ದೆವ್ವ, ಭೂತದ ಸಿನ್ಮಾ ನೋಡಿ ಪ್ರಾಣ ಬಿಟ್ಟ ವೃದ್ಧ
ಚೆನ್ನೈ, ಜೂನ್ 17: ಕಾಂಜುರಿಂಗ್ 2 ಹರಾರ್ ಚಿತ್ರಗಳಿಗೆ ಹೊಸ ಭಾಷ್ಯ ಬರೆದ ತಣ್ಣನೆಯ ಕ್ರೌರ್ಯದ ಥ್ರಿಲ್ಲಿಂಗ್ ಚಿತ್ರ. ಈ ಚಿತ್ರಕ್ಕೆ ಭಾರತದಲ್ಲಿ ಅಭಿಮಾನಿಗಳೇನು ಕಡಿಮೆ ಇಲ್ಲ. ಆದರೆ, ತಮಿಳುನಾಡಿನ ತಿರುನಲ್ವೇಲಿಯಲ್ಲಿ ಗುರುವಾರ ರಾತ್ರಿ ಚಿತ್ರಮಂದಿರದಲ್ಲಿ ನಡೆದಿದ್ದು ಮಾತ್ರ ದುರಂತ.
ಹಾಲಿವುಡ್ ಹಾರರ್ ಶ್ರೇಣಿಯಲ್ಲಿ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಕಾಂಜುರಿಂಗ್ ಚಿತ್ರ ಸರಣಿಯ ಎರಡನೇ ಚಿತ್ರವನ್ನು ನೋಡಲು ಹೋಗಿದ್ದ 65 ವರ್ಷ ವಯಸ್ಸಿನ ವೃದ್ಧರೊಬ್ಬರು ಚಿತ್ರವನ್ನು ವೀಕ್ಷಿಸುವಾಗಲೇ ಭಯಕಂಪಿತರಾಗಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.[ಹಾಲಿವುಡ್ಡಿನ ಟಾಪ್ 10 ಹಾರರ್ ಚಿತ್ರಗಳು]

ಆಂಧ್ರಪ್ರದೇಶ ಮೂಲದ ಇಬ್ಬರು ವ್ಯಕ್ತಿಗಳು ಈ ಚಿತ್ರವನ್ನು ನೋಡಲು ಹೋಗಿದ್ದರು. ಶ್ರೀ ಬಾಲಸುಬ್ರಮಣಿಯರ್ ಸಿನಿಮಾಸ್ ಚಿತ್ರಮಂದಿರದಲ್ಲಿ ನೈಟ್ ಶೋ ನೋಡುತ್ತಿದ್ದರು. ಚಿತ್ರದ ಕ್ಲೈಮ್ಯಾಕ್ಸ್ ಹಂತದಲ್ಲಿ ಒಬ್ಬ ವ್ಯಕ್ತಿ ಎದೆ ಹಿಡಿದುಕೊಂಡು ನೋವಿನಿಂದ ಚೀರಿ, ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.[ದೆವ್ವದ ಕತೆಗಳು ಎ೦ದರೇ ಸಾಕು ಕಿವಿ ನೆಟ್ಟಗೆ!]
ತಕ್ಷಣವೇ ಅವರನ್ನು ಹಳೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೃದ್ಧನನ್ನು ಪರೀಕ್ಷಿಸಿದ ವೈದ್ಯರು, ಆಸ್ಪತ್ರೆಗೆ ಬರುವಷ್ಟರಲ್ಲೇ ಪ್ರಾಣಪಕ್ಷಿ ಹಾರಿ ಹೋಗಿದೆ ಎಂದಿದ್ದಾರೆ. ಸರ್ಕಾರಿ ಮೆಡಿಕಲ್ ಕಾಲೇಜ್ ಹಾಗೂ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸುವಂತೆ ಮೃತನ ಜೊತೆಗಿದ್ದವನಿಗೆ ವೈದ್ಯರು ಸೂಚಿಸಿದ್ದಾರೆ. [ಸಿನಿಮಾದವ್ರಿಗೆ ದೇವರಿಗಿಂತ ದೆವ್ವಾನೇ ಬಲು ಇಷ್ಟ]
ಆದರೆ, ಶವವನ್ನು ಅಲ್ಲೇ ಬಿಟ್ಟ ಆ ವ್ಯಕ್ತಿ ಪರಾರಿಯಾಗಿದಾರೆ. ಮೃತ ವ್ಯಕ್ತಿಯ ಬಗ್ಗೆ ಹೆಚ್ಚಿನ ವಿವರಗಳು ಸಿಕ್ಕಿಲ್ಲ ಹಾಗೂ ಜತೆಗಿದ್ದ ವ್ಯಕ್ತಿಯ ಸುಳಿವು ಸಿಕ್ಕಿಲ್ಲ, ತಿರುನಲ್ವೇಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. (ಒನ್ಇಂಡಿಯಾ ಸುದ್ದಿ)
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications