ಕಮಲ್ ಹಾಸನ್ಗೆ ತೀವ್ರ ನಿರಾಸೆ: ಅಂತಿಮ ಸುತ್ತಿನಲ್ಲಿ ಸೋಲು
ತಮಿಳುನಾಡು ವಿಧಾನಸಭೆ ಚುನಾವಣೆ ಪ್ರಚಾರ ಸಮಯದಲ್ಲಿ ಗಮನ ಸೆಳೆದಿದ್ದ ಕಮಲ್ ಹಾಸನ್ ಸ್ಥಾಪಿತ ಹೊಸ ಪಕ್ಷ 'ಮಕ್ಕಳ್ ನಿಧಿ ಮಯಂ' ಫಲಿತಾಂಶದಲ್ಲಿ ಗುರುತು ಮೂಡಿಸಲು ವಿಫಲವಾಗಿದೆ.
ಸ್ವತಃ ಕಮಲ್ ಹಾಸನ್ ಸೇರಿದಂತೆ ಪಕ್ಷದ ಯಾವೊಬ್ಬ ಅಭ್ಯರ್ಥಿ ಸಹ ಚುನಾವಣೆಯಲ್ಲಿ ಗೆಲುವು ಸಾಧಿಸಲು ವಿಫಲರಾಗಿದ್ದಾರೆ. ಅಂತಿಮ ಸುತ್ತಿನವರೆಗೂ ಮುನ್ನಡೆಯಲ್ಲಿದ್ದ ಕಮಲ್ ಹಾಸನ್ ಗೆಲುವಿನ ನಿರೀಕ್ಷೆ ಹುಟ್ಟಿಸಿದ್ದರಾದರೂ ಅಂತಿಮವಾಗಿ ಅವರೂ ಸೋಲು ಕಂಡಿದ್ದಾರೆ.
ಕಮಲ್ ಹಾಸನ್ ಅವರ ಮಕ್ಕಳ್ ನಿಧಿ ಮಯಂ ಪಕ್ಷವು 193 ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಿತ್ತು. ಕಮಲ್ ಹಾಸನ್ ಅವರು ಕೊಯಂಬತ್ತೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆರಂಭದ ಕೆಲವು ಸುತ್ತುಗಳ ಮತ ಎಣಿಕೆ ಬಳಿಕ ಮುನ್ನಡೆ ಸಾಧಿಸಿದ್ದ ಕಮಲ್ ಹಾಸನ್ ಕೊನೆಯ ಸುತ್ತಿನಲ್ಲಿ ಸೋಲನುಭವಿಸಿದ್ದಾರೆ.

ಅಂತಿಮ ಮತ ಎಣಿಕೆ ಮುಗಿದಾಗ ಕಮಲ್ ಹಾಸನ್ 49,561 ಮತಗಳನ್ನು ಪಡೆದಿದ್ದರೆ ಬಿಜೆಪಿಯ ಅಭ್ಯರ್ಥಿ ವನತಿ ಶ್ರೀನಿವಾಸ್ 50,798 ಮತಗಳನ್ನು ಪಡೆದು ಜಯಗಳಿಸಿದ್ದಾರೆ. 1237 ಮತಗಳ ಅಂತರದಲ್ಲಿ ಸೋಲು ಕಂಡಿದ್ದಾರೆ. ಕಾಂಗ್ರೆಸ್ನ ಮಯೂರ ಜಯಕುಮಾರ್ 41,081 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.
'ಮಕ್ಕಳ್ ನಿಧಿ ಮಯಂ' ಪಕ್ಷವು 2019 ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧಿಸಿತ್ತು ಆದರೆ ಆಗಲೂ ಯಾವೊಬ್ಬ ಅಭ್ಯರ್ಥಿಯೂ ಸಹ ಜಯ ಸಾಧಿಸಿರಲಿಲ್ಲ. ಈಗ ವಿಧಾನಸಭೆ ಚುನಾವಣೆಯಲ್ಲಿ ಕೆಲವು ಸೀಟಾದರೂ ಗೆಲ್ಲುವ ನಿರೀಕ್ಷೆ ಇದೆಯೆಂದು ಕಮಲ್ ಹಾಸನ್ ಹೇಳಿದ್ದರು ಆದರೆ ಅದೂ ಸುಳ್ಳಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications