ವಿಡಿಯೋಗೆ ಪೋಸ್ ನೀಡುವಾಗ ಜಾರಿ ಬಿದ್ದು ಜಲಪಾತದಲ್ಲಿ ಕೊಚ್ಚಿಹೋದ ಯುವಕ
ಚೆನ್ನೈ, ಆಗಸ್ಟ್ 4: ದೇಶಾದ್ಯಂತ ಮಳೆ ಆರ್ಭಟ ಜೋರಾಗಿದೆ. ಹಳ್ಳ ಕೊಳ್ಳಗಳು, ನದಿಗಳು ಉಕ್ಕಿ ಹರಿಯುತ್ತಿವೆ. ಜಲಪಾತಗಳು ಭೋರ್ಗರೆಯುತ್ತಿವೆ. ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಪ್ರವಾಸಿಗರು, ನದಿ, ಸಮುದ್ರ, ಜಲಪಾತಗಳಿಗೆ ಭೇಟಿ ನೀಡುತ್ತಾರೆ. ಆದರೆ ಇಂತಹ ಪ್ರದೇಶಗಳಲ್ಲಿ ನೀವು ಜಾಗರೂಕರಾಗಿರಬೇಕು, ಇಲ್ಲವಾದಲ್ಲಿ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇದೆ.
ಅದರಲ್ಲೂ ಜಲಪಾತಗಳು ರುದ್ರ ರಮಣೀಯವಾಗಿ ಹರಿಯುತ್ತವೆ. ಇಂತಹ ಸಮಯದಲ್ಲಿ ಜಲಪಾತಗಳ ಸಮೀಪ ಹೋಗುವುದು ಅಪಾಯಕಾರಿ, ತಮಿಳುನಾಡಿನಲ್ಲಿ ಯುವಕನೊಬ್ಬ ಅಪಾಯವನ್ನೂ ಲೆಕ್ಕಿಸದೇ ಜಲಪಾತದ ಬಳಿ ಫೋಟೋಗೆ ಪೋಸ್ ಕೊಡಲು ಹೋಗಿ ಜಾರಿ ಬಿದ್ದಿದ್ದಾನೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದಿಂಡುಗಲ್ ಜಿಲ್ಲೆಯ ಕೊಡೈಕೆನಾಲ್ ಬಳಿ ವಿಡಿಯೋಗೆ ಪೋಸ್ ಮಾಡುತ್ತಿದ್ದಾಗ ಜಲಪಾತಕ್ಕೆ ಬಿದ್ದು ಕೊಚ್ಚಿ ಹೋಗಿದ್ದಾನೆ. ನಾಪತ್ತೆಯಾಗಿರುವ ವ್ಯಕ್ತಿಗಾಗಿ ಇನ್ನೂ ಹುಡುಕಾಟ ನಡೆಸಲಾಗುತ್ತಿದೆ.

ಕೊಚ್ಚಿ ಹೋಗಿರುವ ವ್ಯಕ್ತಿಯನ್ನು ಅಜಯ್ ಪಾಂಡಿಯನ್ ಎಂದು ಗುರುತಿಸಲಾಗಿದೆ. ಆ ವ್ಯಕ್ತಿ ತನ್ನ ಇನ್ನೊಬ್ಬ ಸ್ನೇಹಿತನೊಂದಿಗೆ ಪುಲ್ಲವೇಲಿ ಜಲಪಾತಕ್ಕೆ ಹೋಗಿದ್ದ. ಅಜಯ್ ತಾಂಡಿಕುಡಿಯ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ.
ಫೋಟೊ ಹುಚ್ಚಿಗೆ ಅಪಾಯ ತಂದುಕೊಳ್ಳಬೇಡಿ
ಇಡೀ ಘಟನೆ ಮೊಬೈಲ್ನಲ್ಲಿ ಸೆರೆಯಾಗಿದೆ. ಅಜಯ್ ಚಿತ್ರಗಳನ್ನು ತೆಗೆಯುತ್ತಿದ್ದ ಅವನ ಸ್ನೇಹಿತ ಕ್ಯಾಮೆರಾದಲ್ಲಿ ಅಜಯ್ ಬೀಳುವ ದೃಶ್ಯ ಸೆರಯಾಗಿದೆ. ಅಜಯ್ ತನ್ನ ಸ್ನೇಹಿತನನ್ನು ತನ್ನ ಚಿತ್ರವನ್ನು ತೆಗೆಯುವಂತೆ ಕೇಳಿಕೊಂಡಾಗ ಬಂಡೆಗಳ ಮೇಲೆ ಇಳಿಯುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಅಜಯ್ನ ಸ್ನೇಹಿತ ತನ್ನ ಬಹು ಚಿತ್ರಗಳನ್ನು ತೆಗೆದುಕೊಳ್ಳುತ್ತಿದ್ದಂತೆ, ಅವನು ಬಂಡೆಯ ಮೇಲೆ ಜಾರಿ ಜಲಪಾತಕ್ಕೆ ಬಿದ್ದನು. ಏತನ್ಮಧ್ಯೆ, ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ವ್ಯಕ್ತಿಯ ಪತ್ತೆಗೆ ಹುಡುಕಾಟ ನಡೆಸಿದ್ದಾರೆ. ಮಳೆ ಮತ್ತು ಬೆಳಕಿನ ಕೊರತೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಲ್ಲವೇಲಿ ಗ್ರಾಮದ ಜಲಪಾತವನ್ನು ಅಪಾಯಕಾರಿ ಎಂದು ಪರಿಗಣಿಸಲಾಗಿದೆ ಮತ್ತು ಜಲಪಾತಕ್ಕೆ ಬಿದ್ದು ಕನಿಷ್ಠ ಐದು ಜನರು ಮೃತಪಟ್ಟಿದ್ದಾರೆ.
ಈ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಬಂಡೆ ಜಾರಲು ಕಾರಣವಾಗಿರಬಹುದು. ಮಳೆಯ ರಭಸಕ್ಕೆ ನೀರಿನ ಪ್ರಮಾಣ ಮತ್ತು ಪ್ರವಾಹದ ವೇಗವೂ ಹೆಚ್ಚಾಗಿದೆ.
ವಾರಾಂತ್ಯಗಳಲ್ಲಿ ಜಲಪಾತ, ನದಿ, ಸಮುದ್ರ ತೀರಗಳಿಗೆ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ. ಯಾವುದೇ ಕಾರಣಕ್ಕೂ ಫೋಟೋ ತೆಗೆಸಿಕೊಳ್ಳುವ ಆಸೆಗೆ, ಸಾಹಸ ಮಾಡುವ ಮನಸ್ಥಿತಿಯಿಂದಲೋ ಅಪಾಯವನ್ನು ತಂದುಕೊಳ್ಳಬೇಡಿ. ಸ್ವಲ್ಪ ಯಾಮಾರಿದರು ಅಪಾಯ ತಪ್ಪಿದ್ದಲ್ಲ, ಆದಷ್ಟೂ ಜಾಗರೂಕರಾಗಿರಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications