ತರಕಾರಿ ಖರೀದಿಸಿದ್ರೆ ವೈರಸ್ ಫ್ರೀ: ಈ ಮಾರುಕಟ್ಟೆಗೆ ಹೋದ್ರೆ ಕೊರೊನಾ ಪಕ್ಕಾ!
ಚೆನ್ನೈ, ಮೇ.05: ನೊವೆಲ್ ಕೊರೊನಾ ವೈರಸ್ ಸೋಂಕಿನಿಂದ ನಲುಗಿರುವ ರಾಜ್ಯಗಳ ಪಟ್ಟಿಯಲ್ಲಿ ತಮಿಳುನಾಡು ನಾಲ್ಕನೇ ಸ್ಥಾನದಲ್ಲಿದೆ. ರಾಜ್ಯ ರಾಜಧಾನಿ ಚೆನ್ನೈನಲ್ಲಿರುವ ಒಂದೇ ಒಂದು ಸೂಪರ್ ಮಾರ್ಕೆಟ್ ನಿಂದಾಗಿ ಶರವೇಗದಲ್ಲಿ ಕೊವಿಡ್-19 ಹರಡುತ್ತಿದೆ.
ತಮಿಳುನಾಡಿನ ಕುದ್ದಾಲೂರು ಪ್ರದೇಶದಲ್ಲೇ ಕನಿಷ್ಠ 122 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಸೋಮವಾರ ಪತ್ತೆಯಾದ ಸೋಂಕಿತ ಪ್ರಕರಣಗಳ ಪೈಕಿ ಬಹುಪಾಲು ಮಂದಿಗೆ ಕೊಯಂಬೀಡು ಪ್ರದೇಶದ ಮಾರುಕಟ್ಟೆಯಲ್ಲಿಯೇ ಸೋಂಕು ತಗಲಿರುವುದು ಗೊತ್ತಾಗಿದೆ.
65 ಎಕರೆ ಪ್ರದೇಶದಲ್ಲಿರುವ ಕೊಯಂಬೀಡು ಮಾರುಕಟ್ಟೆಯು ತಮಿಳುನಾಡಿನಲ್ಲಿ ಅತ್ಯಂತ ಪ್ರಸಿದ್ಧ ಮಾರುಕಟ್ಟೆಯಾಗಿದೆ. ರಾಜ್ಯದಲ್ಲಿ ಅತಿಹೆಚ್ಚು ಜನರು ಇದೇ ಮಾರುಕಟ್ಟೆಯಲ್ಲಿ ತರಕಾರಿ ಮತ್ತು ಸರಕುಗಳ ಮಾರಾಟ ಮತ್ತು ಖರೀದಿಗೆ ತೆರಳುತ್ತಾರೆ. ಇದೊಂದು ಮಾರುಕಟ್ಟೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳು ಗ್ರೀನ್ ಝೋನ್ ನಿಂದ ರೆಡ್ ಹಾಗೂ ಆರೆಂಜ್ ಝೋನ್ ಗಳಾಗಿ ಬದಲಾಗಿವೆ.

ಕೊರೊನಾ ವೈರಸ್ ಕೇಂದ್ರವಾದ ಚೆನ್ನೈನ ಮಾರುಕಟ್ಟೆ
ಚೆನ್ನೈನಲ್ಲಿರುವ ಕೊಯಂಬೀಡು ಮಾರುಕಟ್ಟೆಯು ಕೊರೊನಾ ವೈರಸ್ ಹರಡುವಿಕೆಯ ಕೇಂದ್ರ ಸ್ಥಾನವಾಗಿದೆ. ಕುದ್ದಾಲೂರ್ ನಿಂದ ದಿಂದಿಗಲ್ ಗೆ ತೆರಳಿದ ಸಾಕಷ್ಟು ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಇನ್ನೂ, 450ಕ್ಕೂ ಅಧಿಕ ಮಂದಿಯ ರಕ್ತ ಹಾಗೂ ಗಂಟಲು ದ್ರವ್ಯದ ಮಾದರಿ ತಪಾಸಣೆಗೆ ಕಳುಹಿಸಿದ್ದು, ವರದಿಗಳು ಬರಬೇಕಿದೆ.

ಕೊಯಂಬೀಡು ಮಾರುಕಟ್ಟೆಗೆ ತೆರಳಿದ 82 ಮಂದಿಗೆ ಸೋಂಕು
ಸೋಮವಾರ ಕೊಯಂಬೀಡು ಮಾರುಕಟ್ಟೆಗೆ ಭೇಟಿ ನೀಡಿದ ವಿಲ್ಲುಪುರಂ ಮೂಲದ 49 ಮಂದಿಗೆ ಕೊರೊನಾ ವೈರಸ್ ಅಂಟಿಕೊಂಡಿದೆ. ಭಾನುವಾರ ಇದೇ ಮಾರುಕಟ್ಟೆಗೆ ತೆರಳಿದ್ದ 33 ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿತ್ತು.

ರೆಡ್ ಝೋನ್ ಗಳಾಗಿ ಬದಲಾದ ಆರೆಂಜ್ ಝೋನ್!
ಕೊಯಂಬೀಡು ಮಾರುಕಟ್ಟೆ ಲಿಂಕ್ ನಿಂದಾಗಿ ಕಿತ್ತಳೆ ವಲಯದಲ್ಲಿದ್ದ ತಮಿಳುನಾಡಿದ ಮೂರು ಜಿಲ್ಲೆಗಳು ಕೆಂಪು ವಲಯಗಳಾಗಿ ಬದಲಾಗಿವೆ. ತಮಿಳುನಾಡಿನ ಕುದ್ದಾಲೂರು, ಟೆಂಕಾಸಿ ಹಾಗೂ ದಿಂಡಿಗಲ್ ಜಿಲ್ಲೆಗಳನ್ನು ಕಿತ್ತಳೆ ವಲಯದಿಂದ ಕೆಂಪು ವಲಯಕ್ಕೆ ಸೇರಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಕೆಂಪು ವಲಯಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಚೆನ್ನೈನ ಈ ಮಾರುಕಟ್ಟೆಗೆ ಹೋಗಿದ್ರೆ ತಪಾಸಣೆ ಮಾಡಿಸಿಕೊಳ್ಳಿ
ಚೆೆನ್ನೈನಲ್ಲಿ ಇರುವ ಕೊಯಂಬೀಡು ಮಾರುಕಟ್ಟೆಗೆ ಒಮ್ಮೆ ಭೇಟಿ ನೀಡಿದವರೂ ಕೂಡಾ ಎಚ್ಚರಿಕೆ ವಹಿಸಬೇಕು. ಕಡ್ಡಾಯವಾಗಿ ಕೊರೊನಾ ವೈರಸ್ ಸೋಂಕು ತಪಾಸಣೆಗೆ ಸ್ವಯಂಪ್ರೇರಿತರಾಗಿ ಮುಂದೆ ಬರಬೇಕು. ಆಯಾ ಜಿಲ್ಲಾಡಳಿತಗಳು ವೈದ್ಯಕೀಯ ತಪಾಸಣೆಗೆ ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಿವೆ ಎಂದು ತಿಳಿದು ಬಂದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications