ತಮಿಳುನಾಡು ಚುನಾವಣೆಯಲ್ಲಿ ನಟ-ನಟಿಯರು: ಗೆದ್ದವರೆಷ್ಟು?
ತಮಿಳುನಾಡಿನಲ್ಲಿ ಸಿನಿಮಾ ಹಾಗೂ ರಾಜಕೀಯ ಬೇರೆ-ಬೇರೆ ಅಲ್ಲ. ಸಿನಿಮಾ ನಟರಾಗಿ ಜನಪ್ರಿಯರಾದವರು ರಾಜ್ಯದ ಮುಖ್ಯಮಂತ್ರಿಗಳಾಗಿ ಬಹುಕಾಲ ಆಳಿದ ದೊಡ್ಡ ಇತಿಹಾಸ ತಮಿಳುನಾಡಿನಲ್ಲಿದೆ.
ಸಿನಿಮಾ ತಾರೆಯರು ರಾಜಕೀಯ ಪಕ್ಷ ಕಟ್ಟಿ ಚುನಾವಣೆ ಎದುರಿಸುವ, ಬೇರೊಂದು ರಾಜಕೀಯ ಪಕ್ಷದೊಟ್ಟಿಗೆ ಗುರುತಿಸಿಕೊಂಡು ರಾಜಕೀಯ ಭವಿಷ್ಯ ಅರಸುವುದು ತಮಿಳುನಾಡಿನಲ್ಲಿ ಬಹಳ ಸಾಮಾನ್ಯ.
ನಿನ್ನೆಯಷ್ಟೆ ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ ಬಂದಿದೆ. ಸ್ಟ್ಯಾಲಿನ್ ನೇತೃತ್ವದ ಡಿಎಂಕೆ ಪಕ್ಷವು ಬಹುಮತ ಪಡೆದಿದ್ದು ಆಡಳಿತಾರೂಢ ಎಐಎಡಿಎಂಕೆ ಪಕ್ಷಕ್ಕೆ ಸೋಲಾಗಿದೆ. ಆದರೆ ಈ ಬಾರಿ ಚುನಾವಣೆಗೆ ಯಾರ್ಯಾರು ಸಿನಿಮಾ ತಾರೆಯರು ಸ್ಪರ್ಧಿಸಿದ್ದರು, ಅದರಲ್ಲಿ ಗೆಲುವು ಎಷ್ಟು ಜನರ ಪಾಲಾಯಿತು? ಇಲ್ಲಿದೆ ಪಟ್ಟಿ.

ಕಮಲ್ ಹಾಸನ್ಗೆ ನಿರಾಸೆ
ದೊಡ್ಡ ರಾಜಕೀಯ ಮಹಾತ್ವಾಕಾಂಕ್ಷೆಯೊಂದಿಗೆ ಸ್ವಂತ ಪಕ್ಷ ಸ್ಥಾಪಿಸಿ ಚುನಾವಣೆಗೆ ಧುಮುಕಿದ್ದ ನಟ ಕಮಲ್ ಹಾಸನ್ಗೆ ತೀವ್ರ ನಿರಾಸೆಯಾಗಿದೆ. ಕಮಲ್ರ 'ಮಕ್ಕಳ ನಿಧಿ ಮಯಂ' ಪಕ್ಷದ ಯಾವೊಬ್ಬ ಅಭ್ಯರ್ಥಿಯೂ ಚುನಾವಣೆಯಲ್ಲಿ ಗೆದ್ದಿಲ್ಲ. ಸ್ವತಃ ಕಮಲ್ಗೆ ತೀವ್ರ ನಿರಾಸೆಯಾಗಿದ್ದು ಕೊಯಂಬತ್ತೂರು ದಕ್ಷಿಣ ಕ್ಷೇತ್ರದದಲ್ಲಿ 1540 ಮತಗಳ ಅಂತರದಿಂದ ಸೋಲುಂಡಿದ್ದಾರೆ.

ಖುಷ್ಬು ಸುಂದರ್ಗೆ ಸೋಲು
ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಖುಷ್ಬು ಸುಂದರ್ ಬಿಜೆಪಿ ಅಭ್ಯರ್ಥಿಯಾಗಿ ಥೌಂಸಡ್ಸ್ ಲೈಟ್ಸ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಖುಷ್ಬು ಇಲ್ಲಿ ಸೋಲನುಭವಿಸಿದ್ದಾರೆ. ಖುಷ್ಬು ಅವರಿಗೆ ಇಲ್ಲಿ ಎರಡನೇ ಸ್ಥಾನ ಡಿಎಂಕೆ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಖುಷ್ಬು ಮೊದಲು ಕಾಂಗ್ರೆಸ್ನಲ್ಲಿದ್ದರು. ಅಲ್ಲಿಂದ ಬಿಜೆಪಿಗೆ ಸೇರ್ಪಡೆಯಾಗಿ ಈಗ ಸೋಲನುಭವಿಸಿದ್ದಾರೆ.

ಉದಯನಿಧಿ ಸ್ಟ್ಯಾಲಿನ್ಗೆ ಭಾರಿ ಗೆಲುವು
ತಮಿಳಿನ ಯುವ ನಾಯಕ, ಭಾವಿ ಸಿಎಂ ಸ್ಟ್ಯಾಲಿನ್ ಅವರ ಪುತ್ರ ಉದಯನಿಧಿ ಸ್ಟ್ಯಾಲಿನ್ ಅವರು ತಮ್ಮ ತಾತನ ಕ್ಷೇತ್ರ ಚೆಪಾಕ್ನಿಂದ ಸ್ಪರ್ಧಿಸಿ ಭಾರಿ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಉದಯನಿಧಿ ಸ್ಟ್ಯಾಲಿನ್ ಎದುರು ಸ್ಪರ್ಧಿಸಿದ್ದ ಎಲ್ಲರೂ ಠೇವಣಿ ಕಳೆದುಕೊಂಡಿದ್ದಾರೆ!
Recommended Video

ಶ್ರೀಪ್ರಿಯ, ಸ್ನೇಹನ್ಗೆ ಸೋಲು
ತಮಿಳಿನ ಹಿರಿಯ ನಟಿ ಶ್ರೀಪ್ರಿಯ ಕಮಲ್ ಹಾಸನ್ ಅವರ ಮಕ್ಕಳ ನಿಧಿ ಮಯಂ ಪಕ್ಷದಿಂದ ಚೆನ್ನೈನ ಮೈಲಾಪೋರ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ನಟ, ಗೀತರಚನೆಕಾರ ಸ್ನೇಹನ್ ಸಹ ಕಮಲ್ ಪಕ್ಷದಿಂದಲೇ ವಿರುಗಂಬಕ್ಕಮ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದಾರೆ.
-
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್












Click it and Unblock the Notifications