

ಅನಿರುದ್ಧ್ ರವಿಚಂದರ್ ಸಂಗೀತ ನೀಡಿರುವ 'ರೆಮೋ' ಹಾಡುಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ. 'ರೆಮೋ' ಚಿತ್ರದ ಪ್ರಚಾರಾರ್ಥವಾಗಿ ಈಗಾಗಲೇ ಬಿಡುಗಡೆ ಆಗಿರುವ 'ಸಿರಿಕ್ಕಾದೆ' ವಿಡಿಯೋ ಹಿಟ್ ಆಗಿದೆ. ಹೀಗಾಗಿ, 'ರೆಮೋ' ಆಲ್ಬಂಗೆ ಡಿಮ್ಯಾಂಡ್ ಕೂಡ ಹೆಚ್ಚಾಗಿದೆ.[ರಜನಿ ಸೋದರಳಿಯನ ಸಾಂಗ್ ಯೂಟ್ಯೂಬಿನಲ್ಲಿ ರಿಲೀಸ್]
@anirudhofficial 's Music @Siva_Kartikeyan's #RemoAlbum is now urs💘🎉🎉🎈🎈😊👍💘
— A.R.Rahman (@arrahman) September 4, 2016
Good Luck Guys!!
ಅಕ್ಟೋಬರ್ 7 ರಂದು, 3000 ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ 'ರೆಮೋ' ತೆರೆ ಕಾಣಲಿದೆ. ಭಾಗ್ಯರಾಜ್ ಕಣ್ಣನ್ ಆಕ್ಷನ್-ಕಟ್ ಹೇಳಿರುವ 'ರೆಮೋ' ಚಿತ್ರಕ್ಕೆ, 24AM ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಪಕ ಆರ್.ಡಿ.ರಾಜಾ ಬಂಡವಾಳ ಹೂಡಿದ್ದಾರೆ.

Thank you so much @arrahman sir for releasing my first Production's #RemoAlbum through your Twitter account 😊👍 https://t.co/bPnxyNzEbG
— RD.RAJA (@RDRajaofficial) September 5, 2016
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications