ತಮಿಳುನಾಡು: ವಿವಿಗಳಿಗೆ ಕುಲಪತಿ ನೇಮಕ ಮಾಡುವ ರಾಜ್ಯಪಾಲರ ಅಧಿಕಾರ ಮೊಟಕು
ಚೆನ್ನೈ, ಏಪ್ರಿಲ್ 27: ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ನೇಮಕ ಮಾಡುವ ಅಧಿಕಾರವು ಸರ್ಕಾರದ ಹೊಣೆಯಾಗಿರುತ್ತದೆ ಎಂದು ಸೋಮವಾರ ತಮಿಳುನಾಡು ಸರ್ಕಾರವು ವಿಧಾನಸಭೆಯಲ್ಲಿ ಎರಡು ಮಹತ್ವದ ವಿಧೇಯಕಗಳನ್ನು ಅಂಗೀಕರಿಸಿದೆ.
ಈ ಮೂಲಕ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಕ ಮಾಡುವ ಅಧಿಕಾರ ವಿಶ್ವವಿದ್ಯಾಲಯಗಳ ಕುಲಾಧಿಪತಯೂ ಆಗಿರುವ ರಾಜ್ಯಪಾಲರಿಗೆ ಇದ್ದ ಅಧಿಕಾರವನ್ನು ಮೊಟಕುಗೊಳಿಸಲಾಗಿದೆ.
'ರಾಜ್ಯಪಾಲರು ರಾಜ್ಯದಲ್ಲಿನ ವಿಶ್ವವಿದ್ಯಾನಿಲಯಗಳ ಕುಲಾಧಿಪತಿಯಾಗಿ, ತಜ್ಞರ ಸಮಿತಿಗಳ ಶಿಫಾರಸಿನ ಮೇರೆಗೆ ಉಪಕುಲಪತಿಗಳನ್ನು ನೇಮಿಸಬಹುದಿತ್ತು. ಆದರೆ, ಕುಲಪತಿಗಳ ನೇಮಕದಲ್ಲಿ ಇರುವ ಅಸಮರ್ಥತೆ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದೆ. ಪ್ರಧಾನಿಯವರ ತವರು ರಾಜ್ಯ ಗುಜರಾತ್ ಸಹಿತ ಹಲವು ರಾಜ್ಯಗಳು ಈಗಾಗಲೇ ತಮ್ಮ ರಾಜ್ಯಗಳ ವಿಶ್ವವಿದ್ಯಾಲಯಕ್ಕೆ ಕುಲಪತಿಗಳನ್ನು ಸರ್ಕಾರಕ್ಕೇ ನೇಮಿಸುವ ಅಧಿಕಾರ ಹೊಂದಿವೆ' ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸದನದಲ್ಲಿ ಹೇಳಿದ್ದಾರೆ.

ಗುಜರಾತ್ನಲ್ಲಿ 1949ರಿಂದಲೂ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ಆಯ್ಕೆ ಮಾಡುವ ಅಧಿಕಾರ ಮುಖ್ಯಮಂತ್ರಿಗೆ ಇದೆ. ಕಳೆದ ವರ್ಷವು ಮಹಾರಾಷ್ಟ್ರದಲ್ಲಿ ಈ ವಿಷಯದ ಬಗ್ಗೆ ಇದೇ ರೀತಿಯ ಮಸೂದೆಯನ್ನು ಅಂಗೀಕರಿಸಲಾಗಿದೆ ಎಂದು ವಿವರಿಸಿದರು.
ತಮಿಳುನಾಡಿನಲ್ಲಿ 13 ಸರ್ಕಾರಿ ವಿಶ್ವವಿದ್ಯಾಲಯಗಳಿವೆ ಮತ್ತು ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಹೊಣೆ ಹೊತ್ತಿರುವ ರಾಜ್ಯ ಸರ್ಕಾರವು ಕುಲಪತಿಗಳನ್ನು ನೇಮಿಸುವ ಅಧಿಕಾರವನ್ನು ಹೊಂದಿಲ್ಲದಿರುವುದು ಹೆಚ್ಚಿನ ಪರಿಣಾಮ ಬೀರುತ್ತಿದೆ ಎಂದು ಸ್ಟಾಲಿನ್ ತಮಿಳುನಾಡು ವಿಧಾನಸಭೆಯ ತಮ್ಮ ಭಾಷಣದಲ್ಲಿ ಹೇಳಿದರು.

'ಉಪಕುಲಪತಿಗಳ ನೇಮಕ ಮಾಡುವ ಕುರಿತು ರಾಜ್ಯಪಾಲರು ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ' ಸರ್ಕಾರದ ಜೊತೆ ಸಮಾಲೋಚಿಸುವ ಪರಿಪಾಠವು ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿದೆ. ವಿಶೇಷವಾಗಿ ಕಳೆದ ನಾಲ್ಕು ವರ್ಷಗಳಿಂದ ವಿಸಿ ನೇಮಕದಲ್ಲಿ ರಾಜ್ಯಪಾಲರು ವಿಶೇಷ ಅಧಿಕಾರ ಎಂಬಂತೆ ವರ್ತಿಸುತ್ತಿದ್ದಾರೆ. ಉನ್ನತ ಶಿಕ್ಷಣ ನೀಡುವ ಕೆಲಸವನ್ನು ಹೊಂದಿರುವ ಸರಕಾರವನ್ನು ಗೌರವಿಸದ ಈ ಚಟ ಎದ್ದು ಕಾಣುತ್ತಿದೆ,' ಎಂದು ಸ್ಟಾಲಿನ್ ವಿಧಾನಸಭೆಯಲ್ಲಿ ರಾಜ್ಯಪಾಲರ ವಿರುದ್ಧ ಗುಡುಗಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications