ತಮಿಳುನಾಡಿನಲ್ಲಿ ಭೂಮಿ ಕಂಪಿಸಿದ ಗ್ರಾಮಗಳಿಗೆ ಕೇಂದ್ರದ ತಂಡ ಭೇಟಿ
ಚೆನ್ನೈ, ಡಿಸೆಂಬರ್ 30: ಭಾರತೀಯ ಭೂವೈಜ್ಞಾನಿಕ ಸಮೀಕ್ಷೆಯ (ಜಿಎಸ್ಐ) ಹಿರಿಯ ಭೂವಿಜ್ಞಾನಿಗಳು ಮತ್ತು ವೆಲ್ಲೂರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ವಿಐಟಿ) ಭೂವಿಜ್ಞಾನದ ಪ್ರಾಧ್ಯಾಪಕರನ್ನು ಒಳಗೊಂಡ ಮೂವರು ಸದಸ್ಯರ ಕೇಂದ್ರ ವಿಪತ್ತು ನಿರ್ವಹಣಾ ತಂಡವು ವೆಲ್ಲೂರಿನ ಪೆರ್ನಂಬಟ್ ಪಟ್ಟಣದಲ್ಲಿ ಭೂಕಂಪದಿಂದ ಹಾನಿಗೊಳಗಾದ ಗ್ರಾಮಗಳ ಪ್ರಾಥಮಿಕ ಸಮೀಕ್ಷೆಯನ್ನು ನಡೆಸಿದೆ.
ಕಳೆದ ವಾರದಿಂದ ಪೆರ್ನಂಬಟ್ ಪಟ್ಟಣದ ಅತಿ ಹೆಚ್ಚು ಹಾನಿಗೊಳಗಾದ ಕುಗ್ರಾಮವಾದ ತಾರಿಕಾಡು ಗ್ರಾಮದಲ್ಲಿ ಹೈದ್ರಾಬಾದ್ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆಯ ಸಹಾಯಕ ಅನಿಮೇಶ್ ಠಾಕೂರ್, ಚೆನ್ನೈ ಜಿಎಸ್ಐನ ಹಿರಿಯ ಭೂವಿಜ್ಞಾನಿ ಶಿವಕುಮಾರ್, ಮತ್ತು ಜಿ.ಪಿ. ವಿಐಟಿಯ ಭೂವಿಜ್ಞಾನ ವಿಭಾಗದ ಪ್ರಾಧ್ಯಾಪಕ ಗಣಪತಿಯವರ ತಂಡವು ಸಮೀಕ್ಷೆ ನಡೆಸಿತು. ಗ್ರಾಮದ ನಿವಾಸಿಗಳೊಂದಿಗೆ ಸಂವಾದ ನಡೆಸಿದ ತಂಡವು ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿತು.
ತಮಿಳುನಾಡಿನ ವೆಲ್ಲೂರಿನಲ್ಲಿ ಡಿಸೆಂಬರ್ 23ರ ಗುರುವಾರ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.5ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ (NCS) ತಿಳಿಸಿತ್ತು. ತಮಿಳುನಾಡು ವೆಲ್ಲೂರಿನ ಪಶ್ಚಿಮ-ವಾಯವ್ಯಕ್ಕೆ 50 ಕಿಮೀ ದೂರದಲ್ಲಿ ಭೂಮಿ ಕಂಪಿಸಿರುವ ಬಗ್ಗೆ ತಿಳಿದು ಬಂದಿತ್ತು. ಉತ್ತರ ವೆಲ್ಲೂರಿನ ಕೆಲವು ಭಾಗಗಳಲ್ಲಿ ಗುರುವಾರ ಮಧ್ಯಾಹ್ನ 3:14ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಇತ್ತ ಚಿತ್ತೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪನದ ಅನುಭವವಾಗಿತ್ತು.

"ಮುಂಬರುವ ದಿನಗಳಲ್ಲಿ ಭೂಕಂಪ ಪೀಡಿತ ಪ್ರದೇಶದ ಆಯ್ದ ಸ್ಥಳಗಳಲ್ಲಿ ನಾವು ಉಪಕರಣಗಳ ಅಧ್ಯಯನವನ್ನು ನಡೆಸುತ್ತೇವೆ. ಈ ಸ್ಥಳಗಳ ಧ್ವನಿಮುದ್ರಿಕೆಗಳ ಆಧಾರದ ಮೇಲೆ, ಕಳೆದ ವಾರ ಈ ಗ್ರಾಮಗಳಲ್ಲಿ ಸಂಭವಿಸಿದ ಘಟನೆಗಳ ಕಾರಣವನ್ನು ತಿಳಿಯುತ್ತೇವೆ," ಎಂದು ಪ್ರೊಫೆಸರ್ ಗಣಪತಿಯವರು ತಿಳಿಸಿದ್ದಾರೆ.
ಕಳೆದ 2017ರಿಂದ ನಾಲ್ಕು ವರ್ಷಗಳಲ್ಲಿ ಎರಡನೇ ಬಾರಿ ಕೇಂದ್ರೀಯ ವಿಪತ್ತು ನಿರ್ವಹಣೆ ತಂಡವು ಈ ಪ್ರದೇಶಕ್ಕೆ ಭೇಟಿ ನೀಡುತ್ತಿದೆ. ಈ ಮೊದಲು ತಿರುಪತ್ತೂರ್, ಅಂಬೂರ್, ವಾಣಿಯಂಬಾಡಿ ಮತ್ತು ಆಂಧ್ರಪ್ರದೇಶದಲ್ಲಿ ಸುಮಾರು 135 ಕಿ.ಮೀ ಪ್ರಯಾಣಿಸುವ ಅಸ್ತಿತ್ವದಲ್ಲಿರುವ ದೋಷದ ಪುನಃ ಸಕ್ರಿಯಗೊಳಿಸುವಿಕೆಯು ಭೂಕಂಪಕ್ಕೆ ಕಾರಣವಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ 40ಕ್ಕೂ ಹೆಚ್ಚು ಮನೆಗಳಿಗೆ ಹಾನಿ:
ಕಳೆದ ಡಿಸೆಂಬರ್ 23 ಮತ್ತು 25ರ ನಡುವೆ ಪೆರ್ನಂಬಟ್ ಪ್ರದೇಶದಲ್ಲಿ ಭೂಮಿ ಕಂಪಿಸಿದ ಹಿನ್ನೆಲೆ 40ಕ್ಕೂ ಹೆಚ್ಚು ಮನೆಗಳನ್ನು ಹಾನಿಯಾಗಿತ್ತು. ನೆರೆಯ ಚಿತ್ತೂರು ಜಿಲ್ಲೆಯಲ್ಲೂ ಡಿಸೆಂಬರ್ 23ರಂದು ಭೂಕಂಪ ಸಂಭವಿಸಿತ್ತು. ತಿರುಪತ್ತೂರಿನ ಅಂಬೂರು ತಾಲೂಕಿನಲ್ಲಿ ಮೊದಲ ಬಾರಿಗೆ 3.6 ತೀವ್ರತೆಯ ಭೂಕಂಪಗಳನ್ನು ದಾಖಲಿಸಿದ ನಂತರ ದೇಶದಲ್ಲಿ ಭೂಕಂಪದ ಚಟುವಟಿಕೆಯ ಮೇಲ್ವಿಚಾರಣೆ ನಡೆಸಲು ಆರಂಭಿಸಲಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications