ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ತಮಿಳುನಾಡು ಕೃಷಿ ಸಚಿವರ ಸ್ಥಿತಿ ಗಂಭೀರ

|
Google Oneindia Kannada News

ಚೆನ್ನೈ,ಅಕ್ಟೋಬರ್ 31: ತಮಿಳುನಾಡು ಕೃಷಿ ಸಚಿವ ಆರ್ ದುರೈಕಣ್ಣು ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿ ಎಂದು ಕಾವೇರಿ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಗರಿಷ್ಠ ಜೀವ ರಕ್ಷಕದ ಹೊರತಾಗಿಯೂ ಸಚಿವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಅರವಿಂದನ್ ಸೆಲ್ವರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶದಲ್ಲಿ ಐದು ಲಕ್ಷಕ್ಕೆ ಇಳಿಕೆಯಾದ ಸಕ್ರಿಯ ಪ್ರಕರಣಗಳುದೇಶದಲ್ಲಿ ಐದು ಲಕ್ಷಕ್ಕೆ ಇಳಿಕೆಯಾದ ಸಕ್ರಿಯ ಪ್ರಕರಣಗಳು

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 72 ವರ್ಷದ ದೊರೈಕಣ್ಣಾ ಅವರು ಅಕ್ಟೋಬರ್ 13ರಂದು ಕೋವಿಡ್-19 ಪರೀಕ್ಷೆ ಮಾಡಿಸಿದ್ದರು. ವರದಿ ಪಾಸಿಟಿವ್ ಬಂದಿದ್ದರಿಂದ ನಗರದ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು.

Tamil Nadu Agriculture Minister Battling COVID-19 Is Critical, Says Hospital

ದೇಶದಲ್ಲಿ ಮತ್ತೆ 50 ಸಾವಿರಕ್ಕೂ ಕಡಿಮೆ ಕೋವಿಡ್ ಪ್ರಕರಣ ವರದಿಯಾಗಿದೆ. ಭಾರತದಲ್ಲಿ 24 ಗಂಟೆಗಳಲ್ಲಿ 48,268 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಈ ಬಾರಿ ಕೂಡ ಹೊಸ ಪ್ರಕರಣಗಳಿಗಿಂತ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆಯೇ ಅಧಿಕವಾಗಿರುವುದು ಸಮಾಧಾನ ಮೂಡಿಸಿದೆ.

ಕಳೆದ 24 ಗಂಟೆಗಳಲ್ಲಿ 551 ಮಂದಿ ಕೊರೊನಾ ವೈರಸ್‌ನಿಂದ ಬಲಿಯಾಗಿದ್ದಾರೆ. ಇದರಿಂದ ದೇಶದಲ್ಲಿ ವೈರಸ್ ಸೋಂಕಿಗೆ ಬಲಿಯಾದವರ ಸಂಖ್ಯೆ 1,21,641ಕ್ಕೆ ಏರಿಕೆಯಾಗಿದೆ. ಶುಕ್ರವಾರದ ಅಂತ್ಯದ ವೇಳೆಗೆ 59,454 ಮಂದಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೂ 74,32,829 ಮಂದಿ ಗುಣಮುಖರಾಗಿ ಮನೆಗೆ ಮರಳಿದಂತಾಗಿದೆ.

Recommended Video

Modi ಯಿಂದ ಭಾರತೀಯರಿಗೆ ಮತ್ತೊಂದು Gift | Oneindia Kannada

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಐದು ಲಕ್ಷಕ್ಕಿಂತ ಕಡಿಮೆಯಾಗಿರುವುದು ಮತ್ತೊಂದು ಗಮನಾರ್ಹ ಸಾಧನೆ. ಶನಿವಾರದ ಬೆಳಗಿನ ವೇಳೆಗೆ ದೇಶದಲ್ಲಿ 5,82,649 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ದಾಖಲಾದ ಒಟ್ಟು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 81,37,119ಕ್ಕೆ ತಲುಪಿದೆ.

English summary
Tamil Nadu Agriculture Minister R Doraikkannu, battling COVID-19 pneumonia and on life support, is extremely critical, a hospital treating him said here on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X