Times Now-C-Voter exit polls: 10 ವರ್ಷ ಬಳಿಕ ಡಿಎಂಕೆ ಅಧಿಕಾರಕ್ಕೆ
ಐದು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪದೇಶದಲ್ಲಿ ನಡೆದ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದೆ. ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೆರಿ ವಿಧಾನಸಭೆ ಚುನಾವಣೆಗಳು ಏಪ್ರಿಲ್ 6ರಂದು ಮುಕ್ತಾಯಗೊಂಡರೆ, ಪಶ್ಚಿಮ ಬಂಗಾಳದಲ್ಲಿ 8ನೇ ಹಾಗೂ ಕೊನೆ ಹಂತದ ಮತದಾನ ಇಂದು(ಏಪ್ರಿಲ್ 29) ಸಂಪನ್ನವಾಗಿದೆ. ಪ್ರಮುಖ ಮಾಧ್ಯಮಗಳು ಸೇರಿದಂತೆ ಸ್ಥಳೀಯ ಖಾಸಗಿ ಸುದ್ದಿ ವಾಹಿನಿಗಳು ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸುತ್ತಿವೆ. ಮೇ 2 ರಂದು ಅಂತಿಮ ಫಲಿತಾಂಶ ಪ್ರಕಟವಾಗಲಿದೆ.
ಟೈಮ್ಸ್ ನೌ ಹಾಗೂ ಸಿ ವೋಟರ್ ಸಂಸ್ಥೆ ನಡೆಸಿದ ಚುನಾವಣೋತ್ತರ ಸಮೀಕ್ಷೆಯಂತೆ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಈ ಬಾರಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ. 10 ವರ್ಷಗಳ ಬಳಿಕ ಮತ್ತೆ ಅಧಿಕಾರಕ್ಕೇರುವ ಸಾಧ್ಯತೆಯಿದ್ದು, ಎಂಕೆ ಸ್ಟಾಲಿನ್ ಮೊದಲ ಬಾರಿಗೆ ಸಿಎಂ ಆಗುವ ಕನಸು ನನಸಾಗುವ ದಿನ ಬಂದಿದೆ ಎಂಬ ವರದಿಯಿದೆ.

ತಮಿಳುನಾಡು (234 ಸ್ಥಾನ, 118 ಮ್ಯಾಜಿಕ್ ನಂಬರ್) 2021 ಎಕ್ಸಿಟ್ ಪೋಲ್ ಫಲಿತಾಂಶ:
ಎಐಎಡಿಎಂಕೆ+: 166
ಡಿಎಂಕೆ+: 64
ಎಎಂಎಂಕೆ+:1
ಇತರೆ: 3
2021 ಶೇಕಡಾವಾರು ಮತ ಗಳಿಕೆ
ಎಐಎಡಿಎಂಕೆ+: 35%
ಡಿಎಂಕೆ+: 46.7%
ಎಎಂಎಂಕೆ+: 3.8
ಇತರೆ: 14.5%
2016ರ ಫಲಿತಾಂಶ , ಶೇಕಡಾವಾರು ಮತ ಗಳಿಕೆ
ಎಐಎಡಿಎಂಕೆ: 134, 41.3%
ಡಿಎಂಕೆ: 89, 32.1%
ಕಾಂಗ್ರೆಸ್: 8, 65%
ಐಉಎಂಎಲ್: 1, 0.7%
ಮಾರ್ಚ್ 27ರಿಂದ ಏಪ್ರಿಲ್ 29ರ ಸಂಜೆ 7ರವರೆಗೂ ಎಕ್ಸಿಟ್ ಪೋಲ್ ಸಮೀಕ್ಷೆಗಳನ್ನು ಪ್ರಕಟಿಸುವಂತಿಲ್ಲ ಎಂದು ಆಯೋಗ ಆದೇಶಿಸಿತ್ತು. ವಿಧಾನಸಭೆ ಚುನಾವಣೆ ಅಥವಾ ಉಪ ಚುನಾವಣೆಯ ಪ್ರತಿ ಹಂತದ ಮತದಾನ ನಡೆದ ಬಳಿಕ ಆಯಾ ಪ್ರದೇಶಕ್ಕೆ ಸಂಬಂಧಿಸಿದಂತೆ 48 ಗಂಟೆಗಳವರೆಗೂ ಎಕ್ಸಿಟ್ ಪೋಲ್ ಅಥವಾ ಬೇರೆ ಯಾವುದೇ ರೀತಿಯ ಚುನಾವಣಾ ಸಮೀಕ್ಷೆಗಳ ಫಲಿತಾಂಶ ಪ್ರಕಟಿಸುವಂತಿಲ್ಲ ಎಂದು ಚುನಾವಣಾ ಆಯೋಗದ ನಿಯಮವಿದೆ.
ಪಶ್ಚಿಮ ಬಂಗಾಳದಲ್ಲಿ 294, ತಮಿಳುನಾಡಿನಲ್ಲಿ 234, ಕೇರಳದಲ್ಲಿ 140, ಪುದುಚೇರಿಯಲ್ಲಿ 30 ಹಾಗೂ ಅಸ್ಸಾಂನಲ್ಲಿ 126 ಸ್ಥಾನಕ್ಕಾಗಿ ಚುನಾವಣೆ ನಡೆಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications