ತಮಿಳುನಾಡು ಚುನಾವಣೆಯಲ್ಲಿ ನಟ-ನಟಿಯರು: ಗೆದ್ದವರೆಷ್ಟು?
ತಮಿಳುನಾಡಿನಲ್ಲಿ ಸಿನಿಮಾ ಹಾಗೂ ರಾಜಕೀಯ ಬೇರೆ-ಬೇರೆ ಅಲ್ಲ. ಸಿನಿಮಾ ನಟರಾಗಿ ಜನಪ್ರಿಯರಾದವರು ರಾಜ್ಯದ ಮುಖ್ಯಮಂತ್ರಿಗಳಾಗಿ ಬಹುಕಾಲ ಆಳಿದ ದೊಡ್ಡ ಇತಿಹಾಸ ತಮಿಳುನಾಡಿನಲ್ಲಿದೆ.
ಸಿನಿಮಾ ತಾರೆಯರು ರಾಜಕೀಯ ಪಕ್ಷ ಕಟ್ಟಿ ಚುನಾವಣೆ ಎದುರಿಸುವ, ಬೇರೊಂದು ರಾಜಕೀಯ ಪಕ್ಷದೊಟ್ಟಿಗೆ ಗುರುತಿಸಿಕೊಂಡು ರಾಜಕೀಯ ಭವಿಷ್ಯ ಅರಸುವುದು ತಮಿಳುನಾಡಿನಲ್ಲಿ ಬಹಳ ಸಾಮಾನ್ಯ.
ನಿನ್ನೆಯಷ್ಟೆ ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ ಬಂದಿದೆ. ಸ್ಟ್ಯಾಲಿನ್ ನೇತೃತ್ವದ ಡಿಎಂಕೆ ಪಕ್ಷವು ಬಹುಮತ ಪಡೆದಿದ್ದು ಆಡಳಿತಾರೂಢ ಎಐಎಡಿಎಂಕೆ ಪಕ್ಷಕ್ಕೆ ಸೋಲಾಗಿದೆ. ಆದರೆ ಈ ಬಾರಿ ಚುನಾವಣೆಗೆ ಯಾರ್ಯಾರು ಸಿನಿಮಾ ತಾರೆಯರು ಸ್ಪರ್ಧಿಸಿದ್ದರು, ಅದರಲ್ಲಿ ಗೆಲುವು ಎಷ್ಟು ಜನರ ಪಾಲಾಯಿತು? ಇಲ್ಲಿದೆ ಪಟ್ಟಿ.

ಕಮಲ್ ಹಾಸನ್ಗೆ ನಿರಾಸೆ
ದೊಡ್ಡ ರಾಜಕೀಯ ಮಹಾತ್ವಾಕಾಂಕ್ಷೆಯೊಂದಿಗೆ ಸ್ವಂತ ಪಕ್ಷ ಸ್ಥಾಪಿಸಿ ಚುನಾವಣೆಗೆ ಧುಮುಕಿದ್ದ ನಟ ಕಮಲ್ ಹಾಸನ್ಗೆ ತೀವ್ರ ನಿರಾಸೆಯಾಗಿದೆ. ಕಮಲ್ರ 'ಮಕ್ಕಳ ನಿಧಿ ಮಯಂ' ಪಕ್ಷದ ಯಾವೊಬ್ಬ ಅಭ್ಯರ್ಥಿಯೂ ಚುನಾವಣೆಯಲ್ಲಿ ಗೆದ್ದಿಲ್ಲ. ಸ್ವತಃ ಕಮಲ್ಗೆ ತೀವ್ರ ನಿರಾಸೆಯಾಗಿದ್ದು ಕೊಯಂಬತ್ತೂರು ದಕ್ಷಿಣ ಕ್ಷೇತ್ರದದಲ್ಲಿ 1540 ಮತಗಳ ಅಂತರದಿಂದ ಸೋಲುಂಡಿದ್ದಾರೆ.

ಖುಷ್ಬು ಸುಂದರ್ಗೆ ಸೋಲು
ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಖುಷ್ಬು ಸುಂದರ್ ಬಿಜೆಪಿ ಅಭ್ಯರ್ಥಿಯಾಗಿ ಥೌಂಸಡ್ಸ್ ಲೈಟ್ಸ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಖುಷ್ಬು ಇಲ್ಲಿ ಸೋಲನುಭವಿಸಿದ್ದಾರೆ. ಖುಷ್ಬು ಅವರಿಗೆ ಇಲ್ಲಿ ಎರಡನೇ ಸ್ಥಾನ ಡಿಎಂಕೆ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಖುಷ್ಬು ಮೊದಲು ಕಾಂಗ್ರೆಸ್ನಲ್ಲಿದ್ದರು. ಅಲ್ಲಿಂದ ಬಿಜೆಪಿಗೆ ಸೇರ್ಪಡೆಯಾಗಿ ಈಗ ಸೋಲನುಭವಿಸಿದ್ದಾರೆ.

ಉದಯನಿಧಿ ಸ್ಟ್ಯಾಲಿನ್ಗೆ ಭಾರಿ ಗೆಲುವು
ತಮಿಳಿನ ಯುವ ನಾಯಕ, ಭಾವಿ ಸಿಎಂ ಸ್ಟ್ಯಾಲಿನ್ ಅವರ ಪುತ್ರ ಉದಯನಿಧಿ ಸ್ಟ್ಯಾಲಿನ್ ಅವರು ತಮ್ಮ ತಾತನ ಕ್ಷೇತ್ರ ಚೆಪಾಕ್ನಿಂದ ಸ್ಪರ್ಧಿಸಿ ಭಾರಿ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಉದಯನಿಧಿ ಸ್ಟ್ಯಾಲಿನ್ ಎದುರು ಸ್ಪರ್ಧಿಸಿದ್ದ ಎಲ್ಲರೂ ಠೇವಣಿ ಕಳೆದುಕೊಂಡಿದ್ದಾರೆ!
Recommended Video

ಶ್ರೀಪ್ರಿಯ, ಸ್ನೇಹನ್ಗೆ ಸೋಲು
ತಮಿಳಿನ ಹಿರಿಯ ನಟಿ ಶ್ರೀಪ್ರಿಯ ಕಮಲ್ ಹಾಸನ್ ಅವರ ಮಕ್ಕಳ ನಿಧಿ ಮಯಂ ಪಕ್ಷದಿಂದ ಚೆನ್ನೈನ ಮೈಲಾಪೋರ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ನಟ, ಗೀತರಚನೆಕಾರ ಸ್ನೇಹನ್ ಸಹ ಕಮಲ್ ಪಕ್ಷದಿಂದಲೇ ವಿರುಗಂಬಕ್ಕಮ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications