ಎಂಎನ್ಎಂ ಕಡೆಗೆ ಜನರ ಒಲವು: ಕಮಲ ಹಾಸನ್ ವಿಶ್ವಾಸ
ಚೆನ್ನೈ, ಜನವರಿ 5: ಇದುವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದ್ದವರಿಂದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮಿಳುನಾಡಿನ ಜನತೆ ಬದಲಾವಣೆಯನ್ನು ಬಯಸಿದ್ದಾರೆ. ಅದಕ್ಕೆ ಮಕ್ಕಳ್ ನೀಧಿ ಮಯ್ಯಮ್ ಪಕ್ಷವು ಹೆಚ್ಚು ಸೂಕ್ತವಾಗಿದೆ ಎಂದು ಪಕ್ಷದ ಮುಖ್ಯಸ್ಥ ಕಮಲ ಹಾಸನ್ ಹೇಳಿದ್ದಾರೆ.
ಎಐಎಡಿಎಂಕೆ ಮತ್ತು ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದ ಕಮಲ್ ಹಾಸನ್, ಜನರ ಪ್ರೀತಿ ತಮ್ಮ ಮತ್ತು ತಮ್ಮ ಪಕ್ಷದ ಕಡೆಗೆ ಹೆಚ್ಚುತ್ತಿರುವುದು ಇದಕ್ಕೆ ಸಾಕ್ಷಿ. ಎನ್ಎಂಎಂಗೆ ಬೆಂಬಲ ಹೆಚ್ಚುತ್ತಿರುವುದರ ಶ್ರೇಯಸ್ಸು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿರುವ ಅಭ್ಯಾಸ ಹೊಂದಿರುವವರಿಗೆ ಸಲ್ಲುಸುತ್ತದೆ ಎಂದು ಟೀಕಿಸಿದ್ದಾರೆ.
ತಮಿಳುನಾಡಿನಾದ್ಯಂತ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದು ಆರೋಪಿಸಿದ ಅವರು, ಎಂಎನ್ಎಂಗೆ ಮತ ಹಾಕುವ ಮೂಲಕ ಮತದಾರರು ಇಂತಹ ಸನ್ನಿವೇಶವನ್ನು ಬದಲಾಯಿಸಬೇಕು. ಇದಕ್ಕಾಗಿ ಅವರು ಏಪ್ರಿಲ್-ಮೇ ತಿಂಗಳಿನಲ್ಲಿ ಸಿಗುವ ಐತಿಹಾಸಿಕ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

'ಜನರು ಈಗ ಬದಲಾವಣೆಗೆ ಬೇಡಿಕೆ ಇರಿಸಲು ಆರಂಭಿಸಿದ್ದಾರೆ. ನೀವು ಬದಲಾವಣೆ ಮಾಡಿ. ಚುನಾವಣೆಗೆ ಇನ್ನು ಮೂರು ತಿಂಗಳು ಮಾತ್ರ ಬಾಕಿ ಇದೆ. ಜನರು ನನ್ನ ಮೇಲೆ ಮತ್ತು ಎಂಎನ್ಎಂ ಮೇಲೆ ತೋರಿಸುತ್ತಿರುವ ಪ್ರೀತಿ ಹಾಗೂ ಒಲವು ಉತ್ತಮ ಬದಲಾವಣೆಯು ಮುಂದೆ ಬರಲಿದೆ ಎಂಬುದಕ್ಕೆ ಪುರಾವೆಯಾಗಿದೆ' ಎಂದು ತಿಳಿಸಿದ್ದಾರೆ.
ಮಹಿಳೆಯರು ತಮ್ಮ ಪಕ್ಷದ ಸಭೆಗಳಲ್ಲಿ ಮಾತ್ರವೇ ನಿರ್ಭೀತಿಯಿಂದ ಮಾತನಾಡುತ್ತಿದ್ದಾರೆ. ಇದು ತಮಗೆ ದೊಡ್ಡ ಆತ್ಮವಿಶ್ವಾಸ ನೀಡಿದೆ. ಶೀಘ್ರವೇ ರಾಜ್ಯದಾದ್ಯಂತ ಅವರ ಸುರಕ್ಷತೆ ಮತ್ತು ಭದ್ರತೆಯನ್ನು ಕಾಪಾಡುವ ಕರ್ತವ್ಯ ತಮ್ಮದಾಗಲಿದೆ. ಅದರ ಸೂಚನೆಗಳನ್ನು ತಾವು ಕಾಣುತ್ತಿರುವುದಾಗಿ ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications